Homeಮುಖಪುಟಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಸೇನೆ ತನ್ನದೇ ದೇಶದ ಮೂವರು ನಾಗರಿಕರನ್ನು ಹತ್ಯೆ ಮಾಡಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಐಡಿಎಫ್‌ನಿಂದಾದ ದೊಡ್ಡ ಪ್ರಮಾದ ಎಂದು ಹೇಳಿದ್ದರು. ಇದೀಗ ಘಟನೆಯ ಬೆನ್ನಲ್ಲೇ ಇಸ್ರೇಲ್‌ನಲ್ಲಿ ವ್ಯಾಪಕವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಮೂವರು ನಾಗರಿಕರ ಹತ್ಯೆ ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಗಾಝಾದಲ್ಲಿ ಹಮಾಸ್‌ ವಶದಲ್ಲಿದ್ದ ತಮ್ಮದೇ ದೇಶದ ಮೂವರು ಒತ್ತೆಯಾಳುಗಳನ್ನು ಇಸ್ರೇಲ್‌ ಸೈನಿಕರು ಹತ್ಯೆ ನಡೆಸಿರುವುದನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಟೆಲ್ ಅವಿವ್‌ ನಗರದ ಮಧ್ಯಭಾಗದಲ್ಲಿರುವ ಮುಖ್ಯ ರಸ್ತೆಯನ್ನು ತಡೆದು ಒತ್ತೆಯಾಳುಗಳ ತಕ್ಷಣದ ಬಿಡುಗಡೆಗೆ ಒತ್ತಾಯಿಸಿದ್ದಾರೆ ಎಂದು ಮಾದ್ಯಮ ವರದಿ ತಿಳಿಸಿದೆ.

ಪ್ರತಿಭಟನಾಕಾರರು ಈಗ ಸಮಯ ಮೀರುತ್ತಿದೆ. ಒತ್ತೆಯಾಳುಗಳನ್ನು ಮನೆಗೆ ಕರೆ ತನ್ನಿ ಎಂದು ಘೋಷಣೆಗಳನ್ನು ಕೂಗಿದ್ದು, ಪ್ರತಿ ಕೊನೆಯ ಒತ್ತೆಯಾಳು ಬಿಡುಗಡೆಯಾಗುವವರೆಗೂ ಯಾವುದೇ ವಿಜಯವಿಲ್ಲ ಎಂದು ಹೇಳುತ್ತಿದ್ದಾರೆ. ಇದಲ್ಲದೆ ಒತ್ತೆಯಾಳುಗಳ ಚಿತ್ರಗಳಿರುವ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಇಸ್ರೇಲ್‌ ಸೇನಾ ಪ್ರಧಾನ ಕಚೇರಿಯತ್ತ ಮೆರವಣಿಗೆ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರು ಒತ್ತೆಯಾಳುಗಳ ಬಿಡುಗಡೆಗೆ  ನೆತನ್ಯಾಹು ಅವರ ಸರ್ಕಾರವು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಇದಲ್ಲದೆ ನವೆಂಬರ್‌ನಲ್ಲಿ ನಡೆಸಿದಂತೆ ಮತ್ತೊಂದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ.

ಅ.7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದರು.

ಅಲ್ ಜಝೀರಾ ಪತ್ರಕರ್ತನ ಹತ್ಯೆ

ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಝಾದಲ್ಲಿ ಅಲ್ ಜಝೀರಾ ಮಾದ್ಯಮ ಸಂಸ್ಥೆಯ ಕ್ಯಾಮರಾಮ್ಯಾನ್ ಸಮರ್ ಅಬು ದಕ್ಕಾ ಕೊಲ್ಲಲ್ಪಟ್ಟಿದ್ದಾರೆ ಎಂದು ಅಲ್ ಜಝೀರಾ ಹೇಳಿದೆ.

ಕತಾರ್ ನೆಟ್‌ವರ್ಕ್ ಪ್ರಕಾರ, ಇಸ್ರೇಲ್ ಯುದ್ಧ ಸಂಭವಿಸಿದಾಗ ಅಬು ದಕ್ಕಾ, ವರದಿಗಾರ ವೇಲ್ ದಹದೌಹ್ ಜೊತೆಗೆ ಖಾನ್ ಯೂನಿಸ್‌ನಲ್ಲಿರುವ ಶಾಲಾ ಮೈದಾನದಿಂದ ವರದಿ ಮಾಡುತ್ತಿದ್ದರು. ಖಾನ್ ಯೂನಿಸ್ ದಕ್ಷಿಣ ಗಾಝಾದ ಪ್ರಮುಖ ನಗರವಾಗಿದೆ. ಈ ಘಟನೆಯ ಬಗ್ಗೆ ಇಸ್ರೇಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಬು ದಕ್ಕಾ ಹತ್ಯೆಯ ಮೊದಲೇ  ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಪ್ರಾರಂಭವಾದ ಬಳಿಕ ಕನಿಷ್ಠ 63 ಪತ್ರಕರ್ತರು ಹತ್ಯೆ ನಡೆದಿದೆ ಎನ್ನವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿರುವ ಇನ್ನೂ 17 ಭಾರತದ ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...