Homeಮುಖಪುಟಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ...

ಮಹಾಕುಂಭ ಮೇಳ ಕಾಲ್ತುಳಿತದ ಕುರಿತು ಚರ್ಚೆಗೆ ಪಟ್ಟು ; ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ತೀವ್ರ ಪ್ರತಿಭಟನೆ!

- Advertisement -
- Advertisement -

ಪ್ರಯಾಗ್‌ರಾಜ್‌ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಚರ್ಚೆ ನಡೆಸುವಂತೆ ಮತ್ತು ಮೃತಪಟ್ಟವರ ಪಟ್ಟಿ ನೀಡುವಂತೆ ಒತ್ತಾಯಿಸಿ ಸೋಮವಾರ (ಫೆ.3) ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡೆಸಿದವು.

ಬಜೆಟ್‌ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣ, ಬಜೆಟ್ ಮಂಡನೆ ಬಳಿಕ ಇಂದು ಕಲಾಪ ಪ್ರಾರಂಭಗೊಳ್ಳುತ್ತಿದ್ದಂತೆ, ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ಎದ್ದು ನಿಂತು ಇತ್ತೀಚೆಗೆ ಮಹಾ ಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.
ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿ, ಸರ್ಕಾರದ ವಿರುದ್ದ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ, ವಿರೋಧ ಪಕ್ಷದ ಸಂದರು ಪ್ರಶ್ನೋತ್ತರ ಅವಧಿಯನ್ನು ಸ್ಥಗಿತಗೊಳಿಸುವಂತೆ ಮತ್ತು ಕಾಲ್ತುಳಿತದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟು ಹಿಡಿದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಪೂರ್ಣ ಪಟ್ಟಿಯನ್ನು ಕೇಳಿದರು.

ಈ ವೇಳೆ, ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಿರುವ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು ಎಂದು ಸ್ಪೀಕರ್ ಓಂ ಬಿರ್ಲಾ ಪ್ರತಿಭಟನಾ ನಿರತ ಸಂಸದರಿಗೆ ತಿಳಿಸಿದರು.

“ಗೌರವಾನ್ವಿತ ರಾಷ್ಟ್ರಪತಿಗಳು ಮಹಾ ಕುಂಭ ಮೇಳದ ದುರಂತದ ಬಗ್ಗೆ ಉಲ್ಲೇಖಿಸಿದ್ದಾರೆ. ಚರ್ಚೆಯ ಸಮಯದಲ್ಲಿ ನೀವು ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು” ಎಂದರು.

ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವ ಪ್ರಶ್ನೋತ್ತರ ಅವಧಿಗೆ ಅಡ್ಡಿಪಡಿಸಬಾರದು. ವಿರೋಧ ಪಕ್ಷದ ಸದಸ್ಯರು ಸದನವನ್ನು ಸುಗಮವಾಗಿ ನಡೆಸಲು ಅವಕಾಶ ನೀಡಬೇಕು ಎಂದು ಓಂ ಬಿರ್ಲಾ ಕೋರಿದರು.

ಚರ್ಚೆಯಲ್ಲಿ ಭಾಗವಹಿಸಲು ಸದಸ್ಯರು ದಿನಗಟ್ಟಲೆ ಕಾಯುವುದರಿಂದ ಪ್ರಶ್ನೋತ್ತರ ಅವಧಿ ಸುಗಮವಾಗಿ ನಡೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸದನ ಸರಿಯಾಗಿ ನಡೆಯುವುದು ನಿಮಗೆ ಇಷ್ಟವಿಲ್ಲ. ಜನರು ನಿಮ್ಮನ್ನು ಆಯ್ಕೆ ಮಾಡಿದ್ದು ಸದನವನ್ನು ಅಡ್ಡಿಪಡಿಸಲು ಮತ್ತು ಘೋಷಣೆಗಳನ್ನು ಕೂಗಲಾ? ಎಂದು ಕೇಳಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಿರೋಧ ಪಕ್ಷದ ಸದಸ್ಯರ ನಡವಳಿಕೆಯನ್ನು ಖಂಡಿಸಿದರು. “ಇಂತಹ ಅಡ್ಡಿ ಮತ್ತು ಗದ್ದಲ ಒಳ್ಳೆಯದಲ್ಲ” ಎಂದರು.

“ನೀವು (ಸ್ಪೀಕರ್) ಅವರಿಗೆ (ವಿರೋಧ ಪಕ್ಷ) ಪದೇ ಪದೇ ಮನವಿ ಮಾಡಿದ್ದೀರಿ. ಆದರೆ ಅವರು ಕೇಳುತ್ತಿಲ್ಲ” ಎಂದು ಸ್ಪೀಕರ್ ಪರ ವಹಿಸಿ ರಿಜಿಜು ಮಾತನಾಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದಾಗ, ಪ್ರಶ್ನೋತ್ತರ ಅವಧಿಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಈ ಸಮಯದಲ್ಲಿ ಸದನ ಸುಗಮವಾಗಿ ನಡೆಯುವಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸ್ಪೀಕರ್ ಬಿರ್ಲಾ ಹೇಳಿದರು.

