Homeಮುಖಪುಟಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ...

ಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ ಪ್ರತಿಭಟನೆ!

- Advertisement -
- Advertisement -

ಪ್ರಯಾಗ್‌ರಾಜ್‌ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ ನಡೆಸುವಂತೆ ಮತ್ತು ಮೃತಪಟ್ಟವರ ಪಟ್ಟಿ ನೀಡುವಂತೆ ಒತ್ತಾಯಿಸಿ ಸೋಮವಾರ (ಫೆ.3) ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡೆಸಿದವು.

ಬಜೆಟ್‌ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ, ಬಜೆಟ್ ಮಂಡನೆ ಬಳಿಕ ಇಂದು ಕಲಾಪ ಪ್ರಾರಂಭಗೊಳ್ಳುತ್ತಿದ್ದಂತೆ, ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಎದ್ದು ನಿಂತು ಇತ್ತೀಚೆಗೆ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.
ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿ, ಸರ್ಕಾರದ ವಿರುದ್ದ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ, ವಿರೋಧ ಪಕ್ಷದ ಸಂದರು ಪ್ರಶ್ನೋತ್ತರ ಅವಧಿಯನ್ನು ಸ್ಥಗಿತಗೊಳಿಸುವಂತೆ ಮತ್ತು ಕಾಲ್ತುಳಿತದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಪೂರ್ಣ ಪಟ್ಟಿಯನ್ನು ಕೇಳಿದರು.

ಈ ವೇಳೆ, ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಿರುವ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು ಎಂದು ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸಂಸದರಿಗೆ ತಿಳಿಸಿದರು.

“ಗೌರವಾನ್ವಿತ ರಾಷ್ಟ್ರಪತಿಗಳು ಮಹಾ ಕುಂಭ ಮೇಳದ ದುರಂತದ ಬಗ್ಗೆ ಉಲ್ಲೇಖಿಸಿದ್ದಾರೆ. ಚರ್ಚೆಯ ಸಮಯದಲ್ಲಿ ನೀವು ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು” ಎಂದರು.

ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ಸದಸ್ಯರು ಸದನವನ್ನು ಸುಗಮವಾಗಿ ನಡೆಸಲು ಅವಕಾಶ ನೀಡಬೇಕು ಎಂದು ಓಂ ಬಿರ್ಲಾ ಕೋರಿದರು.

ಚರ್ಚೆಯಲ್ಲಿ ಭಾಗವಹಿಸಲು ಸದಸ್ಯರು ದಿನಗಟ್ಟಲೆ ಕಾಯುವುದರಿಂದ ಪ್ರಶ್ನೋತ್ತರ ಅವಧಿ ಸುಗಮವಾಗಿ ನಡೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸದನ ಸರಿಯಾಗಿ ನಡೆಯುವುದು ನಿಮಗೆ ಇಷ್ಟವಿಲ್ಲ. ಜನರು ನಿಮ್ಮನ್ನು ಆಯ್ಕೆ ಮಾಡಿದ್ದು ಸದನವನ್ನು ಅಡ್ಡಿಪಡಿಸಲು ಮತ್ತು ಘೋಷಣೆಗಳನ್ನು ಕೂಗಲಾ? ಎಂದು ಕೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ಸದಸ್ಯರ ನಡವಳಿಕೆಯನ್ನು ಖಂಡಿಸಿದರು. “ಇಂತಹ ಅಡ್ಡಿ ಮತ್ತು ಗದ್ದಲ ಒಳ್ಳೆಯದಲ್ಲ” ಎಂದರು.

“ನೀವು (ಸ್ಪೀಕರ್) ಅವರಿಗೆ (ವಿರೋಧ ಪಕ್ಷ) ಪದೇ ಪದೇ ಮನವಿ ಮಾಡಿದ್ದೀರಿ. ಆದರೆ ಅವರು ಕೇಳುತ್ತಿಲ್ಲ” ಎಂದು ಸ್ಪೀಕರ್ ಪರ ವಹಿಸಿ ರಿಜಿಜು ಮಾತನಾಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದಾಗ, ಪ್ರಶ್ನೋತ್ತರ ಅವಧಿಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಈ ಸಮಯದಲ್ಲಿ ಸದನ ಸುಗಮವಾಗಿ ನಡೆಯುವಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸ್ಪೀಕರ್ ಬಿರ್ಲಾ ಹೇಳಿದರು.

