Homeಮುಖಪುಟಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ...

ಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ ಪ್ರತಿಭಟನೆ!

- Advertisement -
- Advertisement -

ಪ್ರಯಾಗ್‌ರಾಜ್‌ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ ನಡೆಸುವಂತೆ ಮತ್ತು ಮೃತಪಟ್ಟವರ ಪಟ್ಟಿ ನೀಡುವಂತೆ ಒತ್ತಾಯಿಸಿ ಸೋಮವಾರ (ಫೆ.3) ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡೆಸಿದವು.

ಬಜೆಟ್‌ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ, ಬಜೆಟ್ ಮಂಡನೆ ಬಳಿಕ ಇಂದು ಕಲಾಪ ಪ್ರಾರಂಭಗೊಳ್ಳುತ್ತಿದ್ದಂತೆ, ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಎದ್ದು ನಿಂತು ಇತ್ತೀಚೆಗೆ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.
ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿ, ಸರ್ಕಾರದ ವಿರುದ್ದ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ, ವಿರೋಧ ಪಕ್ಷದ ಸಂದರು ಪ್ರಶ್ನೋತ್ತರ ಅವಧಿಯನ್ನು ಸ್ಥಗಿತಗೊಳಿಸುವಂತೆ ಮತ್ತು ಕಾಲ್ತುಳಿತದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಪೂರ್ಣ ಪಟ್ಟಿಯನ್ನು ಕೇಳಿದರು.

ಈ ವೇಳೆ, ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಿರುವ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು ಎಂದು ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸಂಸದರಿಗೆ ತಿಳಿಸಿದರು.

“ಗೌರವಾನ್ವಿತ ರಾಷ್ಟ್ರಪತಿಗಳು ಮಹಾ ಕುಂಭ ಮೇಳದ ದುರಂತದ ಬಗ್ಗೆ ಉಲ್ಲೇಖಿಸಿದ್ದಾರೆ. ಚರ್ಚೆಯ ಸಮಯದಲ್ಲಿ ನೀವು ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು” ಎಂದರು.

ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ಸದಸ್ಯರು ಸದನವನ್ನು ಸುಗಮವಾಗಿ ನಡೆಸಲು ಅವಕಾಶ ನೀಡಬೇಕು ಎಂದು ಓಂ ಬಿರ್ಲಾ ಕೋರಿದರು.

ಚರ್ಚೆಯಲ್ಲಿ ಭಾಗವಹಿಸಲು ಸದಸ್ಯರು ದಿನಗಟ್ಟಲೆ ಕಾಯುವುದರಿಂದ ಪ್ರಶ್ನೋತ್ತರ ಅವಧಿ ಸುಗಮವಾಗಿ ನಡೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸದನ ಸರಿಯಾಗಿ ನಡೆಯುವುದು ನಿಮಗೆ ಇಷ್ಟವಿಲ್ಲ. ಜನರು ನಿಮ್ಮನ್ನು ಆಯ್ಕೆ ಮಾಡಿದ್ದು ಸದನವನ್ನು ಅಡ್ಡಿಪಡಿಸಲು ಮತ್ತು ಘೋಷಣೆಗಳನ್ನು ಕೂಗಲಾ? ಎಂದು ಕೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ಸದಸ್ಯರ ನಡವಳಿಕೆಯನ್ನು ಖಂಡಿಸಿದರು. “ಇಂತಹ ಅಡ್ಡಿ ಮತ್ತು ಗದ್ದಲ ಒಳ್ಳೆಯದಲ್ಲ” ಎಂದರು.

“ನೀವು (ಸ್ಪೀಕರ್) ಅವರಿಗೆ (ವಿರೋಧ ಪಕ್ಷ) ಪದೇ ಪದೇ ಮನವಿ ಮಾಡಿದ್ದೀರಿ. ಆದರೆ ಅವರು ಕೇಳುತ್ತಿಲ್ಲ” ಎಂದು ಸ್ಪೀಕರ್ ಪರ ವಹಿಸಿ ರಿಜಿಜು ಮಾತನಾಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದಾಗ, ಪ್ರಶ್ನೋತ್ತರ ಅವಧಿಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಈ ಸಮಯದಲ್ಲಿ ಸದನ ಸುಗಮವಾಗಿ ನಡೆಯುವಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸ್ಪೀಕರ್ ಬಿರ್ಲಾ ಹೇಳಿದರು.