ಮಧ್ಯಾಹ್ನ 12 ಗಂಟೆಯ ನಂತರ (ಶೂನ್ಯ ಅವಧಿ) ಎಲ್ಲಾ ಸಂಬಂಧಿತ ಸಮಸ್ಯೆಗಳನ್ನು ಎತ್ತುವಂತೆ ನಾವು ವ್ಯವಸ್ಥೆ ಮಾಡಬೇಕು ಎಂದರು.

ಪ್ರಶ್ನೋತ್ತರ ಅವಧಿ ಮುಗಿದ ನಂತರ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ನಂತರ ಅವರು ಹಿಂತಿರುಗಿದರು.

ರಾಜ್ಯಸಭೆಯಲ್ಲೂ ಪ್ರತಿಭಟನೆ

ಕಳೆದ ವಾರ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವಾರು ಜನರು ಸಾವನ್ನಪ್ಪಿದ ಘಟನೆಯ ಬಗ್ಗೆ ತಕ್ಷಣದ ಚರ್ಚೆಗೆ ಸಭಾಧ್ಯಕ್ಷ ಜಗದೀಪ್‌ ಧನ್ಕರ್ ಒಪ್ಪದ ಕಾರಣ, ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.

ಪಟ್ಟಿ ಮಾಡಲಾದ ವ್ಯವಹಾರ ಸ್ಥಗಿತಗೊಳಿಸಿ, ಮಹಾ ಕುಂಭ ಮೇಳದ ಕಾಲ್ತುಳಿತ ಘಟನೆ ಸೇರಿದಂತೆ ಇತರ ಸಮಸ್ಯೆಗಳ ಕುರಿತ ಚರ್ಚೆಗೆ ಆಗ್ರಹಿಸಿ ನಿಯಮ 267ರ ಅಡಿ 9 ನೋಟಿಸ್‌ಗಳನ್ನು ಸ್ವೀಕರಿಸಿದ್ದಾಗಿ ಜಗದೀಪ್‌ ಧನ್ಕರ್ ತಿಳಿಸಿದರು.

ಪ್ರಮೋದ್ ತಿವಾರಿ ಮತ್ತು ದಿಗ್ವಿಜಯ ಸಿಂಗ್ (ಕಾಂಗ್ರೆಸ್), ಸಾಗರಿಕಾ ಘೋಷ್ (ಟಿಎಂಸಿ), ಜಾವೇದ್ ಅಲಿ ಮತ್ತು ರಾಮ್‌ಜಿ ಲಾಲ್ ಸುಮನ್ (ಸಮಾಜವಾದಿ ಪಕ್ಷ), ಮತ್ತು ಜಾನ್ ಬ್ರಿಟಾಸ್ (ಸಿಪಿಐ) ಮಹಾಕುಂಭ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಸಂವಿಧಾನ ಮತ್ತು ಅಂಬೇಡ್ಕರ್‌ಗೆ ಅವಮಾನ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಸಚಿವರು ನೀಡಿದ ತಾರತಮ್ಯ ಮತ್ತು ಜಾತಿವಾದಿ ಹೇಳಿಕೆಗಳು ನೋಟಿಸ್‌ಗಳಲ್ಲಿ ಪ್ರಸ್ತಾಪಿಸಿದ ವಿಷಯಗಳು ಎಂದು ವರದಿಯಾಗಿದೆ.

ನಿಯಮ 267ರ ಅಡಿಯಲ್ಲಿನ ನೋಟಿಸ್‌ಗಳಿಗೆ ಸಂಬಂಧಿಸಿದಂತೆ ತಮ್ಮ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಧನ್ಕರ್ ಅವರು, ನೋಟಿಸ್‌ಗಳನ್ನು ಅನುಮೋದಿಸಲಿಲ್ಲ ಮತ್ತು ನಿಗದಿತ ಶೂನ್ಯ ವೇಳೆಯಲ್ಲಿ ಮುಂದುವರೆದರು. ಆ ಸಮಯದಲ್ಲಿ ಸದಸ್ಯರು ಅಧ್ಯಕ್ಷರ ಅನುಮತಿಯೊಂದಿಗೆ ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ನೋಟಿಸ್ ತಿರಸ್ಕಾರವು ಅಧಿವೇಶನದಲ್ಲಿ ಕಾಂಗ್ರೆಸ್, ಎಸ್‌ಪಿ, ಡಿಎಂಕೆ, ಎಎಪಿ, ಆರ್‌ಜೆಡಿ, ಸಿಪಿಐ ಮತ್ತು ಸಿಪಿಎಂ ಸೇರಿದಂತೆ ವಿರೋಧ ಪಕ್ಷದ ಸಂಸದರ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...