Homeಕರ್ನಾಟಕಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ...

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ನಾಳೆ (ಸೆ.25) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನ್ಯಾಯ ಸಮಾವೇಶ’

- Advertisement -
- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆಪ್ಟೆಂಬರ್ 25ರಂದು ‘ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ನೂರಾರು ಅಸಹಜ ಸಾವು, ಅತ್ಯಾಚಾರ, ಕೊಲೆ ಮತ್ತು ನಾಪತ್ತೆ ಪ್ರಕರಣಗಳಿಗೆ ನ್ಯಾಯ ಒದಗಿಸಲು ಈ ಸಮಾವೇಶವು ಒತ್ತಾಯಿಸಲಿದೆ. ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ಕರ್ನಾಟಕದ ಪ್ರಗತಿಪರ ಸಂಘಟನೆಗಳಾದ ಎಡಪಕ್ಷಗಳು, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಹಾಗೂ ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಮಾವೇಶವು ಅಂದು ಬೆಳಿಗ್ಗೆ 10:30ಕ್ಕೆ ಪ್ರಾರಂಭವಾಗಲಿದ್ದು, ರಾಷ್ಟ್ರ ಮತ್ತು ರಾಜ್ಯದ ಹಲವು ಚಿಂತಕರು, ಹೋರಾಟಗಾರರು, ಮತ್ತು ಸಾಹಿತಿಗಳು ಭಾಗವಹಿಸುವ ನಿರೀಕ್ಷೆ ಇದೆ.

ಸಮಾವೇಶದ ಪ್ರಮುಖ ಹಕ್ಕೊತ್ತಾಯಗಳು

ಸಮಾವೇಶದ ಮುಖ್ಯ ಉದ್ದೇಶವು ಕೇವಲ ಒಂದೆರಡು ಪ್ರಕರಣಗಳಿಗೆ ಸೀಮಿತವಾಗಿಲ್ಲ, ಬದಲಾಗಿ ವ್ಯವಸ್ಥಿತ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತುವುದಾಗಿದೆ. ಪ್ರಮುಖವಾಗಿ ಕೆಳಗಿನ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲಾಗುವುದು:

1. ನಿರ್ದಿಷ್ಟ ಪ್ರಕರಣಗಳ ಮರು ತನಿಖೆ ಮತ್ತು ಎಸ್ಐಟಿ ರಚನೆ

  • ಪದ್ಮಲತಾ ಪ್ರಕರಣ (1986): ಧರ್ಮಸ್ಥಳ ಗ್ರಾಮದ ಸಿಪಿಐಎಂ ಕಾರ್ಯದರ್ಶಿ ಎಂ.ಕೆ. ದೇವಾನಂದರ ಪುತ್ರಿಯನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಅವರ ತಂದೆ, ಇದು ಸ್ಥಳೀಯ ಫ್ಯೂಡಲ್ ಶಕ್ತಿಗಳ ವಿರುದ್ಧ ಹೋರಾಡಿದ ಕಾರಣ ನಡೆದ ಕೊಲೆ ಎಂದು ಕೊನೆಯವರೆಗೂ ಆರೋಪಿಸಿದ್ದರು. ಈ ಪ್ರಕರಣಕ್ಕೆ ಇದುವರೆಗೂ ನ್ಯಾಯ ಸಿಕ್ಕಿಲ್ಲ.
  • ವೇದವಲ್ಲಿ ಸಾವು (1979): ಎಸ್.ಡಿ.ಎಂ. ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿದ್ದ ವೇದವಲ್ಲಿ ಅವರ ಅನುಮಾನಾಸ್ಪದ ಸಾವನ್ನು ಕೊಲೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಮುಖ್ಯೋಪಾಧ್ಯಾಯಿನಿ ಹುದ್ದೆಗೆ ಹಕ್ಕು ಮಂಡಿಸಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
  • ನಾರಾಯಣ ಮಾವುತ ಮತ್ತು ಸಹೋದರಿ ಕೊಲೆ (2012): ಧರ್ಮಸ್ಥಳದಲ್ಲಿ ಆನೆ ಮಾವುತನಾಗಿದ್ದ ನಾರಾಯಣ ಮತ್ತು ಅವರ ಸಹೋದರಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಪೊಲೀಸರು ‘ಪತ್ತೆಯಾಗದ ಪ್ರಕರಣ’ ಎಂದು ಮುಚ್ಚಿಹಾಕಿದ್ದು, ಪ್ರಭಾವಿ ವ್ಯಕ್ತಿಗಳು ಈಗ ನಾರಾಯಣ ವಾಸವಿದ್ದ ಜಮೀನಿನಲ್ಲಿ ಕಟ್ಟಡ ನಿರ್ಮಿಸಿದ್ದಾರೆ.
  • ಸೌಜನ್ಯ ಪ್ರಕರಣ (2012): ಅತ್ಯಾಚಾರ ಮತ್ತು ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ಸಿಬಿಐ ಆರೋಪಿಸಿದ್ದ ಸಂತೋಷ್ ರಾವ್ ನಿರಪರಾಧಿ ಎಂದು ನ್ಯಾಯಾಲಯ ಬಿಡುಗಡೆಗೊಳಿಸಿದೆ. ಇದರಿಂದ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗದಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಒತ್ತಾಯಿಸಲಾಗುತ್ತಿದೆ.

