Homeಚಳವಳಿ12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಏರಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೂರಾರು ವರ್ಷಗಳಿಂದ ಕಾರ್ಮಿಕರ ಹೋರಾಟದ ಫಲವಾಗಿ ಬಂದ ಕಾರ್ಮಿಕ ಕಾಯ್ದೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷರು ಮಾತನಾಡಿ, “ಇದು ಕಾರ್ಮಿಕರ ಇತಿಹಾಸದಲ್ಲಿ ಕರಾಳ ದಿನಗಳಾಗಿವೆ. ಇಂದು ನಮ್ಮ ಪಾಲಿಗೆ ಬ್ಲಾಕ್‌ ಫ್ರೈಡೆ ಆಗಿದೆ. ಸುಗ್ರಿವಾಜ್ಞೆಯ ಮೂಲಕ ಈಗಾಗಲೇ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಾಗಿವೆ. ನಮ್ಮ ರಾಜ್ಯದಲ್ಲಿ ಇದು ಜಾರಿಯಾಗಬಾರದು. ಒಂದು ವೇಳೆ ಜಾರಿಯಾದಲ್ಲಿ ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಾರೆ, ಮಹಿಳೆಯರ ಮಾತೃತ್ವ ರಜೆ ರದ್ದುಗೊಳ್ಳುತ್ತದೆ, ಕೆಲಸದ ಅವಧಿ ಹೆಚ್ಚಳವಾಗುತ್ತದೆ ಆದರೆ ಸಂಬಳ ಕಡಿಮೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Labor unions protesting against kanrataka government decision for labour law relaxation

Posted by Gauri Lankesh News on Thursday, May 14, 2020

ಕರ್ನಾಟಕ ಜನಶಕ್ತಿಯ ಸಂಚಾಲಕರಾದ ಮಲ್ಲಿಗೆ ಸಿರಿಮನೆಯವರು ಮಾತನಾಡಿ “ಕೊರೊನಾ ಸಂಕಷ್ಟದ ಕಾಲದಲ್ಲಿ ಕಾರ್ಮಿಕರು ಪತ್ರಿಭಟನೆ ಮಾಡಲಿಕ್ಕೆ ಅವಕಾಶವಿಲ್ಲದಿದ್ದಾಗ ಕಾರ್ಮಿಕರ ಶೋಷಣೆ ಮಾಡುವ ತಿದ್ದುಪಡಿಗಳನ್ನು ತರಲಾಗುತ್ತಿದೆ. ಮಾಲೀಕರು, ಬಂಡವಾಳಶಾಹಿಗಳಿಗೆ ಲಾಕ್‌ಡೌನ್‌ನಿಂದ ತೊಂದರೆಯಾಗಿಲ್ಲ. ಆದರೆ ವಲಸೆ ಕಾರ್ಮಿಕರು ಮಾತ್ರ ಸಾರಿಗೆ, ಊಟ, ವಸತಿ,ಕೂಲಿ ಇಲ್ಲದೇ ಪರದಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಡವರ ಬದುಕು ಮುಖ್ಯವಲ್ಲ ಬದಲಿಗೆ ಬಂಡವಾಳಶಾಹಿಗಳ ಹಿತಾಸಕ್ತಿಯೇ ಮುಖ್ಯ” ಎಂದು ಕಿಡಿಕಾರಿದರು.

ವೈಟ್‌ ಕಾಲರ್‌ ಉದ್ಯೋಗಿಗಳಿಗೆ ಮಾತ್ರವೇ ನೂರು ವರ್ಷಗಳ ಹಿಂದೆ ಕಾರ್ಮಿಕರು ನಡೆಸಿದ ಹೋರಾಟದ ಲಾಭ ಸಿಗುತ್ತಿದೆ. ಆದರೆ ಕಾರ್ಮಿಕರಿಗೆ ಇನ್ನು ಶೋಷಣೆ ನಡೆಯುತ್ತಿದೆ. ಇರುವ ಕಾರ್ಮಿಕ ಕಾಯ್ದೆಗಳನ್ನೇ ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇರುವ ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಇಡೀ ದೇಶದ ಬಡಜನರ ಬದುಕು ಬೀದಿಗೆ ಬರಲಿದೆ. ಇದರ ವಿರುದ್ಧ ಐಕ್ಯತೆಯ ಹೋರಾಟ ಮುಖ್ಯವಾಗಿದೆ. ಇಂದು ನಾವು ನಡೆಸುತ್ತಿರುವುದು ಸಾಂಕೇತಕ ಹೋರಾಟವಾಗಿದ್ದು, ಲಾಕ್‌ಡೌನ್‌ ನಂತರ ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡರಾದ ಎಸ್‌. ಬಾಲನ್‌, ಬಿಬಿಎಂಪಿ ಪೌರಕಾರ್ಮಿಕ ಸಂಘಟನೆ, ಪೌರಕಾರ್ಮಿಕ  ಬಿಡಬ್ಲುಎಸ್‌ಎಸ್ಬಿ‌ ಕಾಂಟ್ರಾಕ್ಟ್‌ ವರ್ಕರ್ಸ್‌ ಯೂನಿಯನ್‌, ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌, ಮೈಕೋ ಅಂಡ್‌ ಬಾಷ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವರ್ಕರ್ಸ್‌ ಯೂನಿಯನ್‌, ನ್ಯೂ ಸೋಷಿಯಲಿಷ್ಟ್‌ ಆಲ್ಟರ್‌ನೇಟಿವ್‌, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮನೆಕೆಲಸದ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು, ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...