Homeಮುಖಪುಟಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

ಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

- Advertisement -
- Advertisement -

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀತಿಯನ್ನು ಪರಿಷ್ಕರಿಸಲು ಸರ್ಕಾರವನ್ನು ಒತ್ತಾಯಿಸುತ್ತಿರುವ ರೈತರು ಬುಧವಾರ ಬೆಳಿಗ್ಗೆ ಸಂಸತ್ತಿನ ಸಂಕೀರ್ಣದಲ್ಲಿ ಕಾಂಗ್ರೆಸ್ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರು ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಸುಖಜಿಂದರ್ ಸಿಂಗ್ ರಾಂಧವಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ರೈತರನ್ನು ಒಳಗೆ ಬಿಡದ ಕಾರಣ ಸಭೆಗೂ ಮುನ್ನವೇ ಗೊಂದಲ ಉಂಟಾಯಿತು. “ನಾವು ಅವರನ್ನು ಆಹ್ವಾನಿಸಿದ್ದೇವೆ.. ಆದರೆ, ಅವರು ಸಂಸತ್ತಿನ ಒಳಗೆ ಅವರನ್ನು ಅನುಮತಿಸುತ್ತಿಲ್ಲ. ಬಹುಶಃ ಅವರು ರೈತರಾಗಿರುವ ಕಾರಣಕ್ಕೆ ಇರಬಹುದು.. ಇದಕ್ಕೆ ಕಾರಣವನ್ನು ನೀವು ಪ್ರಧಾನಿಯವರನ್ನು ಕೇಳಬೇಕಾಗುತ್ತದೆ..” ಎಂದು ರಾಹುಲ್ ಗಾಂಧಿ ಹೇಳಿದರು.

“ರಾಹುಲ್ ಗಾಂಧಿಯವರು ಸಂಸತ್ತಿನ ಒಳಗೆ ರೈತರ ಪರವಾಗಿ ಧ್ವನಿ ಎತ್ತುತ್ತಾರೆ…” ಎಂದು ಸಭೆಯ ನಂತರ ವಾರಿಂಗ್ ತಿಳಿಸಿದರು. ರೈತರು ದೆಹಲಿಯಲ್ಲಿ ಮತ್ತೊಂದು ಮೆರವಣಿಗೆಯನ್ನು ಯೋಜಿಸುತ್ತಿದ್ದಾರೆ ಎಂಬ ವರದಿಗಳ ಮೇಲೆ, ಅವರು ದೆಹಲಿಗೆ ಬಂದು ಪ್ರತಿಭಟಿಸಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಖಾಸಗಿ ಸದಸ್ಯರ ಮಸೂದೆ ಅಗತ್ಯವಿದ್ದರೆ ನಾವು ಅದನ್ನು ಸಹ ತರುತ್ತೇವೆ ಎಂದರು.

ರೈತರಲ್ಲಿ ಒಬ್ಬರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, “ಸರ್ಕಾರ ಇದುವರೆಗೆ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ; ಸ್ವಾಮಿನಾಥನ್ ವರದಿ ಅನುಷ್ಠಾನ ಅತ್ಯಗತ್ಯ. ನಾವು ದೆಹಲಿ ಕಡೆಗೆ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ..” ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು, ರೈತರು ತಮ್ಮ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದರು. ದೀರ್ಘಾವಧಿಯ ಬೇಡಿಕೆಗಳನ್ನು ಈಡೇರಿಸಲು ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಲು ಕೇಳಿಕೊಂಡರು. ಎಂಎಸ್‌ಪಿಯನ್ನು ಪರಿಷ್ಕರಿಸಲು ಮತ್ತು ಕಾನೂನು ಬೆಂಬಲವನ್ನು ಖಚಿತಪಡಿಸಿಕೊಳ್ಳುವ ಈ ಬೇಡಿಕೆಗಳು 2020 ರಲ್ಲಿ ಪ್ರಾರಂಭವಾದಾಗಿನಿಂದ ಅವರ ಪ್ರತಿಭಟನೆಯ ಮುಖ್ಯ ಭಾಗವಾಗಿದೆ.

ದೇಶದಾದ್ಯಂತದ ರೈತ ಸಂಘಗಳು ಎಂಎಸ್‌ಪಿಯನ್ನು ಬಯಸುತ್ತವೆ, ಸ್ವಾಮಿನಾಥನ್ ಆಯೋಗದ ಸಿ2+50 ಸೂತ್ರವನ್ನು ಆಧರಿಸಿರಬೇಕು, ಇದು ಬಂಡವಾಳದ ವೆಚ್ಚ ಮತ್ತು ಬೆಂಬಲ ಬೆಲೆಯನ್ನು ಲೆಕ್ಕಾಚಾರ ಮಾಡುವಾಗ ಭೂಮಿ ಬಾಡಿಗೆಯೂ ಸೇರಿರುತ್ತದೆ. ಆದರೆ, ಈಗಿರುವ ಎ2+ಎಫ್‌ಎಲ್‌+50 ಶೇಕಡಾ ವಿಧಾನವನ್ನು ಕೈಬಿಡಲು ಸರ್ಕಾರ ಹಿಂದೇಟು ಹಾಕುತ್ತಿದೆ.

ಸೂತ್ರವನ್ನು ಬದಲಾಯಿಸುವುದರ ಹೊರತಾಗಿ, ರೈತರು ಈ ಖರೀದಿ ಬೆಲೆಗೆ ಕಾನೂನು ಬೆಂಬಲವನ್ನು ಬಯಸುತ್ತಾರೆ; ಪ್ರಸ್ತುತ ಸರ್ಕಾರವು ಭತ್ತದ ಬೆಳೆಗೆ 10 ಪ್ರತಿಶತವನ್ನು ಮೂಲ ಬೆಲೆಗೆ ಖರೀದಿಸಲು ನಿರ್ಬಂಧವನ್ನು ಹೊಂದಿಲ್ಲ.

ಇದನ್ನೂ ಓದಿ; ನೇಪಾಳ ವಿಮಾನ ನಿಲ್ದಾಣದಲ್ಲಿ ವಿಮಾನ ಪತನ; 18 ಜನ ಪ್ರಯಾಣಿಕರು ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...