Homeಚಳವಳಿ12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಏರಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೂರಾರು ವರ್ಷಗಳಿಂದ ಕಾರ್ಮಿಕರ ಹೋರಾಟದ ಫಲವಾಗಿ ಬಂದ ಕಾರ್ಮಿಕ ಕಾಯ್ದೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷರು ಮಾತನಾಡಿ, “ಇದು ಕಾರ್ಮಿಕರ ಇತಿಹಾಸದಲ್ಲಿ ಕರಾಳ ದಿನಗಳಾಗಿವೆ. ಇಂದು ನಮ್ಮ ಪಾಲಿಗೆ ಬ್ಲಾಕ್‌ ಫ್ರೈಡೆ ಆಗಿದೆ. ಸುಗ್ರಿವಾಜ್ಞೆಯ ಮೂಲಕ ಈಗಾಗಲೇ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಾಗಿವೆ. ನಮ್ಮ ರಾಜ್ಯದಲ್ಲಿ ಇದು ಜಾರಿಯಾಗಬಾರದು. ಒಂದು ವೇಳೆ ಜಾರಿಯಾದಲ್ಲಿ ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಾರೆ, ಮಹಿಳೆಯರ ಮಾತೃತ್ವ ರಜೆ ರದ್ದುಗೊಳ್ಳುತ್ತದೆ, ಕೆಲಸದ ಅವಧಿ ಹೆಚ್ಚಳವಾಗುತ್ತದೆ ಆದರೆ ಸಂಬಳ ಕಡಿಮೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Labor unions protesting against kanrataka government decision for labour law relaxation

Posted by Gauri Lankesh News on Thursday, May 14, 2020

ಕರ್ನಾಟಕ ಜನಶಕ್ತಿಯ ಸಂಚಾಲಕರಾದ ಮಲ್ಲಿಗೆ ಸಿರಿಮನೆಯವರು ಮಾತನಾಡಿ “ಕೊರೊನಾ ಸಂಕಷ್ಟದ ಕಾಲದಲ್ಲಿ ಕಾರ್ಮಿಕರು ಪತ್ರಿಭಟನೆ ಮಾಡಲಿಕ್ಕೆ ಅವಕಾಶವಿಲ್ಲದಿದ್ದಾಗ ಕಾರ್ಮಿಕರ ಶೋಷಣೆ ಮಾಡುವ ತಿದ್ದುಪಡಿಗಳನ್ನು ತರಲಾಗುತ್ತಿದೆ. ಮಾಲೀಕರು, ಬಂಡವಾಳಶಾಹಿಗಳಿಗೆ ಲಾಕ್‌ಡೌನ್‌ನಿಂದ ತೊಂದರೆಯಾಗಿಲ್ಲ. ಆದರೆ ವಲಸೆ ಕಾರ್ಮಿಕರು ಮಾತ್ರ ಸಾರಿಗೆ, ಊಟ, ವಸತಿ,ಕೂಲಿ ಇಲ್ಲದೇ ಪರದಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಡವರ ಬದುಕು ಮುಖ್ಯವಲ್ಲ ಬದಲಿಗೆ ಬಂಡವಾಳಶಾಹಿಗಳ ಹಿತಾಸಕ್ತಿಯೇ ಮುಖ್ಯ” ಎಂದು ಕಿಡಿಕಾರಿದರು.

ವೈಟ್‌ ಕಾಲರ್‌ ಉದ್ಯೋಗಿಗಳಿಗೆ ಮಾತ್ರವೇ ನೂರು ವರ್ಷಗಳ ಹಿಂದೆ ಕಾರ್ಮಿಕರು ನಡೆಸಿದ ಹೋರಾಟದ ಲಾಭ ಸಿಗುತ್ತಿದೆ. ಆದರೆ ಕಾರ್ಮಿಕರಿಗೆ ಇನ್ನು ಶೋಷಣೆ ನಡೆಯುತ್ತಿದೆ. ಇರುವ ಕಾರ್ಮಿಕ ಕಾಯ್ದೆಗಳನ್ನೇ ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇರುವ ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಇಡೀ ದೇಶದ ಬಡಜನರ ಬದುಕು ಬೀದಿಗೆ ಬರಲಿದೆ. ಇದರ ವಿರುದ್ಧ ಐಕ್ಯತೆಯ ಹೋರಾಟ ಮುಖ್ಯವಾಗಿದೆ. ಇಂದು ನಾವು ನಡೆಸುತ್ತಿರುವುದು ಸಾಂಕೇತಕ ಹೋರಾಟವಾಗಿದ್ದು, ಲಾಕ್‌ಡೌನ್‌ ನಂತರ ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡರಾದ ಎಸ್‌. ಬಾಲನ್‌, ಬಿಬಿಎಂಪಿ ಪೌರಕಾರ್ಮಿಕ ಸಂಘಟನೆ, ಪೌರಕಾರ್ಮಿಕ  ಬಿಡಬ್ಲುಎಸ್‌ಎಸ್ಬಿ‌ ಕಾಂಟ್ರಾಕ್ಟ್‌ ವರ್ಕರ್ಸ್‌ ಯೂನಿಯನ್‌, ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌, ಮೈಕೋ ಅಂಡ್‌ ಬಾಷ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವರ್ಕರ್ಸ್‌ ಯೂನಿಯನ್‌, ನ್ಯೂ ಸೋಷಿಯಲಿಷ್ಟ್‌ ಆಲ್ಟರ್‌ನೇಟಿವ್‌, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮನೆಕೆಲಸದ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು, ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...