Homeಮುಖಪುಟತೀವ್ರಗೊಂಡ ರೈತ ಹೋರಾಟ : ಇಂದು 'ಪಂಜಾಬ್ ಬಂದ್'

ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

- Advertisement -
- Advertisement -

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ ಜತ್ತನ್ ಟೋಲ್ ಪ್ಲಾಝಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ದ್ವಾರದ ಬಳಿ ಜಮಾಯಿಸಲು ಪ್ರಾರಂಭಿಸಿದ್ದು, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದ್ದಾರೆ.

ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ. ಆಸ್ಪತ್ರೆ, ವಿಮಾನ ನಿಲ್ದಾಣ, ಮದುವೆ, ಸಂದರ್ಶನ ಇತ್ಯಾದಿಗಳಿಗೆ ತೆರಳುವವರಿಗೆ ಓಡಾಡಲು ಅವಕಾಶ ನೀಡಲಾಗುವುದು. ಶಾಂತಿಯುತವಾಗಿ ಬಂದ್ ನಡೆಯಲಿದೆ ಎಂದು ಸರ್ವಾನ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಇಂದಿಗೆ (ಡಿ.30) 35ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಇಲ್ಲಿಯವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ, ಸರ್ಕಾರ ಸೇರಿದಂತೆ ಯಾರ ಮನವೊಲಿಕೆಯೂ ಫಲ ಕೊಟ್ಟಿಲ್ಲ.

ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಲುವಾಗಿ ಮನವೊಲಿಸಲು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ಅಗತ್ಯವಿದ್ದರೆ ಕೇಂದ್ರದಿಂದ ಲಾಜಿಸ್ಟಿಕ್ ಬೆಂಬಲವನ್ನು ಪಡೆಯಲು ಸೂಚಿಸಿದೆ.

ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಅವರು ಪಟ್ಟು ಹಿಡಿದಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಕ್ಷೀಣಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ರೈತರ ಸಾಲ ಮನ್ನಾ, ಪಿಂಚಣಿ, ವಿದ್ಯುತ್ ದರಗಳಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂದು ಆಗ್ರಹಿಸಿ ಈ ವರ್ಷದ ಆರಂಭದಿಂದ ರೈತರು ಪಂಜಾಬ್ -ಹರಿಯಾಣ ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ವರ್ಷದ ಫೆಬ್ರವರಿ 13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸದಂತೆ ಹರಿಯಾಣ ಸರ್ಕಾರ ಶಂಭು, ಖನೌರಿ ಗಡಿಯಲ್ಲಿ ತಡೆದಿತ್ತು. ಹಾಗಾಗಿ, ರೈತರು ಗಡಿಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಎರಡ್ಮೂರು ಬಾರಿ ಪ್ರತಿಭಟನಾ ಸ್ಥಳದಿಂದ ದೆಹಲಿಗೆ ಮೆರವಣಿಗೆ ಪುನರಾರಂಭಿಸಲು ಪ್ರಯತ್ನಿಸಿದರೂ, ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ಅಶ್ರುವಾಯು, ಜಲಫಿರಂಗಿ, ಲಾಠಿ ಏಟಿನ ಮೂಲಕ ರೈತರನ್ನು ತಡೆದಿದ್ದಾರೆ.

ಕಳೆದ ಡಿಸೆಂಬರ್ 6 ಮತ್ತು 14 ರ ನಡುವೆ ಮೂರು ಬಾರಿ ಕಾಲ್ನಡಿಗೆಯ ಮೂಲಕ ದೆಹಲಿಗೆ ಮೆರವಣಿಗೆ ಮಾಡಲು 101 ರೈತರ ತಂಡ ಪ್ರಯತ್ನಿಸಿತ್ತು. ಆದರೆ, ಹರಿಯಾಣದ ಪೊಲೀಸರು ಅದಕ್ಕೆ ಅವಕಾಶ ನೀಡಿಲ್ಲ.

ಜನವರಿ 4ರಂದು ಖನೌರಿಯಲ್ಲಿ ಕಿಸಾನ್ ಮಹಾಪಂಚಾಯತ್

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಜನವರಿ 4ರಂದು ‘ಕಿಸಾನ್ ಮಹಾಪಂಚಾಯತ್‌’ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ.

ಖನೌರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ನಾಯಕ ಅಭಿಮನ್ಯು ಕೋಹರ್ ಅವರು, ಸುಮಾರು ನಾಲ್ಕು ದಶಕಗಳಿಂದ ರೈತಪರ ಹೋರಾಟ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ರೈತರನ್ನು ಭೇಟಿಯಾಗಲು ಇಚ್ಚಿಸಿದ್ದಾರೆ. ಅವರ ಆಕಾಂಕ್ಷೆಯನ್ನು ರೈತ ಸಂಘಟನೆಗಳು ಗೌರವಿಸಿದ್ದು, ಜನವರಿ 4ರಂದು ಮಹಾಪಂಚಾಯತ್ ನಡೆಸುವುದಾಗಿ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...