Homeಅಂತರಾಷ್ಟ್ರೀಯವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.

ನಗರದ ಮಧ್ಯಭಾಗದಲ್ಲಿ ಭಾನುವಾರ ನೂರಾರು ಪ್ರತಿಭಟನಾಕಾರರು ವಲಸಿಗರ ಶೋಧ ಕಾರ್ಯಾಚರಣೆಯಲ್ಲಿ ಬಂಧಿತರಾದವರನ್ನು ಬಂಧಿಸಿಟ್ಟಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಂಧನ ಕೇಂದ್ರದ ಬಳಿ ಬೀಡುಬಿಟ್ಟಿದ್ದ ಭದ್ರತಾ ಪಡೆಗಳ ವಿರುದ್ದ “ಶೇಮ್, ಶೇಮ್” “ವಾಪಸ್ ಹೋಗಿ” ಇತ್ಯಾದಿ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿರುವುದು ಮತ್ತು ಭದ್ರತಾ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವುದನ್ನು ನೋಡಬಹುದು.

“ಒಂದು ಕಾಲದಲ್ಲಿ ಅಮೆರಿಕದ ಶ್ರೇಷ್ಠ ನಗರವಾಗಿದ್ದ ಲಾಸ್ ಏಂಜಲೀಸ್ ಅನ್ನು ಅಕ್ರಮ ವಲಸಿಗರು ಮತ್ತು ಕ್ರಿಮಿನಲ್‌ಗಳು ಆಕ್ರಮಿಸಿಕೊಂಡಿದ್ದಾರೆ. ಈಗ ಹಿಂಸಾತ್ಮಕ, ದಂಗೆಕೋರ ಗುಂಪುಗಳು ನಮ್ಮ ಗಡಿಪಾರು ಕಾರ್ಯಾಚರಣೆಗಳನ್ನು ನಿಲ್ಲಿಸಲು ಫೆಡರಲ್ ಏಜೆಂಟ್‌ಗಳ ಮೇಲೆ ದಾಳಿ ಮಾಡುತ್ತಿವೆ. ಆದರೆ, ಈ ಕಾನೂನುಬಾಹಿರ ಗಲಭೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ. ಲಾಸ್ ಏಂಜಲೀಸ್ ಅನ್ನು ವಲಸಿಗರ ಆಕ್ರಮಣದಿಂದ ಮುಕ್ತಗೊಳಿಸಲು ಮತ್ತು ಈ ವಲಸಿಗರ ಗಲಭೆಗಳನ್ನು ಕೊನೆಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅಕ್ರಮ ವಲಸಿಗರನ್ನು ಹೊರಹಾಕಿ ಲಾಸ್‌ ಏಂಜಲೀಸ್ ಅನ್ನು ಸ್ವಚ್ಛ ಮಾಡುತ್ತೇವೆ” ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದರೂ, ಟ್ರಂಪ್ 1807ರ ದಂಗೆ ಕಾಯ್ದೆಯನ್ನು ಇನ್ನೂ ಜಾರಿಗೊಳಿಸಿಲ್ಲ. ಆದರೂ, ಅಶಾಂತಿ ಹರಡಿದರೆ ವ್ಯಾಪಕ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಸೂಚನೆಯನ್ನು ಅವರು ನೀಡಿದ್ದಾರೆ. “ನಮ್ಮ ದೇಶದಲ್ಲಿ ಧಂಗೆ ನಡೆಯಲು ಬಿಡುವುದಿಲ್ಲ. ಸೇನೆ ನಿಯೋಜಿಸುತ್ತೇವೆ” ಎಂದು ಮಾಧ್ಯಮಗಳಿಗೆ ಟ್ರಂಪ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಸೇನೆ ನಿಯೋಜನೆಯನ್ನು “ದೇಶದ ಸಾರ್ವಭೌಮತ್ವದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ. ಸೇನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಫೆಡರಲ್ ಅಧಿಕಾರಿಗಳನ್ನು ಅವರು ಒತ್ತಾಯಿಸಿದ್ದಾರೆ.

ಹಲವರ ಬಂಧನ

ಪ್ರತಿಭಟನಾ ನಿರತ ಹಲವರನ್ನು ಲಾಸ್ ಏಂಜಲೀಸ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. “ಲಾಸ್‌ ಏಂಜಲೀಸ್ ಡೌನ್‌ಟೌನ್‌ನ ಸಿವಿಕ್ ಸೆಂಟರ್‌ನಲ್ಲಿ ಕಾನೂನು ಬಾಹಿರ ಸಭೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಜನರು ಡೌನ್‌ಟೌನ್ ಸಿವಿಕ್ ಸೆಂಟರ್‌ನಿಂದ ದೂರ ಇರಿ” ಎಂದು ಭಾನುವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...