Homeಮುಖಪುಟತೀವ್ರಗೊಂಡ ರೈತ ಹೋರಾಟ : ಇಂದು 'ಪಂಜಾಬ್ ಬಂದ್'

ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

- Advertisement -
- Advertisement -

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ ಜತ್ತನ್ ಟೋಲ್ ಪ್ಲಾಝಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ದ್ವಾರದ ಬಳಿ ಜಮಾಯಿಸಲು ಪ್ರಾರಂಭಿಸಿದ್ದು, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದ್ದಾರೆ.

ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ. ಆಸ್ಪತ್ರೆ, ವಿಮಾನ ನಿಲ್ದಾಣ, ಮದುವೆ, ಸಂದರ್ಶನ ಇತ್ಯಾದಿಗಳಿಗೆ ತೆರಳುವವರಿಗೆ ಓಡಾಡಲು ಅವಕಾಶ ನೀಡಲಾಗುವುದು. ಶಾಂತಿಯುತವಾಗಿ ಬಂದ್ ನಡೆಯಲಿದೆ ಎಂದು ಸರ್ವಾನ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಇಂದಿಗೆ (ಡಿ.30) 35ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಇಲ್ಲಿಯವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ, ಸರ್ಕಾರ ಸೇರಿದಂತೆ ಯಾರ ಮನವೊಲಿಕೆಯೂ ಫಲ ಕೊಟ್ಟಿಲ್ಲ.

ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಲುವಾಗಿ ಮನವೊಲಿಸಲು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ಅಗತ್ಯವಿದ್ದರೆ ಕೇಂದ್ರದಿಂದ ಲಾಜಿಸ್ಟಿಕ್ ಬೆಂಬಲವನ್ನು ಪಡೆಯಲು ಸೂಚಿಸಿದೆ.

ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಅವರು ಪಟ್ಟು ಹಿಡಿದಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಕ್ಷೀಣಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ರೈತರ ಸಾಲ ಮನ್ನಾ, ಪಿಂಚಣಿ, ವಿದ್ಯುತ್ ದರಗಳಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂದು ಆಗ್ರಹಿಸಿ ಈ ವರ್ಷದ ಆರಂಭದಿಂದ ರೈತರು ಪಂಜಾಬ್ -ಹರಿಯಾಣ ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ವರ್ಷದ ಫೆಬ್ರವರಿ 13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸದಂತೆ ಹರಿಯಾಣ ಸರ್ಕಾರ ಶಂಭು, ಖನೌರಿ ಗಡಿಯಲ್ಲಿ ತಡೆದಿತ್ತು. ಹಾಗಾಗಿ, ರೈತರು ಗಡಿಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಎರಡ್ಮೂರು ಬಾರಿ ಪ್ರತಿಭಟನಾ ಸ್ಥಳದಿಂದ ದೆಹಲಿಗೆ ಮೆರವಣಿಗೆ ಪುನರಾರಂಭಿಸಲು ಪ್ರಯತ್ನಿಸಿದರೂ, ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ಅಶ್ರುವಾಯು, ಜಲಫಿರಂಗಿ, ಲಾಠಿ ಏಟಿನ ಮೂಲಕ ರೈತರನ್ನು ತಡೆದಿದ್ದಾರೆ.

ಕಳೆದ ಡಿಸೆಂಬರ್ 6 ಮತ್ತು 14 ರ ನಡುವೆ ಮೂರು ಬಾರಿ ಕಾಲ್ನಡಿಗೆಯ ಮೂಲಕ ದೆಹಲಿಗೆ ಮೆರವಣಿಗೆ ಮಾಡಲು 101 ರೈತರ ತಂಡ ಪ್ರಯತ್ನಿಸಿತ್ತು. ಆದರೆ, ಹರಿಯಾಣದ ಪೊಲೀಸರು ಅದಕ್ಕೆ ಅವಕಾಶ ನೀಡಿಲ್ಲ.

ಜನವರಿ 4ರಂದು ಖನೌರಿಯಲ್ಲಿ ಕಿಸಾನ್ ಮಹಾಪಂಚಾಯತ್

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಜನವರಿ 4ರಂದು ‘ಕಿಸಾನ್ ಮಹಾಪಂಚಾಯತ್‌’ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ.

ಖನೌರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ನಾಯಕ ಅಭಿಮನ್ಯು ಕೋಹರ್ ಅವರು, ಸುಮಾರು ನಾಲ್ಕು ದಶಕಗಳಿಂದ ರೈತಪರ ಹೋರಾಟ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ರೈತರನ್ನು ಭೇಟಿಯಾಗಲು ಇಚ್ಚಿಸಿದ್ದಾರೆ. ಅವರ ಆಕಾಂಕ್ಷೆಯನ್ನು ರೈತ ಸಂಘಟನೆಗಳು ಗೌರವಿಸಿದ್ದು, ಜನವರಿ 4ರಂದು ಮಹಾಪಂಚಾಯತ್ ನಡೆಸುವುದಾಗಿ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...