Homeಮುಖಪುಟಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

ಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸುತ್ತಿದ್ದಂತೆ ಅಸ್ಸಾಂ, ಕೇರಳ ಸೇರಿದಂತೆ ದೇಶದ ವಿವಿದೆಡೆ ಪ್ರತಿಭಟನೆ ಭುಗಿಲೆದ್ದಿದೆ.

ನಿನ್ನೆ (ಮಾ.11) ಸಂಜೆ ಸಿಎಎ ಜಾರಿಯಾಗುತ್ತಿದ್ದಂತೆ ಮಲಪ್ಪುರಂನಲ್ಲಿ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಮೊದಲು ಪ್ರತಿಭಟನೆ ನಡೆಸಿತು. ಆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡ ಎರಡು ರೈಲುಗಳನ್ನು ತಡೆದು ಕೇಂದ್ರದ ನಿಲುವಿನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಲಪ್ಪುರಂನ ಕುನ್ನುಮ್ಮಲ್‌ನಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತು. ಮಲಪ್ಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷ ವಿ.ವಾಸಿಫ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಂತರ ಡಿವೈಎಫ್‌ಐ ಕಾರ್ಯಕರ್ತರು ಕೋಝಿಕ್ಕೋಡ್, ಕೊಲ್ಲಂ ಹಾಗೂ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಮಲಬಾರ್ ಎಕ್ಸ್ ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ರೈಲು ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪ್ರತಿಭಟನೆಯಿಂದ ಅರ್ಧ ಗಂಟೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮತ್ತೊಂದೆಡೆ ಎರ್ನಾಕುಲಂ ಸೌತ್‌ನಲ್ಲಿ ಮಾವೇಲಿ ಎಕ್ಸ್‌ಪ್ರೆಸ್ ರೈಲು ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಎಲ್‌ಡಿಎಫ್-ಯುಡಿಎಫ್ ಜಂಟಿ ಸಮರ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಮೈತ್ರಿಕೂಟ ಯುಡಿಎಫ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಸಿಪಿಐ (ಎಂ) ನಾಯಕ ಮತ್ತು ರಾಜ್ಯ ಕಾನೂನು ಸಚಿವ ಪಿ ರಾಜೀವ್ ಅವರು, “ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಸಿಎಎ ಜಾರಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಕರೆ ನೀಡಿದ್ದು, “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಪ್ರಜೆಗಳನ್ನು ಒಡೆದು ಆಳುವ ಈ ಕಾನೂನನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

“ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಿದೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ” ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಖ್ಯಸ್ಥ ಪಿ ಕುಂಞಾಲಿಕುಟ್ಟಿ ಹೇಳಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ : ಪಿಣರಾಯಿ ವಿಜಯನ್

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚಿಸಿದ್ದಾರೆ. ಸಂಸತ್‌ನಲ್ಲಿ ಸಿಎಎ ಮಸೂದೆ ಅಂಗೀಕರಿಸಿದಾಗಲೇ ಕೇರಳದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿತ್ತು ಮತ್ತು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಸಿಪಿಐ, ಸಿಪಿಐ(ಎಂ), ಡಿವೈಎಫ್‌ಐ, ಮುಸ್ಲಿಂ ಲೀಗ್, ಎಂಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಕೆಎಸ್‌ಎಸ್‌ಎಫ್‌ ಸೇರಿದಂತೆ ರಾಜಕೀಯ, ಧಾರ್ಮಿಕ ಸಂಘಟನೆಗಳು ಮತ್ತೊಮ್ಮೆ ಸಿಎಎ ವಿರುದ್ದ ಹೋರಾಟಕ್ಕೆ ಸಿದ್ದತೆ ನಡೆಸಿದೆ.

ಅಸ್ಸಾಂನಲ್ಲಿ ಪ್ರತಿಭಟನೆ

ಸಿಎಎ-ಎನ್‌ಆರ್‌ಸಿ ಜಾರಿಯಾದರೆ ಅದರ ಹೆಚ್ಚಿನ ಪರಿಣಾಮ ಉಂಟಾಗುವುದು ಅಸ್ಸಾಂ ಮೇಲೆ. ಹಾಗಾಗಿ, ಸಿಎಎ ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದಾಗ ಅಸ್ಸಾಂನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಇದೀಗ ಸಿಎಎ ಜಾರಿ ಬೆನ್ನಲ್ಲೆ ಮತ್ತೊಮ್ಮೆ ಪ್ರತಿಭಟನೆಗೆ ಅಸ್ಸಾಂನ ವಿವಿಧ ಸಂಘಟನೆಗಳು ಮುಂದಾಗಿವೆ.

ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್ (ಎಎಎಸ್‌ಯು) ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಸಿಎಎ ವಿರುದ್ದ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜ್ಯಾದ್ಯಂತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ ಮತ್ತು ಸಿಎಎ ಪ್ರತಿಗಳನ್ನು ಸುಡುತ್ತಿದೆ.

ಶಾಂತಿಯುತವಾಗಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸುವುದಾಗಿ ಮತ್ತು ಸಿಎಎ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಎಎಸ್‌ಯು ಘೋಷಿಸಿದೆ.

ಸಿಎಎ ವಿರೋಧಿ ಆಂದೋಲನದಿಂದ ರೂಪುಗೊಂಡ ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಸಕ್ರಿಯವಾಗಿ ಪ್ರತಿಭಟನೆ ನಡೆಸುತ್ತಿವೆ. ಆಮ್ ಆದ್ಮಿ ಪಕ್ಷವೂ ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿದೆ.

ಸಿಎಂ ಶರ್ಮಾ ಎಚ್ಚರಿಕೆ

ಅಸ್ಸಾಂನಲ್ಲಿ ಕಾನೂನು ಮೀರಿ ಪ್ರತಿಭಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ. ರಾಜಕೀಯ ಪಕ್ಷಗಳು ಕಾನೂನು ಮೀರಿದರೆ ನೋಂದಣಿ ರದ್ದಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುವಾಹಟಿ ಪೊಲೀಸರಿಂದ ಎಚ್ಚರಿಕೆ

ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ಇಲ್ಲ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...