Homeಮುಖಪುಟತೀವ್ರಗೊಂಡ ರೈತ ಹೋರಾಟ : ಇಂದು 'ಪಂಜಾಬ್ ಬಂದ್'

ತೀವ್ರಗೊಂಡ ರೈತ ಹೋರಾಟ : ಇಂದು ‘ಪಂಜಾಬ್ ಬಂದ್’

- Advertisement -
- Advertisement -

ಕೇಂದ್ರ ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆ, ರೈತ ಸಂಘಟನೆಗಳು ಇಂದು (ಡಿ.30) ‘ಪಂಜಾಬ್ ಬಂದ್‌’ಗೆ ಕರೆಕೊಟ್ಟಿದ್ದು, ಬೆಳಿಗ್ಗೆಯೇ ಹಲವೆಡೆ ರಸ್ತೆಗಳನ್ನು ಮುಚ್ಚಿ ಪ್ರತಿಭಟಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಬಂದ್ ಮಾಡಲು ರೈತರು ತೀರ್ಮಾನಿಸಿದ್ದಾರೆ. ಇಂದು ಬೆಳಿಗ್ಗೆ ಧರೇರಿ ಜತ್ತನ್ ಟೋಲ್ ಪ್ಲಾಝಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ದ್ವಾರದ ಬಳಿ ಜಮಾಯಿಸಲು ಪ್ರಾರಂಭಿಸಿದ್ದು, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದ್ದಾರೆ.

ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ. ಆಸ್ಪತ್ರೆ, ವಿಮಾನ ನಿಲ್ದಾಣ, ಮದುವೆ, ಸಂದರ್ಶನ ಇತ್ಯಾದಿಗಳಿಗೆ ತೆರಳುವವರಿಗೆ ಓಡಾಡಲು ಅವಕಾಶ ನೀಡಲಾಗುವುದು. ಶಾಂತಿಯುತವಾಗಿ ಬಂದ್ ನಡೆಯಲಿದೆ ಎಂದು ಸರ್ವಾನ್ ಸಿಂಗ್ ತಿಳಿಸಿದ್ದಾರೆ.

ಈ ನಡುವೆ 70 ವರ್ಷ ವಯಸ್ಸಿನ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ ಇಂದಿಗೆ (ಡಿ.30) 35ನೇ ದಿನಕ್ಕೆ ಕಾಲಿಟ್ಟಿದೆ. ದಲ್ಲೆವಾಲ್ ಇಲ್ಲಿಯವರೆಗೆ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ. ನ್ಯಾಯಾಲಯ, ಸರ್ಕಾರ ಸೇರಿದಂತೆ ಯಾರ ಮನವೊಲಿಕೆಯೂ ಫಲ ಕೊಟ್ಟಿಲ್ಲ.

ದಲ್ಲೆವಾಲ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಲುವಾಗಿ ಮನವೊಲಿಸಲು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ಅಗತ್ಯವಿದ್ದರೆ ಕೇಂದ್ರದಿಂದ ಲಾಜಿಸ್ಟಿಕ್ ಬೆಂಬಲವನ್ನು ಪಡೆಯಲು ಸೂಚಿಸಿದೆ.

ರೈತರ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ನೀಡುವವರೆಗೂ ಉಪವಾಸ ಮುರಿಯುವುದಿಲ್ಲ ಎಂದು ದಲ್ಲೆವಾಲ್ ಅವರು ಪಟ್ಟು ಹಿಡಿದಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಕ್ಷೀಣಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ರೈತರ ಸಾಲ ಮನ್ನಾ, ಪಿಂಚಣಿ, ವಿದ್ಯುತ್ ದರಗಳಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು 2021ರ ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ‘ನ್ಯಾಯ’ ಒದಗಿಸಬೇಕು ಎಂದು ಆಗ್ರಹಿಸಿ ಈ ವರ್ಷದ ಆರಂಭದಿಂದ ರೈತರು ಪಂಜಾಬ್ -ಹರಿಯಾಣ ಗಡಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.

ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ವರ್ಷದ ಫೆಬ್ರವರಿ 13ರಂದು ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸದಂತೆ ಹರಿಯಾಣ ಸರ್ಕಾರ ಶಂಭು, ಖನೌರಿ ಗಡಿಯಲ್ಲಿ ತಡೆದಿತ್ತು. ಹಾಗಾಗಿ, ರೈತರು ಗಡಿಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ಎರಡ್ಮೂರು ಬಾರಿ ಪ್ರತಿಭಟನಾ ಸ್ಥಳದಿಂದ ದೆಹಲಿಗೆ ಮೆರವಣಿಗೆ ಪುನರಾರಂಭಿಸಲು ಪ್ರಯತ್ನಿಸಿದರೂ, ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ಅಶ್ರುವಾಯು, ಜಲಫಿರಂಗಿ, ಲಾಠಿ ಏಟಿನ ಮೂಲಕ ರೈತರನ್ನು ತಡೆದಿದ್ದಾರೆ.

ಕಳೆದ ಡಿಸೆಂಬರ್ 6 ಮತ್ತು 14 ರ ನಡುವೆ ಮೂರು ಬಾರಿ ಕಾಲ್ನಡಿಗೆಯ ಮೂಲಕ ದೆಹಲಿಗೆ ಮೆರವಣಿಗೆ ಮಾಡಲು 101 ರೈತರ ತಂಡ ಪ್ರಯತ್ನಿಸಿತ್ತು. ಆದರೆ, ಹರಿಯಾಣದ ಪೊಲೀಸರು ಅದಕ್ಕೆ ಅವಕಾಶ ನೀಡಿಲ್ಲ.

ಜನವರಿ 4ರಂದು ಖನೌರಿಯಲ್ಲಿ ಕಿಸಾನ್ ಮಹಾಪಂಚಾಯತ್

ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಜನವರಿ 4ರಂದು ‘ಕಿಸಾನ್ ಮಹಾಪಂಚಾಯತ್‌’ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ.

ಖನೌರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ನಾಯಕ ಅಭಿಮನ್ಯು ಕೋಹರ್ ಅವರು, ಸುಮಾರು ನಾಲ್ಕು ದಶಕಗಳಿಂದ ರೈತಪರ ಹೋರಾಟ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ರೈತರನ್ನು ಭೇಟಿಯಾಗಲು ಇಚ್ಚಿಸಿದ್ದಾರೆ. ಅವರ ಆಕಾಂಕ್ಷೆಯನ್ನು ರೈತ ಸಂಘಟನೆಗಳು ಗೌರವಿಸಿದ್ದು, ಜನವರಿ 4ರಂದು ಮಹಾಪಂಚಾಯತ್ ನಡೆಸುವುದಾಗಿ ಘೋಷಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...