Homeಚಳವಳಿಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಒಕ್ಕೂಟ ಸರ್ಕಾರದ ಪ್ರಯತ್ನಗಳ ವಿರುದ್ಧ ಪ್ರತಿಭಟಿಸಿ, ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದೆ. ಪಕ್ಷದ ಸಂಸದರು, ಶಾಸಕರು ಸೇರಿದಂತೆ ಪ್ರಮುಖ ನಾಯಕರು ಮತ್ತು ನೂರಾರು ಕಾರ್ಯಕರ್ತರು ರಾಜ್ಯಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಉಪಸ್ಥಿತರಿದ್ದರು.

ವಳ್ಳುವರ್ ಕೊಟ್ಟಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಚೆಪಾಕ್‌-ಟ್ರಿಪ್ಲಿಕೇನ್ ಶಾಸಕ ಉದಯನಿಧಿ ಸ್ಟಾಲಿನ್, ‘‘ಹಿಂದಿ ಹೇರುವ ಇಂತಹ ಪ್ರಯತ್ನಗಳು ಮುಂದುವರಿದರೆ, ನಾವು ದೆಹಲಿಯಲ್ಲಿ ಪ್ರಧಾನಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿ ಸರ್ಕಾರದ ‘ಒಂದು ರಾಷ್ಟ್ರ ಒಂದು ಭಾಷೆ’ ಅಜೆಂಡಾದ ವಿರುದ್ಧ ಘೋಷಣೆಗಳನ್ನು ಕೂಗಿದ ಉದಯನಿಧಿ ಸ್ಟಾಲಿನ್‌, ಪ್ರತಿಭಟನೆಯನ್ನು 2024 ರ ಸಾರ್ವತ್ರಿಕ ಚುನಾವಣೆಯ ಆರಂಭ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

2019 ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಮಾಡಿದಂತೆಯೇ 2024 ರಲ್ಲಿ ಆಡಳಿತಾರೂಢ ಬಿಜೆಪಿಯನ್ನು ದೇಶದ ಜನರು ವಿಫಲಗೊಳಿಸುತ್ತಾರೆ ಎಂದು ಅವರು ಹೇಳಿದ್ದು, ಹಿಂದಿ ಹೇರಿಕೆಯ ವಿರುದ್ಧ ಡಿಎಂಕೆ ಯಾವಾಗಲೂ ಧ್ವನಿ ಎತ್ತುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ದೇಶಾದ್ಯಂತ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕಾಗಿ ಮೋದಿ ನೇತೃತ್ವದ ಸರ್ಕಾರ ಹಲವಾರು ಬಾರಿ ಟೀಕೆಗೆ ಒಳಗಾಗಿದೆ. ಇತ್ತೀಚೆಗೆ, ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ತನ್ನ 11 ನೇ ವರದಿಯಲ್ಲಿ, ದೇಶಾದ್ಯಂತ ಎಲ್ಲಾ ತಾಂತ್ರಿಕೇತರ ಮತ್ತು ತಾಂತ್ರಿಕ ಕಾಲೇಜುಗಳು ಮತ್ತು ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಕಡ್ಡಾಯ ಬೋಧನಾ ಮಾಧ್ಯಮವನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿತ್ತು. ಅನೇಕ ಡಿಎಂಕೆ ನಾಯಕರು ಮತ್ತು ಸಚಿವರು ಈ ಕ್ರಮವನ್ನು ಖಂಡಿಸಿದ್ದರು.

“ಭಾರತೀಯ ಒಕ್ಕೂಟದ ಸಾರ್ವಭೌಮತ್ವವು ಅದರ ಬಹುತ್ವದಲ್ಲಿ ಬೇರೂರಿದೆ. ಇದಕ್ಕೆ ವ್ಯತಿರಿಕ್ತವಾಗಿ, ಪ್ರತಿಯೊಂದಕ್ಕೂ ಏಕತ್ವವನ್ನು ಹೇರಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೊಳಿ ಅಕ್ಟೋಬರ್ 9 ರಂದು ಹೇಳಿದ್ದರು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಅಕ್ಟೋಬರ್ 10 ರಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿಕ್ರಿಯಿಸಿ, ಭಾರತದ ಶಕ್ತಿ ಅದರ ವೈವಿಧ್ಯತೆಯಲ್ಲಿದೆ ಎಂದು ಸೂಚಿಸಿದ್ದರು. “ಬಿಜೆಪಿ ಸರ್ಕಾರವು ‘ಒಂದು ರಾಷ್ಟ್ರ’ ಎಂಬ ನೆಪದಲ್ಲಿ ಜನರ ಮೇಲೆ ಒಂದು ಭಾಷೆ, ಒಂದು ಧರ್ಮ ಮತ್ತು ಒಂದು ಸಂಸ್ಕೃತಿಯನ್ನು ಹೇರುವ ಮೂಲಕ ವೈವಿಧ್ಯತೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಇದು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಅಪಾಯವಾಗಿದೆ” ಎಂದು ಅವರು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಹಿಂದಿಯಲ್ಲಿ ಮಾತನಾಡದಿದ್ದರೆ ಎಚ್ಚರಿಕೆ ನೀಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಈ ಆದ್ಯತೆಯು ಅಸಾಂವಿಧಾನಿಕವಾಗಿದೆ ಮತ್ತು ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಡಿಎಂಕೆ ಪಕ್ಷದ ಯುವ ಮತ್ತು ವಿದ್ಯಾರ್ಥಿ ಘಟಕಗಳು, “ಐಐಟಿ, ಐಐಎಂ ಮತ್ತು ಎಐಐಎಂಎಸ್‌ನಂತಹ ಕೇಂದ್ರೀಯ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ನಿರ್ಧಾರವು ಹಿಂದಿಯೇತರ ರಾಜ್ಯಗಳ ಭಾವನೆಗೆ ವಿರುದ್ಧವಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಹಿಂದಿಯೇತರ ಅಭ್ಯರ್ಥಿಗಳ ಉದ್ಯೋಗಾವಕಾಶಗಳನ್ನು ಕಸಿದುಕೊಳ್ಳುತ್ತದೆ ಎಂದು ಅದು ಆರೋಪಿಸಿವೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ, “ಪಕ್ಷವು ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಇದ್ದು, ಹಿಂದಿ ಭಾಷೆಯ ವಿರುದ್ಧ ಅಲ್ಲ. ಭಾಷಾ ಹೇರಿಕೆಯ ವಿರುದ್ಧ ಮಾತ್ರ ಪಕ್ಷ ಧ್ವನಿ ಎತ್ತುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...