Homeಮುಖಪುಟಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

ಕೇಂದ್ರದಿಂದ ಸಿಎಎ ಜಾರಿ: ದೇಶದ ವಿವಿದೆಡೆ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸುತ್ತಿದ್ದಂತೆ ಅಸ್ಸಾಂ, ಕೇರಳ ಸೇರಿದಂತೆ ದೇಶದ ವಿವಿದೆಡೆ ಪ್ರತಿಭಟನೆ ಭುಗಿಲೆದ್ದಿದೆ.

ನಿನ್ನೆ (ಮಾ.11) ಸಂಜೆ ಸಿಎಎ ಜಾರಿಯಾಗುತ್ತಿದ್ದಂತೆ ಮಲಪ್ಪುರಂನಲ್ಲಿ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ಮೊದಲು ಪ್ರತಿಭಟನೆ ನಡೆಸಿತು. ಆ ಬಳಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡ ಎರಡು ರೈಲುಗಳನ್ನು ತಡೆದು ಕೇಂದ್ರದ ನಿಲುವಿನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮಲಪ್ಪುರಂನ ಕುನ್ನುಮ್ಮಲ್‌ನಲ್ಲಿ ಡಿವೈಎಫ್‌ಐ ಪ್ರತಿಭಟನೆ ನಡೆಸಿತು. ಮಲಪ್ಪುರಂ ಲೋಕಸಭಾ ಕ್ಷೇತ್ರದ ಎಲ್‌ಡಿಎಫ್‌ ಅಭ್ಯರ್ಥಿ ಹಾಗೂ ಡಿವೈಎಫ್‌ಐ ರಾಜ್ಯಾಧ್ಯಕ್ಷ ವಿ.ವಾಸಿಫ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಂತರ ಡಿವೈಎಫ್‌ಐ ಕಾರ್ಯಕರ್ತರು ಕೋಝಿಕ್ಕೋಡ್, ಕೊಲ್ಲಂ ಹಾಗೂ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಕೋಝಿಕ್ಕೋಡ್‌ನಲ್ಲಿ ಮಲಬಾರ್ ಎಕ್ಸ್ ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ರೈಲು ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪ್ರತಿಭಟನೆಯಿಂದ ಅರ್ಧ ಗಂಟೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮತ್ತೊಂದೆಡೆ ಎರ್ನಾಕುಲಂ ಸೌತ್‌ನಲ್ಲಿ ಮಾವೇಲಿ ಎಕ್ಸ್‌ಪ್ರೆಸ್ ರೈಲು ತಡೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

ಎಲ್‌ಡಿಎಫ್-ಯುಡಿಎಫ್ ಜಂಟಿ ಸಮರ

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಮೈತ್ರಿಕೂಟ ಯುಡಿಎಫ್ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಹಿರಿಯ ಸಿಪಿಐ (ಎಂ) ನಾಯಕ ಮತ್ತು ರಾಜ್ಯ ಕಾನೂನು ಸಚಿವ ಪಿ ರಾಜೀವ್ ಅವರು, “ಈ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಬಿಜೆಪಿ ಗಮನವನ್ನು ಬೇರೆಡೆ ಸೆಳೆಯಲು ಮತ್ತು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

ಸಿಎಎ ಜಾರಿ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ.ಸುಧಾಕರನ್ ಕರೆ ನೀಡಿದ್ದು, “ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ದೇಶದ ಪ್ರಜೆಗಳನ್ನು ಒಡೆದು ಆಳುವ ಈ ಕಾನೂನನ್ನು ಅರಬ್ಬೀ ಸಮುದ್ರಕ್ಕೆ ಎಸೆಯುತ್ತೇವೆ” ಎಂದಿದ್ದಾರೆ.

“ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸಿದೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ” ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮುಖ್ಯಸ್ಥ ಪಿ ಕುಂಞಾಲಿಕುಟ್ಟಿ ಹೇಳಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ : ಪಿಣರಾಯಿ ವಿಜಯನ್

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುನರುಚ್ಚಿಸಿದ್ದಾರೆ. ಸಂಸತ್‌ನಲ್ಲಿ ಸಿಎಎ ಮಸೂದೆ ಅಂಗೀಕರಿಸಿದಾಗಲೇ ಕೇರಳದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿತ್ತು ಮತ್ತು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಸಿಪಿಐ, ಸಿಪಿಐ(ಎಂ), ಡಿವೈಎಫ್‌ಐ, ಮುಸ್ಲಿಂ ಲೀಗ್, ಎಂಎಸ್‌ಎಫ್‌, ಎಸ್‌ಎಸ್‌ಎಫ್‌, ಎಸ್‌ಕೆಎಸ್‌ಎಸ್‌ಎಫ್‌ ಸೇರಿದಂತೆ ರಾಜಕೀಯ, ಧಾರ್ಮಿಕ ಸಂಘಟನೆಗಳು ಮತ್ತೊಮ್ಮೆ ಸಿಎಎ ವಿರುದ್ದ ಹೋರಾಟಕ್ಕೆ ಸಿದ್ದತೆ ನಡೆಸಿದೆ.

ಅಸ್ಸಾಂನಲ್ಲಿ ಪ್ರತಿಭಟನೆ

ಸಿಎಎ-ಎನ್‌ಆರ್‌ಸಿ ಜಾರಿಯಾದರೆ ಅದರ ಹೆಚ್ಚಿನ ಪರಿಣಾಮ ಉಂಟಾಗುವುದು ಅಸ್ಸಾಂ ಮೇಲೆ. ಹಾಗಾಗಿ, ಸಿಎಎ ಮಸೂದೆ ಸಂಸತ್ತಿನಲ್ಲಿ ಅಂಗೀಕರಿಸಿದಾಗ ಅಸ್ಸಾಂನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು. ಇದೀಗ ಸಿಎಎ ಜಾರಿ ಬೆನ್ನಲ್ಲೆ ಮತ್ತೊಮ್ಮೆ ಪ್ರತಿಭಟನೆಗೆ ಅಸ್ಸಾಂನ ವಿವಿಧ ಸಂಘಟನೆಗಳು ಮುಂದಾಗಿವೆ.

ಆಲ್ ಅಸ್ಸಾಂ ಸ್ಟೂಡೆಂಟ್ ಯೂನಿಯನ್ (ಎಎಎಸ್‌ಯು) ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಸಿಎಎ ವಿರುದ್ದ ಪ್ರತಿಭಟನೆ ಪ್ರಾರಂಭಿಸಿದ್ದು, ರಾಜ್ಯಾದ್ಯಂತ ರ್‍ಯಾಲಿಗಳನ್ನು ಆಯೋಜಿಸುತ್ತಿದೆ ಮತ್ತು ಸಿಎಎ ಪ್ರತಿಗಳನ್ನು ಸುಡುತ್ತಿದೆ.

ಶಾಂತಿಯುತವಾಗಿ ಕಾನೂನು ಚೌಕಟ್ಟಿನೊಳಗೆ ಪ್ರತಿಭಟನೆ ನಡೆಸುವುದಾಗಿ ಮತ್ತು ಸಿಎಎ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಎಎಎಸ್‌ಯು ಘೋಷಿಸಿದೆ.

ಸಿಎಎ ವಿರೋಧಿ ಆಂದೋಲನದಿಂದ ರೂಪುಗೊಂಡ ರೈಜೋರ್ ದಳ ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಸಕ್ರಿಯವಾಗಿ ಪ್ರತಿಭಟನೆ ನಡೆಸುತ್ತಿವೆ. ಆಮ್ ಆದ್ಮಿ ಪಕ್ಷವೂ ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿದೆ.

ಸಿಎಂ ಶರ್ಮಾ ಎಚ್ಚರಿಕೆ

ಅಸ್ಸಾಂನಲ್ಲಿ ಕಾನೂನು ಮೀರಿ ಪ್ರತಿಭಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಹೇಳಿದ್ದಾರೆ. ರಾಜಕೀಯ ಪಕ್ಷಗಳು ಕಾನೂನು ಮೀರಿದರೆ ನೋಂದಣಿ ರದ್ದಾಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗುವಾಹಟಿ ಪೊಲೀಸರಿಂದ ಎಚ್ಚರಿಕೆ

ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ಇಲ್ಲ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದು, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...