Homeಚಳವಳಿದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಒಂದು ವಾರದಿಂದ ಲಕ್ಷಾಂತರ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟಕ್ಕೆ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ಚಲೋ ಬೆಂಬಲಿಸಿ ಪ್ರತಿಭಟನೆಗಳು ನಡೆದಿದ್ದು, ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಚಳವಳಿಯನ್ನು ಹತ್ತಿಕ್ಕಲು ರೈತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಕೂಡಲೇ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು. ರೈತರ ಬೇಡಿಕೆ ಒಂದೇ. ಅದು ಕೃಷಿ ಸಂಬಂಧಿ ಸುಗ್ರಿವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂಬುದು. ಅದನ್ನು ಬಿಟ್ಟು ಬೇರೆ ಯಾವುದೇ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಬದಲಿಗೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರ ರೈತ ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಅಮಾನವೀಯವಾಗ ವರ್ತಿಸುತ್ತಿದೆ. ರೈತರ ಬೇಡಿಕೆಯ ಕುರಿತು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದೆ. ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದರು.

ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಹೋರಾಟನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ ಷರತ್ತುಗಳನ್ನು ವಿಧಿಸುತ್ತಿದೆ. ಕೃಷಿನೀತಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಎನ್ನುತ್ತಿದೆ. ಮಾತುಕತೆಗೆ ಆಹ್ವಾನಿಸುವುದು ಮತ್ತು ಕೃಷಿನೀತಿಗಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವುದು ಕೇಂದ್ರ ಸರ್ಕಾರದ ದ್ವಂದ್ವ ಧೋರಣೆಗೆ ಹಿಡಿದ ಕನ್ನಡಿ ಆಗಿದೆ. ದೆಹಲಿ ಬುಕಾರಿ ಮೈದಾನವನ್ನೇ ಓಪನ್ ಜೈಲು ಮಾಡಲು ಸಚಿವ ಅಮಿತ್ ಶಾ ನಿರ್ಧರಿಸಿದಂತಿದೆ. ಕೇಂದ್ರದ ಈ ನಡೆ ಖಂಡನೀಯ. ಕೇಂದ್ರ ತನ್ನ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಹೋರಾಟ ತೀವ್ರ ಗೊಳ್ಳಲಿದೆ. ಬೀದಿಬೀದಿಗಳಲ್ಲೂ ರೈತರು ಚಳವಳಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವೈದ್ಯ ಡಾ.ಬಸವರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರನ್ನು ಉಗ್ರರಂತೆ ಬಿಂಬಿಸುವುದು ಸರಿಯಲ್ಲ. ರೈತರು ಹಕ್ಕುಗಳಿಗಾಗಿ ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮುಕ್ತಮನಸ್ಸಿನಿಂದ ರೈತರ ಜೊತೆ ಮಾತುಕತೆ ಮಾಡಬೇಕು. ರೈತರು ದೇಶಕ್ಕೆ ಅನ್ನ ನೀಡುವವರು. ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸಲು ಮುಂದಾಗಬೇಕು. ರೈತರು ಇಲ್ಲದಿದ್ದರೆ ಅನ್ನವೇ ಸಿಗದಂತಹ ವಾತಾವರಣ ನಿರ್ಮಾಣವಾಗುತ್ತದೆ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ “ಕೇಂದ್ರದ ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನೋಡುತ್ತಿದೆ. ರೈತರೇ ಇಂದು ಜಿಡಿಪಿ ಹೆಚ್ಚಳಕ್ಕೆ ಕಾರಣ ಎಂಬುದನ್ನು ಮರೆಯಬಾರದು. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸೇನೆಯನ್ನು ಇಳಿಸಿದೆ. ಶತ್ರುಗಳ ವಿರುದ್ಧ ಸೇನೆಯನ್ನು ಇಳಿಸಬೇಕಿತ್ತು. ಆದರೆ ಇಲ್ಲಿ ಉಲ್ಟಾ ಆಗಿದೆ. ರೈತರ ಮೇಲೆ ಆಶ್ರುವಾಯು, ಜಲಪಿರಂಗಿ, ಲಾಠೀ ಚಾರ್ಜ್ ಮಾಡಿದರು. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ, ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಬೇಕು. ಸುಪ್ರೀಂಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ನೀಡಬೇಕು. ಇದು ಆಗದಿರುವುದು ಕಳವಳಕಾರಿ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ  ಕೊಳಗೇರಿ ನಿವಾಸಿಗಳ ಹಿತಕ್ಷಣಾ ವೇದಿಕೆಯ ಎ.ನರಸಿಂಹಮೂರ್ತಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಸಮತಾ ವೇದಿಕೆಯ ನಾಯಕಿ ಡಾ.ಅರುಂಧತಿ, ಮಹಿಳಾಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರತಿಭಟನೆ
ಚಿತ್ರದುರ್ಗದಲ್ಲಿ ಪ್ರತಿಭಟನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...