Homeಮುಖಪುಟಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

ಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸುತ್ತಿದ್ದಂತೆ ಅಸ್ಸಾಂ, ಕೇರಳ ಸೇರಿದಂತೆ ದೇಶದ ವಿವಿದೆಡೆ ಪ್ರತಿಭಟನೆ ಭುಗಿಲೆದ್ದಿದೆ.

ನಿನ್ನೆ (ಮಾ.11) ಸಂಜೆ ಸಿಎಎ ಜಾರಿಯಾಗುತ್ತಿದ್ದಂತೆ ಮಲಪ್ಪುರಂನಲ್ಲಿ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಮೊದಲು ಪ್ರತಿಭಟನೆ ನಡೆಸಿತು. ಆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡ ಎರಡು ರೈಲುಗಳನ್ನು ತಡೆದು ಕೇಂದ್ರದ ನಿಲುವಿನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಲಪ್ಪುರಂನ ಕುನ್ನುಮ್ಮಲ್‌ನಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತು. ಮಲಪ್ಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷ ವಿ.ವಾಸಿಫ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಂತರ ಡಿವೈಎಫ್‌ಐ ಕಾರ್ಯಕರ್ತರು ಕೋಝಿಕ್ಕೋಡ್, ಕೊಲ್ಲಂ ಹಾಗೂ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಮಲಬಾರ್ ಎಕ್ಸ್ ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ರೈಲು ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪ್ರತಿಭಟನೆಯಿಂದ ಅರ್ಧ ಗಂಟೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮತ್ತೊಂದೆಡೆ ಎರ್ನಾಕುಲಂ ಸೌತ್‌ನಲ್ಲಿ ಮಾವೇಲಿ ಎಕ್ಸ್‌ಪ್ರೆಸ್ ರೈಲು ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಎಲ್‌ಡಿಎಫ್-ಯುಡಿಎಫ್ ಜಂಟಿ ಸಮರ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಮೈತ್ರಿಕೂಟ ಯುಡಿಎಫ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಸಿಪಿಐ (ಎಂ) ನಾಯಕ ಮತ್ತು ರಾಜ್ಯ ಕಾನೂನು ಸಚಿವ ಪಿ ರಾಜೀವ್ ಅವರು, “ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಸಿಎಎ ಜಾರಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಕರೆ ನೀಡಿದ್ದು, “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಪ್ರಜೆಗಳನ್ನು ಒಡೆದು ಆಳುವ ಈ ಕಾನೂನನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

“ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಿದೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ” ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಖ್ಯಸ್ಥ ಪಿ ಕುಂಞಾಲಿಕುಟ್ಟಿ ಹೇಳಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ : ಪಿಣರಾಯಿ ವಿಜಯನ್

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚಿಸಿದ್ದಾರೆ. ಸಂಸತ್‌ನಲ್ಲಿ ಸಿಎಎ ಮಸೂದೆ ಅಂಗೀಕರಿಸಿದಾಗಲೇ ಕೇರಳದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿತ್ತು ಮತ್ತು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಸಿಪಿಐ, ಸಿಪಿಐ(ಎಂ), ಡಿವೈಎಫ್‌ಐ, ಮುಸ್ಲಿಂ ಲೀಗ್, ಎಂಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಕೆಎಸ್‌ಎಸ್‌ಎಫ್‌ ಸೇರಿದಂತೆ ರಾಜಕೀಯ, ಧಾರ್ಮಿಕ ಸಂಘಟನೆಗಳು ಮತ್ತೊಮ್ಮೆ ಸಿಎಎ ವಿರುದ್ದ ಹೋರಾಟಕ್ಕೆ ಸಿದ್ದತೆ ನಡೆಸಿದೆ.

ಅಸ್ಸಾಂನಲ್ಲಿ ಪ್ರತಿಭಟನೆ

ಸಿಎಎ-ಎನ್‌ಆರ್‌ಸಿ ಜಾರಿಯಾದರೆ ಅದರ ಹೆಚ್ಚಿನ ಪರಿಣಾಮ ಉಂಟಾಗುವುದು ಅಸ್ಸಾಂ ಮೇಲೆ. ಹಾಗಾಗಿ, ಸಿಎಎ ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದಾಗ ಅಸ್ಸಾಂನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಇದೀಗ ಸಿಎಎ ಜಾರಿ ಬೆನ್ನಲ್ಲೆ ಮತ್ತೊಮ್ಮೆ ಪ್ರತಿಭಟನೆಗೆ ಅಸ್ಸಾಂನ ವಿವಿಧ ಸಂಘಟನೆಗಳು ಮುಂದಾಗಿವೆ.

ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್ (ಎಎಎಸ್‌ಯು) ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಸಿಎಎ ವಿರುದ್ದ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜ್ಯಾದ್ಯಂತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ ಮತ್ತು ಸಿಎಎ ಪ್ರತಿಗಳನ್ನು ಸುಡುತ್ತಿದೆ.

ಶಾಂತಿಯುತವಾಗಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸುವುದಾಗಿ ಮತ್ತು ಸಿಎಎ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಎಎಸ್‌ಯು ಘೋಷಿಸಿದೆ.

ಸಿಎಎ ವಿರೋಧಿ ಆಂದೋಲನದಿಂದ ರೂಪುಗೊಂಡ ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಸಕ್ರಿಯವಾಗಿ ಪ್ರತಿಭಟನೆ ನಡೆಸುತ್ತಿವೆ. ಆಮ್ ಆದ್ಮಿ ಪಕ್ಷವೂ ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿದೆ.

ಸಿಎಂ ಶರ್ಮಾ ಎಚ್ಚರಿಕೆ

ಅಸ್ಸಾಂನಲ್ಲಿ ಕಾನೂನು ಮೀರಿ ಪ್ರತಿಭಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ. ರಾಜಕೀಯ ಪಕ್ಷಗಳು ಕಾನೂನು ಮೀರಿದರೆ ನೋಂದಣಿ ರದ್ದಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುವಾಹಟಿ ಪೊಲೀಸರಿಂದ ಎಚ್ಚರಿಕೆ

ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ಇಲ್ಲ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...