Homeಚಳವಳಿ12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

12 ಗಂಟೆಗಳ ಕೆಲಸ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

- Advertisement -
- Advertisement -

ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಏರಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನೂರಾರು ವರ್ಷಗಳಿಂದ ಕಾರ್ಮಿಕರ ಹೋರಾಟದ ಫಲವಾಗಿ ಬಂದ ಕಾರ್ಮಿಕ ಕಾಯ್ದೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಆ ಮೂಲಕ ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕೊರೊನಾ ವೈರಸ್‌ ಹರಡುತ್ತಿರುವ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌ನ ರಾಜ್ಯ ಉಪಾಧ್ಯಕ್ಷರು ಮಾತನಾಡಿ, “ಇದು ಕಾರ್ಮಿಕರ ಇತಿಹಾಸದಲ್ಲಿ ಕರಾಳ ದಿನಗಳಾಗಿವೆ. ಇಂದು ನಮ್ಮ ಪಾಲಿಗೆ ಬ್ಲಾಕ್‌ ಫ್ರೈಡೆ ಆಗಿದೆ. ಸುಗ್ರಿವಾಜ್ಞೆಯ ಮೂಲಕ ಈಗಾಗಲೇ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಾಗಿವೆ. ನಮ್ಮ ರಾಜ್ಯದಲ್ಲಿ ಇದು ಜಾರಿಯಾಗಬಾರದು. ಒಂದು ವೇಳೆ ಜಾರಿಯಾದಲ್ಲಿ ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಾರೆ, ಮಹಿಳೆಯರ ಮಾತೃತ್ವ ರಜೆ ರದ್ದುಗೊಳ್ಳುತ್ತದೆ, ಕೆಲಸದ ಅವಧಿ ಹೆಚ್ಚಳವಾಗುತ್ತದೆ ಆದರೆ ಸಂಬಳ ಕಡಿಮೆಯಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

Labor unions protesting against kanrataka government decision for labour law relaxation

Posted by Gauri Lankesh News on Thursday, May 14, 2020

ಕರ್ನಾಟಕ ಜನಶಕ್ತಿಯ ಸಂಚಾಲಕರಾದ ಮಲ್ಲಿಗೆ ಸಿರಿಮನೆಯವರು ಮಾತನಾಡಿ “ಕೊರೊನಾ ಸಂಕಷ್ಟದ ಕಾಲದಲ್ಲಿ ಕಾರ್ಮಿಕರು ಪತ್ರಿಭಟನೆ ಮಾಡಲಿಕ್ಕೆ ಅವಕಾಶವಿಲ್ಲದಿದ್ದಾಗ ಕಾರ್ಮಿಕರ ಶೋಷಣೆ ಮಾಡುವ ತಿದ್ದುಪಡಿಗಳನ್ನು ತರಲಾಗುತ್ತಿದೆ. ಮಾಲೀಕರು, ಬಂಡವಾಳಶಾಹಿಗಳಿಗೆ ಲಾಕ್‌ಡೌನ್‌ನಿಂದ ತೊಂದರೆಯಾಗಿಲ್ಲ. ಆದರೆ ವಲಸೆ ಕಾರ್ಮಿಕರು ಮಾತ್ರ ಸಾರಿಗೆ, ಊಟ, ವಸತಿ,ಕೂಲಿ ಇಲ್ಲದೇ ಪರದಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಡವರ ಬದುಕು ಮುಖ್ಯವಲ್ಲ ಬದಲಿಗೆ ಬಂಡವಾಳಶಾಹಿಗಳ ಹಿತಾಸಕ್ತಿಯೇ ಮುಖ್ಯ” ಎಂದು ಕಿಡಿಕಾರಿದರು.

ವೈಟ್‌ ಕಾಲರ್‌ ಉದ್ಯೋಗಿಗಳಿಗೆ ಮಾತ್ರವೇ ನೂರು ವರ್ಷಗಳ ಹಿಂದೆ ಕಾರ್ಮಿಕರು ನಡೆಸಿದ ಹೋರಾಟದ ಲಾಭ ಸಿಗುತ್ತಿದೆ. ಆದರೆ ಕಾರ್ಮಿಕರಿಗೆ ಇನ್ನು ಶೋಷಣೆ ನಡೆಯುತ್ತಿದೆ. ಇರುವ ಕಾರ್ಮಿಕ ಕಾಯ್ದೆಗಳನ್ನೇ ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಇರುವ ಕಾಯ್ದೆಗಳಿಗೆ ತಿದ್ದುಪಡಿ ತಂದರೆ ಇಡೀ ದೇಶದ ಬಡಜನರ ಬದುಕು ಬೀದಿಗೆ ಬರಲಿದೆ. ಇದರ ವಿರುದ್ಧ ಐಕ್ಯತೆಯ ಹೋರಾಟ ಮುಖ್ಯವಾಗಿದೆ. ಇಂದು ನಾವು ನಡೆಸುತ್ತಿರುವುದು ಸಾಂಕೇತಕ ಹೋರಾಟವಾಗಿದ್ದು, ಲಾಕ್‌ಡೌನ್‌ ನಂತರ ಬೃಹತ್‌ ಹೋರಾಟಕ್ಕೆ ಸಜ್ಜಾಗೋಣ ಎಂದು ಕರೆ ನೀಡಿದರು.

ಹಿರಿಯ ಕಾರ್ಮಿಕ ಮುಖಂಡರಾದ ಎಸ್‌. ಬಾಲನ್‌, ಬಿಬಿಎಂಪಿ ಪೌರಕಾರ್ಮಿಕ ಸಂಘಟನೆ, ಪೌರಕಾರ್ಮಿಕ  ಬಿಡಬ್ಲುಎಸ್‌ಎಸ್ಬಿ‌ ಕಾಂಟ್ರಾಕ್ಟ್‌ ವರ್ಕರ್ಸ್‌ ಯೂನಿಯನ್‌, ಸೋಷಿಯಲ್‌ ಡೆಮಾಕ್ರಟಿಕ್‌ ಟ್ರೇಡ್‌‌ ಯೂನಿಯನ್‌, ಮೈಕೋ ಅಂಡ್‌ ಬಾಷ್‌ ಯೂನಿಯನ್‌, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವರ್ಕರ್ಸ್‌ ಯೂನಿಯನ್‌, ನ್ಯೂ ಸೋಷಿಯಲಿಷ್ಟ್‌ ಆಲ್ಟರ್‌ನೇಟಿವ್‌, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮನೆಕೆಲಸದ ಕಾರ್ಮಿಕರ ಯೂನಿಯನ್‌ನ ಪದಾಧಿಕಾರಿಗಳು, ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...