Homeಚಳವಳಿ12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಏರಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೂರಾರು ವರ್ಷಗಳಿಂದ ಕಾರ್ಮಿಕರ ಹೋರಾಟದ ಫಲವಾಗಿ ಬಂದ ಕಾರ್ಮಿಕ ಕಾಯ್ದೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷರು ಮಾತನಾಡಿ, “ಇದು ಕಾರ್ಮಿಕರ ಇತಿಹಾಸದಲ್ಲಿ ಕರಾಳ ದಿನಗಳಾಗಿವೆ. ಇಂದು ನಮ್ಮ ಪಾಲಿಗೆ ಬ್ಲಾಕ್‌ ಫ್ರೈಡೆ ಆಗಿದೆ. ಸುಗ್ರಿವಾಜ್ಞೆಯ ಮೂಲಕ ಈಗಾಗಲೇ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಾಗಿವೆ. ನಮ್ಮ ರಾಜ್ಯದಲ್ಲಿ ಇದು ಜಾರಿಯಾಗಬಾರದು. ಒಂದು ವೇಳೆ ಜಾರಿಯಾದಲ್ಲಿ ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಾರೆ, ಮಹಿಳೆಯರ ಮಾತೃತ್ವ ರಜೆ ರದ್ದುಗೊಳ್ಳುತ್ತದೆ, ಕೆಲಸದ ಅವಧಿ ಹೆಚ್ಚಳವಾಗುತ್ತದೆ ಆದರೆ ಸಂಬಳ ಕಡಿಮೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Labor unions protesting against kanrataka government decision for labour law relaxation

Posted by Gauri Lankesh News on Thursday, May 14, 2020

ಕರ್ನಾಟಕ ಜನಶಕ್ತಿಯ ಸಂಚಾಲಕರಾದ ಮಲ್ಲಿಗೆ ಸಿರಿಮನೆಯವರು ಮಾತನಾಡಿ “ಕೊರೊನಾ ಸಂಕಷ್ಟದ ಕಾಲದಲ್ಲಿ ಕಾರ್ಮಿಕರು ಪತ್ರಿಭಟನೆ ಮಾಡಲಿಕ್ಕೆ ಅವಕಾಶವಿಲ್ಲದಿದ್ದಾಗ ಕಾರ್ಮಿಕರ ಶೋಷಣೆ ಮಾಡುವ ತಿದ್ದುಪಡಿಗಳನ್ನು ತರಲಾಗುತ್ತಿದೆ. ಮಾಲೀಕರು, ಬಂಡವಾಳಶಾಹಿಗಳಿಗೆ ಲಾಕ್‌ಡೌನ್‌ನಿಂದ ತೊಂದರೆಯಾಗಿಲ್ಲ. ಆದರೆ ವಲಸೆ ಕಾರ್ಮಿಕರು ಮಾತ್ರ ಸಾರಿಗೆ, ಊಟ, ವಸತಿ,ಕೂಲಿ ಇಲ್ಲದೇ ಪರದಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಡವರ ಬದುಕು ಮುಖ್ಯವಲ್ಲ ಬದಲಿಗೆ ಬಂಡವಾಳಶಾಹಿಗಳ ಹಿತಾಸಕ್ತಿಯೇ ಮುಖ್ಯ” ಎಂದು ಕಿಡಿಕಾರಿದರು.

ವೈಟ್‌ ಕಾಲರ್‌ ಉದ್ಯೋಗಿಗಳಿಗೆ ಮಾತ್ರವೇ ನೂರು ವರ್ಷಗಳ ಹಿಂದೆ ಕಾರ್ಮಿಕರು ನಡೆಸಿದ ಹೋರಾಟದ ಲಾಭ ಸಿಗುತ್ತಿದೆ. ಆದರೆ ಕಾರ್ಮಿಕರಿಗೆ ಇನ್ನು ಶೋಷಣೆ ನಡೆಯುತ್ತಿದೆ. ಇರುವ ಕಾರ್ಮಿಕ ಕಾಯ್ದೆಗಳನ್ನೇ ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇರುವ ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಇಡೀ ದೇಶದ ಬಡಜನರ ಬದುಕು ಬೀದಿಗೆ ಬರಲಿದೆ. ಇದರ ವಿರುದ್ಧ ಐಕ್ಯತೆಯ ಹೋರಾಟ ಮುಖ್ಯವಾಗಿದೆ. ಇಂದು ನಾವು ನಡೆಸುತ್ತಿರುವುದು ಸಾಂಕೇತಕ ಹೋರಾಟವಾಗಿದ್ದು, ಲಾಕ್‌ಡೌನ್‌ ನಂತರ ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡರಾದ ಎಸ್‌. ಬಾಲನ್‌, ಬಿಬಿಎಂಪಿ ಪೌರಕಾರ್ಮಿಕ ಸಂಘಟನೆ, ಪೌರಕಾರ್ಮಿಕ  ಬಿಡಬ್ಲುಎಸ್‌ಎಸ್ಬಿ‌ ಕಾಂಟ್ರಾಕ್ಟ್‌ ವರ್ಕರ್ಸ್‌ ಯೂನಿಯನ್‌, ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌, ಮೈಕೋ ಅಂಡ್‌ ಬಾಷ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವರ್ಕರ್ಸ್‌ ಯೂನಿಯನ್‌, ನ್ಯೂ ಸೋಷಿಯಲಿಷ್ಟ್‌ ಆಲ್ಟರ್‌ನೇಟಿವ್‌, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮನೆಕೆಲಸದ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು, ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...