ಮಧ್ಯಾಹ್ನ 12 ಗಂಟೆಯ ನಂತರ (ಶೂನ್ಯ ಅವಧಿ) ಎಲ್ಲಾ ಸಂಬಂಧಿತ ಸಮಸ್ಯೆಗಳನ್ನು ಎತ್ತುವಂತೆ ನಾವು ವ್ಯವಸ್ಥೆ ಮಾಡಬೇಕು ಎಂದರು.

ಪ್ರಶ್ನೋತ್ತರ ಅವಧಿ ಮುಗಿದ ನಂತರ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ನಂತರ ಅವರು ಹಿಂತಿರುಗಿದರು.

ರಾಜ್ಯಸಭೆಯಲ್ಲೂ ಪ್ರತಿಭಟನೆ

ಕಳೆದ ವಾರ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವಾರು ಜನರು ಸಾವನ್ನಪ್ಪಿದ ಘಟನೆಯ ಬಗ್ಗೆ ತಕ್ಷಣದ ಚರ್ಚೆಗೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್ ಒಪ್ಪದ ಕಾರಣ, ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.

ಪಟ್ಟಿ ಮಾಡಲಾದ ವ್ಯವಹಾರ ಸ್ಥಗಿತಗೊಳಿಸಿ, ಮಹಾ ಕುಂಭ ಮೇಳದ ಕಾಲ್ತುಳಿತ ಘಟನೆ ಸೇರಿದಂತೆ ಇತರ ಸಮಸ್ಯೆಗಳ ಕುರಿತ ಚರ್ಚೆಗೆ ಆಗ್ರಹಿಸಿ ನಿಯಮ 267ರ ಅಡಿ 9 ನೋಟಿಸ್‌ಗಳನ್ನು ಸ್ವೀಕರಿಸಿದ್ದಾಗಿ ಜಗದೀಪ್‌ ಧನ್ಕರ್ ತಿಳಿಸಿದರು.

ಪ್ರಮೋದ್ ತಿವಾರಿ ಮತ್ತು ದಿಗ್ವಿಜಯ ಸಿಂಗ್ (ಕಾಂಗ್ರೆಸ್), ಸಾಗರಿಕಾ ಘೋಷ್ (ಟಿಎಂಸಿ), ಜಾವೇದ್ ಅಲಿ ಮತ್ತು ರಾಮ್‌ಜಿ ಲಾಲ್ ಸುಮನ್ (ಸಮಾಜವಾದಿ ಪಕ್ಷ), ಮತ್ತು ಜಾನ್ ಬ್ರಿಟಾಸ್ (ಸಿಪಿಐ) ಮಹಾಕುಂಭ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಸಂವಿಧಾನ ಮತ್ತು ಅಂಬೇಡ್ಕರ್‌ಗೆ ಅವಮಾನ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರು ನೀಡಿದ ತಾರತಮ್ಯ ಮತ್ತು ಜಾತಿವಾದಿ ಹೇಳಿಕೆಗಳು ನೋಟಿಸ್‌ಗಳಲ್ಲಿ ಪ್ರಸ್ತಾಪಿಸಿದ ವಿಷಯಗಳು ಎಂದು ವರದಿಯಾಗಿದೆ.

ನಿಯಮ 267ರ ಅಡಿಯಲ್ಲಿನ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ತಮ್ಮ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಧನ್ಕರ್ ಅವರು, ನೋಟಿಸ್‌ಗಳನ್ನು ಅನುಮೋದಿಸಲಿಲ್ಲ ಮತ್ತು ನಿಗದಿತ ಶೂನ್ಯ ವೇಳೆಯಲ್ಲಿ ಮುಂದುವರೆದರು. ಆ ಸಮಯದಲ್ಲಿ ಸದಸ್ಯರು ಅಧ್ಯಕ್ಷರ ಅನುಮತಿಯೊಂದಿಗೆ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ನೋಟಿಸ್ ತಿರಸ್ಕಾರವು ಅಧಿವೇಶನದಲ್ಲಿ ಕಾಂಗ್ರೆಸ್, ಎಸ್‌ಪಿ, ಡಿಎಂಕೆ, ಎಎಪಿ, ಆರ್‌ಜೆಡಿ, ಸಿಪಿಐ ಮತ್ತು ಸಿಪಿಎಂ ಸೇರಿದಂತೆ ವಿರೋಧ ಪಕ್ಷದ ಸಂಸದರ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...