ಈ ಎಲ್ಲಾ ಪ್ರಕರಣಗಳು ಸೇರಿದಂತೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ದಾಖಲಾದ ಎಲ್ಲಾ ಅಸಹಜ ಸಾವು, ಅತ್ಯಾಚಾರ, ಮತ್ತು ಕೊಲೆ ಪ್ರಕರಣಗಳನ್ನು ಎಸ್ಐಟಿ (SIT) ತನಿಖೆಗೆ ಒಳಪಡಿಸಲು ಒತ್ತಾಯಿಸಲಾಗುವುದು. ಒಂದು ವೇಳೆ ಎಸ್ಐಟಿ ವ್ಯಾಪ್ತಿಗೆ ತರಲು ಸಾಧ್ಯವಾಗದಿದ್ದರೆ, ಈ ಎಲ್ಲಾ ಹಳೆಯ ಮತ್ತು ಗಂಭೀರ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ ವಿಶೇಷ ತನಿಖಾ ತಂಡ ರಚಿಸಬೇಕೆಂದು ಆಗ್ರಹಿಸಲಾಗುವುದು.

2. ಭೂ ಅಕ್ರಮ ಮತ್ತು ಹಣಕಾಸು ದೌರ್ಜನ್ಯಗಳ ತನಿಖೆ

  • ಭೂ ಕಬಳಿಕೆ: ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯಾಪಕವಾಗಿ ನಡೆಯುತ್ತಿರುವ ಸರ್ಕಾರಿ ಜಮೀನು, ದಲಿತರು ಮತ್ತು ಆದಿವಾಸಿಗಳ ಭೂ ಕಬಳಿಕೆ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಬಡ ಮತ್ತು ದುರ್ಬಲ ವರ್ಗದವರನ್ನು ಬಲವಂತವಾಗಿ ಒಕ್ಕಲೆಬ್ಬಿಸಿ, ಅವರ ಜಮೀನನ್ನು ಕಬಳಿಸಲಾಗಿದೆ ಎಂದು ಸಮಾವೇಶದ ಸಂಘಟಕರು ಆರೋಪಿಸಿದ್ದಾರೆ.
  • ಮೈಕ್ರೋ ಫೈನಾನ್ಸ್ ದೌರ್ಜನ್ಯಗಳು: ಗ್ರಾಮೀಣಾಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ವ್ಯವಹಾರಗಳಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ, ಸಾಲ ವಸೂಲಾತಿಯಲ್ಲಿ ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಬಲವಂತದ ಆಸ್ತಿ ವಶಕ್ಕೆ ಪಡೆದಿರುವ ಪ್ರಕರಣಗಳ ತನಿಖೆಗೂ ಆಗ್ರಹಿಸಲಾಗುವುದು.

3. ದಲಿತ ಸಮುದಾಯಕ್ಕೆ ಮೂಲಭೂತ ಹಕ್ಕುಗಳು

  • ಹಕ್ಕುಪತ್ರ ಮತ್ತು ಜಮೀನು ವಿತರಣೆ: ಧರ್ಮಸ್ಥಳದಲ್ಲಿ ತಲೆಮಾರುಗಳಿಂದ ಸ್ವಚ್ಛತಾ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಕುಟುಂಬಗಳು ವಾಸಿಸುವ ಅಶೋಕನಗರ (128 ಕುಟುಂಬಗಳು) ಮತ್ತು ಮುಂಡ್ರುಪಾಡಿ (42 ಕುಟುಂಬಗಳು) ದಲಿತ ಕಾಲೋನಿಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು.
  • ಸರ್ಕಾರಿ ಭೂಮಿ ವಿತರಣೆ: ಸರ್ಕಾರವು ಈ ಕುಟುಂಬಗಳಿಗೆ ತಲಾ ಒಂದು ಎಕರೆ ಸರ್ಕಾರಿ ಭೂಮಿಯನ್ನು ಒದಗಿಸಲು ಒತ್ತಾಯಿಸಲಾಗುವುದು.
  • ಕನಿಷ್ಠ ವೇತನ: ಸ್ವಚ್ಛತಾ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಗಳ ಪ್ರಕಾರ ಕನಿಷ್ಠ ವೇತನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಮಾವೇಶ ಒತ್ತಾಯಿಸಲಿದೆ.

ಈ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ, ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ ನ್ಯಾಯ ಸಮಾವೇಶದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ಒಂದು ವರ್ಷ ದಕ್ಷಿಣ ಕನ್ನಡದಿಂದ ಗಡಿಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...