Homeಮುಖಪುಟಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

ಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

- Advertisement -
- Advertisement -

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀತಿಯನ್ನು ಪರಿಷ್ಕರಿಸಲು ಸರ್ಕಾರವನ್ನು ಒತ್ತಾಯಿಸುತ್ತಿರುವ ರೈತರು ಬುಧವಾರ ಬೆಳಿಗ್ಗೆ ಸಂಸತ್ತಿನ ಸಂಕೀರ್ಣದಲ್ಲಿ ಕಾಂಗ್ರೆಸ್ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರು ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಸುಖಜಿಂದರ್ ಸಿಂಗ್ ರಾಂಧವಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ರೈತರನ್ನು ಒಳಗೆ ಬಿಡದ ಕಾರಣ ಸಭೆಗೂ ಮುನ್ನವೇ ಗೊಂದಲ ಉಂಟಾಯಿತು. “ನಾವು ಅವರನ್ನು ಆಹ್ವಾನಿಸಿದ್ದೇವೆ.. ಆದರೆ, ಅವರು ಸಂಸತ್ತಿನ ಒಳಗೆ ಅವರನ್ನು ಅನುಮತಿಸುತ್ತಿಲ್ಲ. ಬಹುಶಃ ಅವರು ರೈತರಾಗಿರುವ ಕಾರಣಕ್ಕೆ ಇರಬಹುದು.. ಇದಕ್ಕೆ ಕಾರಣವನ್ನು ನೀವು ಪ್ರಧಾನಿಯವರನ್ನು ಕೇಳಬೇಕಾಗುತ್ತದೆ..” ಎಂದು ರಾಹುಲ್ ಗಾಂಧಿ ಹೇಳಿದರು.

“ರಾಹುಲ್ ಗಾಂಧಿಯವರು ಸಂಸತ್ತಿನ ಒಳಗೆ ರೈತರ ಪರವಾಗಿ ಧ್ವನಿ ಎತ್ತುತ್ತಾರೆ…” ಎಂದು ಸಭೆಯ ನಂತರ ವಾರಿಂಗ್ ತಿಳಿಸಿದರು. ರೈತರು ದೆಹಲಿಯಲ್ಲಿ ಮತ್ತೊಂದು ಮೆರವಣಿಗೆಯನ್ನು ಯೋಜಿಸುತ್ತಿದ್ದಾರೆ ಎಂಬ ವರದಿಗಳ ಮೇಲೆ, ಅವರು ದೆಹಲಿಗೆ ಬಂದು ಪ್ರತಿಭಟಿಸಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಖಾಸಗಿ ಸದಸ್ಯರ ಮಸೂದೆ ಅಗತ್ಯವಿದ್ದರೆ ನಾವು ಅದನ್ನು ಸಹ ತರುತ್ತೇವೆ ಎಂದರು.

ರೈತರಲ್ಲಿ ಒಬ್ಬರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, “ಸರ್ಕಾರ ಇದುವರೆಗೆ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ; ಸ್ವಾಮಿನಾಥನ್ ವರದಿ ಅನುಷ್ಠಾನ ಅತ್ಯಗತ್ಯ. ನಾವು ದೆಹಲಿ ಕಡೆಗೆ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ..” ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು, ರೈತರು ತಮ್ಮ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದರು. ದೀರ್ಘಾವಧಿಯ ಬೇಡಿಕೆಗಳನ್ನು ಈಡೇರಿಸಲು ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಲು ಕೇಳಿಕೊಂಡರು. ಎಂಎಸ್‌ಪಿಯನ್ನು ಪರಿಷ್ಕರಿಸಲು ಮತ್ತು ಕಾನೂನು ಬೆಂಬಲವನ್ನು ಖಚಿತಪಡಿಸಿಕೊಳ್ಳುವ ಈ ಬೇಡಿಕೆಗಳು 2020 ರಲ್ಲಿ ಪ್ರಾರಂಭವಾದಾಗಿನಿಂದ ಅವರ ಪ್ರತಿಭಟನೆಯ ಮುಖ್ಯ ಭಾಗವಾಗಿದೆ.

ದೇಶದಾದ್ಯಂತದ ರೈತ ಸಂಘಗಳು ಎಂಎಸ್‌ಪಿಯನ್ನು ಬಯಸುತ್ತವೆ, ಸ್ವಾಮಿನಾಥನ್ ಆಯೋಗದ ಸಿ2+50 ಸೂತ್ರವನ್ನು ಆಧರಿಸಿರಬೇಕು, ಇದು ಬಂಡವಾಳದ ವೆಚ್ಚ ಮತ್ತು ಬೆಂಬಲ ಬೆಲೆಯನ್ನು ಲೆಕ್ಕಾಚಾರ ಮಾಡುವಾಗ ಭೂಮಿ ಬಾಡಿಗೆಯೂ ಸೇರಿರುತ್ತದೆ. ಆದರೆ, ಈಗಿರುವ ಎ2+ಎಫ್‌ಎಲ್‌+50 ಶೇಕಡಾ ವಿಧಾನವನ್ನು ಕೈಬಿಡಲು ಸರ್ಕಾರ ಹಿಂದೇಟು ಹಾಕುತ್ತಿದೆ.

ಸೂತ್ರವನ್ನು ಬದಲಾಯಿಸುವುದರ ಹೊರತಾಗಿ, ರೈತರು ಈ ಖರೀದಿ ಬೆಲೆಗೆ ಕಾನೂನು ಬೆಂಬಲವನ್ನು ಬಯಸುತ್ತಾರೆ; ಪ್ರಸ್ತುತ ಸರ್ಕಾರವು ಭತ್ತದ ಬೆಳೆಗೆ 10 ಪ್ರತಿಶತವನ್ನು ಮೂಲ ಬೆಲೆಗೆ ಖರೀದಿಸಲು ನಿರ್ಬಂಧವನ್ನು ಹೊಂದಿಲ್ಲ.

ಇದನ್ನೂ ಓದಿ; ನೇಪಾಳ ವಿಮಾನ ನಿಲ್ದಾಣದಲ್ಲಿ ವಿಮಾನ ಪತನ; 18 ಜನ ಪ್ರಯಾಣಿಕರು ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...