Homeಮುಖಪುಟಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

ಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸುತ್ತಿದ್ದಂತೆ ಅಸ್ಸಾಂ, ಕೇರಳ ಸೇರಿದಂತೆ ದೇಶದ ವಿವಿದೆಡೆ ಪ್ರತಿಭಟನೆ ಭುಗಿಲೆದ್ದಿದೆ.

ನಿನ್ನೆ (ಮಾ.11) ಸಂಜೆ ಸಿಎಎ ಜಾರಿಯಾಗುತ್ತಿದ್ದಂತೆ ಮಲಪ್ಪುರಂನಲ್ಲಿ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಮೊದಲು ಪ್ರತಿಭಟನೆ ನಡೆಸಿತು. ಆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡ ಎರಡು ರೈಲುಗಳನ್ನು ತಡೆದು ಕೇಂದ್ರದ ನಿಲುವಿನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಲಪ್ಪುರಂನ ಕುನ್ನುಮ್ಮಲ್‌ನಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತು. ಮಲಪ್ಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷ ವಿ.ವಾಸಿಫ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಂತರ ಡಿವೈಎಫ್‌ಐ ಕಾರ್ಯಕರ್ತರು ಕೋಝಿಕ್ಕೋಡ್, ಕೊಲ್ಲಂ ಹಾಗೂ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಮಲಬಾರ್ ಎಕ್ಸ್ ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ರೈಲು ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪ್ರತಿಭಟನೆಯಿಂದ ಅರ್ಧ ಗಂಟೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮತ್ತೊಂದೆಡೆ ಎರ್ನಾಕುಲಂ ಸೌತ್‌ನಲ್ಲಿ ಮಾವೇಲಿ ಎಕ್ಸ್‌ಪ್ರೆಸ್ ರೈಲು ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಎಲ್‌ಡಿಎಫ್-ಯುಡಿಎಫ್ ಜಂಟಿ ಸಮರ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಮೈತ್ರಿಕೂಟ ಯುಡಿಎಫ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಸಿಪಿಐ (ಎಂ) ನಾಯಕ ಮತ್ತು ರಾಜ್ಯ ಕಾನೂನು ಸಚಿವ ಪಿ ರಾಜೀವ್ ಅವರು, “ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಸಿಎಎ ಜಾರಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಕರೆ ನೀಡಿದ್ದು, “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಪ್ರಜೆಗಳನ್ನು ಒಡೆದು ಆಳುವ ಈ ಕಾನೂನನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

“ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಿದೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ” ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಖ್ಯಸ್ಥ ಪಿ ಕುಂಞಾಲಿಕುಟ್ಟಿ ಹೇಳಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ : ಪಿಣರಾಯಿ ವಿಜಯನ್

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚಿಸಿದ್ದಾರೆ. ಸಂಸತ್‌ನಲ್ಲಿ ಸಿಎಎ ಮಸೂದೆ ಅಂಗೀಕರಿಸಿದಾಗಲೇ ಕೇರಳದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿತ್ತು ಮತ್ತು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಸಿಪಿಐ, ಸಿಪಿಐ(ಎಂ), ಡಿವೈಎಫ್‌ಐ, ಮುಸ್ಲಿಂ ಲೀಗ್, ಎಂಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಕೆಎಸ್‌ಎಸ್‌ಎಫ್‌ ಸೇರಿದಂತೆ ರಾಜಕೀಯ, ಧಾರ್ಮಿಕ ಸಂಘಟನೆಗಳು ಮತ್ತೊಮ್ಮೆ ಸಿಎಎ ವಿರುದ್ದ ಹೋರಾಟಕ್ಕೆ ಸಿದ್ದತೆ ನಡೆಸಿದೆ.

ಅಸ್ಸಾಂನಲ್ಲಿ ಪ್ರತಿಭಟನೆ

ಸಿಎಎ-ಎನ್‌ಆರ್‌ಸಿ ಜಾರಿಯಾದರೆ ಅದರ ಹೆಚ್ಚಿನ ಪರಿಣಾಮ ಉಂಟಾಗುವುದು ಅಸ್ಸಾಂ ಮೇಲೆ. ಹಾಗಾಗಿ, ಸಿಎಎ ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದಾಗ ಅಸ್ಸಾಂನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಇದೀಗ ಸಿಎಎ ಜಾರಿ ಬೆನ್ನಲ್ಲೆ ಮತ್ತೊಮ್ಮೆ ಪ್ರತಿಭಟನೆಗೆ ಅಸ್ಸಾಂನ ವಿವಿಧ ಸಂಘಟನೆಗಳು ಮುಂದಾಗಿವೆ.

ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್ (ಎಎಎಸ್‌ಯು) ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಸಿಎಎ ವಿರುದ್ದ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜ್ಯಾದ್ಯಂತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ ಮತ್ತು ಸಿಎಎ ಪ್ರತಿಗಳನ್ನು ಸುಡುತ್ತಿದೆ.

ಶಾಂತಿಯುತವಾಗಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸುವುದಾಗಿ ಮತ್ತು ಸಿಎಎ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಎಎಸ್‌ಯು ಘೋಷಿಸಿದೆ.

ಸಿಎಎ ವಿರೋಧಿ ಆಂದೋಲನದಿಂದ ರೂಪುಗೊಂಡ ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಸಕ್ರಿಯವಾಗಿ ಪ್ರತಿಭಟನೆ ನಡೆಸುತ್ತಿವೆ. ಆಮ್ ಆದ್ಮಿ ಪಕ್ಷವೂ ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿದೆ.

ಸಿಎಂ ಶರ್ಮಾ ಎಚ್ಚರಿಕೆ

ಅಸ್ಸಾಂನಲ್ಲಿ ಕಾನೂನು ಮೀರಿ ಪ್ರತಿಭಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ. ರಾಜಕೀಯ ಪಕ್ಷಗಳು ಕಾನೂನು ಮೀರಿದರೆ ನೋಂದಣಿ ರದ್ದಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುವಾಹಟಿ ಪೊಲೀಸರಿಂದ ಎಚ್ಚರಿಕೆ

ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ಇಲ್ಲ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...