Homeಮುಖಪುಟಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಹರಿಯಾಣ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ, ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾನೂನುಗಳನ್ನು ಬೆಂಬಲಿಸುತ್ತಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್‌ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಪೊಲೀಸರು ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಹರಿಯಾಣದ ಹಿಸಾರ್‌ನಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಜಟಾಪಟಿ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲೂ ಕಾಣಿಸಲು ಶುರುವಾದ ’ಲಸಿಕೆ ಸಂಗ್ರಹವಿಲ್ಲ’ ಬೋರ್ಡ್‌ಗಳು!

ಹರಿಯಾಣದ ಹಿಸ್ಸಾರ್‌ನಲ್ಲಿ 500 ಬೆಡ್‌ಗಳ ಕೊರೊನಾ ಸೆಂಟರ್‌ ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್‌ ಜಿಲ್ಲೆಗೆ  ಆಗಮಿಸಿದ್ದರು. ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟವನ್ನು ವಿರೋಧಿಸುತ್ತಲೇ ಬಂದಿರುವ ಖಟ್ಟರ್‌ ಅವರನ್ನು ಈವರೆಗೂ ಜಿಲ್ಲೆಗೆ ಬರಲು ರೈತರು ಅವಕಾಶ ನೀಡಿಲ್ಲ.

“ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿ‌ದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.

ಹರಿಯಾಣದಲ್ಲಿ ಕಳೆದ ಎರಡು ವಾರಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿ ಮೇ 24 ರವರೆಗೆ ಅದನ್ನು ಇನ್ನೊಂದು ವಾರ ವಿಸ್ತರಿಸಿದೆ. ಇವುಗಳ ನಡುವೆ ಕೊರೊನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್ ಭಾನುವಾತ ಹಿಸಾರ್‌ಗೆ ಬಂದಿದ್ದರು.


ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗೆ ಕಾಂಗ್ರೆಸ್‌ನಿಂದ 100 ಕೋಟಿ ನೆರವು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....