Homeಮುಖಪುಟಬಂಗಾಳದಲ್ಲಿ ತೀವ್ರಗೊಂಡ ವಕ್ಫ್ ವಿರುದ್ಧದ ಪ್ರತಿಭಟನೆ; ಕಾಯ್ದೆ ರದ್ದುಗೊಳಿಸುವಂತೆ ಆಗ್ರಹ

ಬಂಗಾಳದಲ್ಲಿ ತೀವ್ರಗೊಂಡ ವಕ್ಫ್ ವಿರುದ್ಧದ ಪ್ರತಿಭಟನೆ; ಕಾಯ್ದೆ ರದ್ದುಗೊಳಿಸುವಂತೆ ಆಗ್ರಹ

- Advertisement -
- Advertisement -

ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ವಿವಾದಾತ್ಮಕ ವಕ್ಫ್ ಕಾಯ್ದೆಯ ರಾಜಕೀಯ ಮುಂದುವರೆದಿದ್ದು, ದೇಶದ ಹಲವಾರು ಭಾಗಗಳಲ್ಲಿ ಹೊಸದಾಗಿ ಜಾರಿಗೆ ತಂದ ಕಾನೂನಿನ ವಿರುದ್ಧದ ಪ್ರತಿಭಟನೆಗಳು ಸಹ ವೇಗ ಪಡೆಯುತ್ತಿವೆ. ಕಾನೂನನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಶುಕ್ರವಾರ, ಕೋಲ್ಕತ್ತಾದ ಅಲಿಯಾ ವಿಶ್ವವಿದ್ಯಾಲಯದ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ, ವಕ್ಫ್ ಕಾಯ್ದೆಯ ವಿರುದ್ಧ ಮೆರವಣಿಗೆ ನಡೆಸಿದರು. “ಬಿಜೆಪಿ ಧಾರ್ಮಿಕ ಆಧಾರದ ಮೇಲೆ ರಾಜ್ಯವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಆದರೆ, ಅದರ ಯೋಜನೆಗಳು ಫಲ ನೀಡುವುದಿಲ್ಲ” ಎಂದು ನಗರದ ಮೇಯರ್ ಮತ್ತು ಬಂಗಾಳ ಸಚಿವ ಫಿರ್ಹಾದ್ ಹಕೀಮ್ ಹೇಳಿದರು.

ಸಿಲಿಗುರಿಯಲ್ಲಿಯೂ ಮುಸ್ಲಿಂ ಸಮುದಾಯದ ಸದಸ್ಯರು ಇದೇ ರೀತಿಯ ಪ್ರತಿಭಟನೆ ನಡೆಸಿದರು.

ವಕ್ಫ್ (ತಿದ್ದುಪಡಿ) ಮಸೂದೆ 2025 ಕಳೆದ ವಾರ ಸರಣಿ ಚರ್ಚೆಗಳ ನಂತರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ನಂತರ ಕಾನೂನಾಗಿ ಮಾರ್ಪಟ್ಟಿತು. ಮಸೂದೆ ಅಂಗೀಕಾರದ ನಂತರ, ಕಾನೂನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ವಿರೋಧ ಪಕ್ಷಗಳ ಅರ್ಜಿಗಳನ್ನು ಸಲ್ಲಿಸಿವೆ.

“ನಮ್ಮ ಮುಖ್ಯಮಂತ್ರಿಯ ಹೆಸರು ಮಮತಾ ಬ್ಯಾನರ್ಜಿ ಆಗಿರುವುದರಿಂದ ಬಂಗಾಳದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ. ಬಂಗಾಳವು ಎಲ್ಲಾ ಧರ್ಮಗಳಿಗೆ ಸಾಮರಸ್ಯದ ಏಕೈಕ ಸ್ಥಳವಾಗಿದೆ. ಮಸೂದೆಯೊಂದಿಗೆ, ಕೇಂದ್ರ ಸರ್ಕಾರವು ಧಾರ್ಮಿಕ ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಿಸಿದೆ. ಆದರೆ, ಬಂಗಾಳದಲ್ಲಿ ಅದು ಪರಿಣಾಮಕಾರಿಯಾಗಿರುವುದಿಲ್ಲ” ಎಂದು ಹಕೀಮ್ ಹೇಳಿದರು.

ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳು ಪಾರ್ಕ್ ಸರ್ಕಸ್ ಕ್ರಾಸಿಂಗ್‌ನಲ್ಲಿ ಕೊನೆಗೊಳ್ಳಬೇಕಿದ್ದ ಅಲಿಯಾ ವಿಶ್ವವಿದ್ಯಾಲಯದ ಆವರಣದಿಂದ ಮೆರವಣಿಗೆಯನ್ನು ಪ್ರಾರಂಭಿಸಿದರು.

ವಕ್ಫ್ ಕಾಯ್ದೆ ವಿರೋಧಿ ಘೋಷಣೆಗಳನ್ನು ಕೂಗಿ, ಕಾನೂನನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಕೆಲವೇ ದಿನಗಳ ನಂತರ ಈ ಶಾಂತಿಯುತ ಹೋರಾಟ ನಡೆಯಿತು.

ಗುರುವಾರ, ಪ್ರಮುಖ ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲೇಮಾ-ಇ-ಹಿಂದ್, 1 ಕೋಟಿ ಜನರು ಸಹಿ ಮಾಡಿದ ವಕ್ಫ್ ಕಾನೂನಿನ ವಿರುದ್ಧ ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸುವುದಾಗಿ ಪ್ರತಿಜ್ಞೆ ಮಾಡಿತು. ವಕ್ಫ್ ಕಾನೂನಿನ ವಿರುದ್ಧ ಕಾನೂನು ಹೋರಾಟವನ್ನು ಎದುರಿಸಲು ಜಮಿಯತ್ ಜನಸಂದಣಿ ಅಭಿಯಾನವನ್ನು ಸಹ ಘೋಷಿಸಿತು. ಸುಪ್ರೀಂ ಕೋರ್ಟ್ ಮುಂದಿನ ವಾರ ಹಲವಾರು ಅರ್ಜಿಗಳನ್ನು ವಿಚಾರಣೆ ನಡೆಸಲಿದೆ.

ಈ ಮಧ್ಯೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಧ್ಯಕ್ಷೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಏಪ್ರಿಲ್ 16 ರಂದು ಕೋಲ್ಕತ್ತಾದಲ್ಲಿ ರಾಜ್ಯ ಇಮಾಮ್‌ಗಳು ಮತ್ತು ಇತರ ಧರ್ಮಗುರುಗಳೊಂದಿಗೆ ಸಭೆ ನಡೆಸಲಿದ್ದಾರೆ. ಆ ದಿನವೇ ವಕ್ಫ್ ಕಾಯ್ದೆಯ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಕೆಲವೇ ದಿನಗಳ ಹಿಂದೆ, ಮಮತಾ ಬ್ಯಾನರ್ಜಿ ಅವರು ತಮ್ಮ ಸರ್ಕಾರವು ರಾಜ್ಯದ ಮುಸ್ಲಿಂ ಸಮುದಾಯಕ್ಕೆ ಅವರ ಆಸ್ತಿಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಎಂದು ಭರವಸೆ ನೀಡಿದರು.

ಬಂಗಾಳದಲ್ಲಿ ಮುಸ್ಲಿಮರು ಸುಮಾರು 30% ರಷ್ಟಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಪ್ರಮುಖ ಮತಬ್ಯಾಂಕ್ ಆಗಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ಚುನಾವಣೆಗಳು ನಡೆಯಲಿವೆ.

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...