Homeಚಳವಳಿದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಒಂದು ವಾರದಿಂದ ಲಕ್ಷಾಂತರ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟಕ್ಕೆ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ಚಲೋ ಬೆಂಬಲಿಸಿ ಪ್ರತಿಭಟನೆಗಳು ನಡೆದಿದ್ದು, ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಚಳವಳಿಯನ್ನು ಹತ್ತಿಕ್ಕಲು ರೈತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಕೂಡಲೇ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು. ರೈತರ ಬೇಡಿಕೆ ಒಂದೇ. ಅದು ಕೃಷಿ ಸಂಬಂಧಿ ಸುಗ್ರಿವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂಬುದು. ಅದನ್ನು ಬಿಟ್ಟು ಬೇರೆ ಯಾವುದೇ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಬದಲಿಗೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರ ರೈತ ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಅಮಾನವೀಯವಾಗ ವರ್ತಿಸುತ್ತಿದೆ. ರೈತರ ಬೇಡಿಕೆಯ ಕುರಿತು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದೆ. ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದರು.

ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಹೋರಾಟನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ ಷರತ್ತುಗಳನ್ನು ವಿಧಿಸುತ್ತಿದೆ. ಕೃಷಿನೀತಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಎನ್ನುತ್ತಿದೆ. ಮಾತುಕತೆಗೆ ಆಹ್ವಾನಿಸುವುದು ಮತ್ತು ಕೃಷಿನೀತಿಗಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವುದು ಕೇಂದ್ರ ಸರ್ಕಾರದ ದ್ವಂದ್ವ ಧೋರಣೆಗೆ ಹಿಡಿದ ಕನ್ನಡಿ ಆಗಿದೆ. ದೆಹಲಿ ಬುಕಾರಿ ಮೈದಾನವನ್ನೇ ಓಪನ್ ಜೈಲು ಮಾಡಲು ಸಚಿವ ಅಮಿತ್ ಶಾ ನಿರ್ಧರಿಸಿದಂತಿದೆ. ಕೇಂದ್ರದ ಈ ನಡೆ ಖಂಡನೀಯ. ಕೇಂದ್ರ ತನ್ನ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಹೋರಾಟ ತೀವ್ರ ಗೊಳ್ಳಲಿದೆ. ಬೀದಿಬೀದಿಗಳಲ್ಲೂ ರೈತರು ಚಳವಳಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವೈದ್ಯ ಡಾ.ಬಸವರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರನ್ನು ಉಗ್ರರಂತೆ ಬಿಂಬಿಸುವುದು ಸರಿಯಲ್ಲ. ರೈತರು ಹಕ್ಕುಗಳಿಗಾಗಿ ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮುಕ್ತಮನಸ್ಸಿನಿಂದ ರೈತರ ಜೊತೆ ಮಾತುಕತೆ ಮಾಡಬೇಕು. ರೈತರು ದೇಶಕ್ಕೆ ಅನ್ನ ನೀಡುವವರು. ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸಲು ಮುಂದಾಗಬೇಕು. ರೈತರು ಇಲ್ಲದಿದ್ದರೆ ಅನ್ನವೇ ಸಿಗದಂತಹ ವಾತಾವರಣ ನಿರ್ಮಾಣವಾಗುತ್ತದೆ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ “ಕೇಂದ್ರದ ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನೋಡುತ್ತಿದೆ. ರೈತರೇ ಇಂದು ಜಿಡಿಪಿ ಹೆಚ್ಚಳಕ್ಕೆ ಕಾರಣ ಎಂಬುದನ್ನು ಮರೆಯಬಾರದು. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸೇನೆಯನ್ನು ಇಳಿಸಿದೆ. ಶತ್ರುಗಳ ವಿರುದ್ಧ ಸೇನೆಯನ್ನು ಇಳಿಸಬೇಕಿತ್ತು. ಆದರೆ ಇಲ್ಲಿ ಉಲ್ಟಾ ಆಗಿದೆ. ರೈತರ ಮೇಲೆ ಆಶ್ರುವಾಯು, ಜಲಪಿರಂಗಿ, ಲಾಠೀ ಚಾರ್ಜ್ ಮಾಡಿದರು. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ, ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಬೇಕು. ಸುಪ್ರೀಂಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ನೀಡಬೇಕು. ಇದು ಆಗದಿರುವುದು ಕಳವಳಕಾರಿ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ  ಕೊಳಗೇರಿ ನಿವಾಸಿಗಳ ಹಿತಕ್ಷಣಾ ವೇದಿಕೆಯ ಎ.ನರಸಿಂಹಮೂರ್ತಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಸಮತಾ ವೇದಿಕೆಯ ನಾಯಕಿ ಡಾ.ಅರುಂಧತಿ, ಮಹಿಳಾಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರತಿಭಟನೆ
ಚಿತ್ರದುರ್ಗದಲ್ಲಿ ಪ್ರತಿಭಟನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...