Homeಮುಖಪುಟತೀವ್ರಗೊಂಡ ರೈತ ಹೋರಾಟ : ಇಂದು 'ಪಂಜಾಬ್ ಬಂದ್'

ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

- Advertisement -
- Advertisement -

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ ಜತ್ತನ್ ಟೋಲ್ ಪ್ಲಾಝಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ದ್ವಾರದ ಬಳಿ ಜಮಾಯಿಸಲು ಪ್ರಾರಂಭಿಸಿದ್ದು, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದ್ದಾರೆ.

ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ. ಆಸ್ಪತ್ರೆ, ವಿಮಾನ ನಿಲ್ದಾಣ, ಮದುವೆ, ಸಂದರ್ಶನ ಇತ್ಯಾದಿಗಳಿಗೆ ತೆರಳುವವರಿಗೆ ಓಡಾಡಲು ಅವಕಾಶ ನೀಡಲಾಗುವುದು. ಶಾಂತಿಯುತವಾಗಿ ಬಂದ್ ನಡೆಯಲಿದೆ ಎಂದು ಸರ್ವಾನ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಇಂದಿಗೆ (ಡಿ.30) 35ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಇಲ್ಲಿಯವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ, ಸರ್ಕಾರ ಸೇರಿದಂತೆ ಯಾರ ಮನವೊಲಿಕೆಯೂ ಫಲ ಕೊಟ್ಟಿಲ್ಲ.

ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಲುವಾಗಿ ಮನವೊಲಿಸಲು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ಅಗತ್ಯವಿದ್ದರೆ ಕೇಂದ್ರದಿಂದ ಲಾಜಿಸ್ಟಿಕ್ ಬೆಂಬಲವನ್ನು ಪಡೆಯಲು ಸೂಚಿಸಿದೆ.

ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಅವರು ಪಟ್ಟು ಹಿಡಿದಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಕ್ಷೀಣಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ರೈತರ ಸಾಲ ಮನ್ನಾ, ಪಿಂಚಣಿ, ವಿದ್ಯುತ್ ದರಗಳಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂದು ಆಗ್ರಹಿಸಿ ಈ ವರ್ಷದ ಆರಂಭದಿಂದ ರೈತರು ಪಂಜಾಬ್ -ಹರಿಯಾಣ ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ವರ್ಷದ ಫೆಬ್ರವರಿ 13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸದಂತೆ ಹರಿಯಾಣ ಸರ್ಕಾರ ಶಂಭು, ಖನೌರಿ ಗಡಿಯಲ್ಲಿ ತಡೆದಿತ್ತು. ಹಾಗಾಗಿ, ರೈತರು ಗಡಿಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಎರಡ್ಮೂರು ಬಾರಿ ಪ್ರತಿಭಟನಾ ಸ್ಥಳದಿಂದ ದೆಹಲಿಗೆ ಮೆರವಣಿಗೆ ಪುನರಾರಂಭಿಸಲು ಪ್ರಯತ್ನಿಸಿದರೂ, ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ಅಶ್ರುವಾಯು, ಜಲಫಿರಂಗಿ, ಲಾಠಿ ಏಟಿನ ಮೂಲಕ ರೈತರನ್ನು ತಡೆದಿದ್ದಾರೆ.

ಕಳೆದ ಡಿಸೆಂಬರ್ 6 ಮತ್ತು 14 ರ ನಡುವೆ ಮೂರು ಬಾರಿ ಕಾಲ್ನಡಿಗೆಯ ಮೂಲಕ ದೆಹಲಿಗೆ ಮೆರವಣಿಗೆ ಮಾಡಲು 101 ರೈತರ ತಂಡ ಪ್ರಯತ್ನಿಸಿತ್ತು. ಆದರೆ, ಹರಿಯಾಣದ ಪೊಲೀಸರು ಅದಕ್ಕೆ ಅವಕಾಶ ನೀಡಿಲ್ಲ.

ಜನವರಿ 4ರಂದು ಖನೌರಿಯಲ್ಲಿ ಕಿಸಾನ್ ಮಹಾಪಂಚಾಯತ್

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಜನವರಿ 4ರಂದು ‘ಕಿಸಾನ್ ಮಹಾಪಂಚಾಯತ್‌’ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ.

ಖನೌರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ನಾಯಕ ಅಭಿಮನ್ಯು ಕೋಹರ್ ಅವರು, ಸುಮಾರು ನಾಲ್ಕು ದಶಕಗಳಿಂದ ರೈತಪರ ಹೋರಾಟ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ರೈತರನ್ನು ಭೇಟಿಯಾಗಲು ಇಚ್ಚಿಸಿದ್ದಾರೆ. ಅವರ ಆಕಾಂಕ್ಷೆಯನ್ನು ರೈತ ಸಂಘಟನೆಗಳು ಗೌರವಿಸಿದ್ದು, ಜನವರಿ 4ರಂದು ಮಹಾಪಂಚಾಯತ್ ನಡೆಸುವುದಾಗಿ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...