ಮಧ್ಯಾಹ್ನ 12 ಗಂಟೆಯ ನಂತರ (ಶೂನ್ಯ ಅವಧಿ) ಎಲ್ಲಾ ಸಂಬಂಧಿತ ಸಮಸ್ಯೆಗಳನ್ನು ಎತ್ತುವಂತೆ ನಾವು ವ್ಯವಸ್ಥೆ ಮಾಡಬೇಕು ಎಂದರು.

ಪ್ರಶ್ನೋತ್ತರ ಅವಧಿ ಮುಗಿದ ನಂತರ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ನಂತರ ಅವರು ಹಿಂತಿರುಗಿದರು.

ರಾಜ್ಯಸಭೆಯಲ್ಲೂ ಪ್ರತಿಭಟನೆ

ಕಳೆದ ವಾರ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವಾರು ಜನರು ಸಾವನ್ನಪ್ಪಿದ ಘಟನೆಯ ಬಗ್ಗೆ ತಕ್ಷಣದ ಚರ್ಚೆಗೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್ ಒಪ್ಪದ ಕಾರಣ, ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.

ಪಟ್ಟಿ ಮಾಡಲಾದ ವ್ಯವಹಾರ ಸ್ಥಗಿತಗೊಳಿಸಿ, ಮಹಾ ಕುಂಭ ಮೇಳದ ಕಾಲ್ತುಳಿತ ಘಟನೆ ಸೇರಿದಂತೆ ಇತರ ಸಮಸ್ಯೆಗಳ ಕುರಿತ ಚರ್ಚೆಗೆ ಆಗ್ರಹಿಸಿ ನಿಯಮ 267ರ ಅಡಿ 9 ನೋಟಿಸ್‌ಗಳನ್ನು ಸ್ವೀಕರಿಸಿದ್ದಾಗಿ ಜಗದೀಪ್‌ ಧನ್ಕರ್ ತಿಳಿಸಿದರು.

ಪ್ರಮೋದ್ ತಿವಾರಿ ಮತ್ತು ದಿಗ್ವಿಜಯ ಸಿಂಗ್ (ಕಾಂಗ್ರೆಸ್), ಸಾಗರಿಕಾ ಘೋಷ್ (ಟಿಎಂಸಿ), ಜಾವೇದ್ ಅಲಿ ಮತ್ತು ರಾಮ್‌ಜಿ ಲಾಲ್ ಸುಮನ್ (ಸಮಾಜವಾದಿ ಪಕ್ಷ), ಮತ್ತು ಜಾನ್ ಬ್ರಿಟಾಸ್ (ಸಿಪಿಐ) ಮಹಾಕುಂಭ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಸಂವಿಧಾನ ಮತ್ತು ಅಂಬೇಡ್ಕರ್‌ಗೆ ಅವಮಾನ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರು ನೀಡಿದ ತಾರತಮ್ಯ ಮತ್ತು ಜಾತಿವಾದಿ ಹೇಳಿಕೆಗಳು ನೋಟಿಸ್‌ಗಳಲ್ಲಿ ಪ್ರಸ್ತಾಪಿಸಿದ ವಿಷಯಗಳು ಎಂದು ವರದಿಯಾಗಿದೆ.

ನಿಯಮ 267ರ ಅಡಿಯಲ್ಲಿನ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ತಮ್ಮ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಧನ್ಕರ್ ಅವರು, ನೋಟಿಸ್‌ಗಳನ್ನು ಅನುಮೋದಿಸಲಿಲ್ಲ ಮತ್ತು ನಿಗದಿತ ಶೂನ್ಯ ವೇಳೆಯಲ್ಲಿ ಮುಂದುವರೆದರು. ಆ ಸಮಯದಲ್ಲಿ ಸದಸ್ಯರು ಅಧ್ಯಕ್ಷರ ಅನುಮತಿಯೊಂದಿಗೆ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ನೋಟಿಸ್ ತಿರಸ್ಕಾರವು ಅಧಿವೇಶನದಲ್ಲಿ ಕಾಂಗ್ರೆಸ್, ಎಸ್‌ಪಿ, ಡಿಎಂಕೆ, ಎಎಪಿ, ಆರ್‌ಜೆಡಿ, ಸಿಪಿಐ ಮತ್ತು ಸಿಪಿಎಂ ಸೇರಿದಂತೆ ವಿರೋಧ ಪಕ್ಷದ ಸಂಸದರ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...