Homeಚಳವಳಿದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದ್ದು ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

- Advertisement -
- Advertisement -

ನಿನ್ನೆ ನಡೆದ ಮೂವರು ಕೇಂದ್ರ ಸಚಿವರೊಂದಿಗಿನ ರೈತ ಮುಖಂಡರ ಸಭೆಯ ನಿರ್ಧಾರಗಳಿಗೆ ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

AIKSCC (All India Kisan Sangarsh Coordination Committee) ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ಈ ನಿರ್ಧಾರವನ್ನು ತಿಳಿಸಿದೆ. ಸರ್ಕಾರದೊಂದಿಗೆ ನಡೆದ ಮಾತುಕತೆ ಅನಿರ್ದಿಷ್ಟವಾಗಿದ್ದು, ರೈತ ಸಂಘಟನೆಗಳಿಗೆ ಸರ್ಕಾರದ ಪ್ರಸ್ತಾಪ ಒಪ್ಪಿತವಾಗಿಲ್ಲ ಹೀಗಾಗಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ತಿಳಿಸಿದೆ.

35 ರೈತ ಮುಖಂಡರು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವ ಪಿಯೂಷ್ ಗೋಯಲ್ ಮತ್ತು  ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಅವರ ಸಚಿವರ ನಿಯೋಗವನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ತಿಳಿಸಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ಹಿಂತೆಗೆದುಕೊಳ್ಳುವುದು ಈ ಬೇಡಿಕೆಯಲ್ಲಿವೆ. 32 ರೈತ ಮುಖಂಡರು, ಪಂಜಾಬ್ ಒಕ್ಕೂಟಗಳು, ಹರಿಯಾಣದ ರೈತ ಮುಖಂಡರು,  ರಾಷ್ಟ್ರೀಯ ರೈತ ಸಂಘಟನೆಗಳಾದ ಎಐಕೆಎಸ್‌ಸಿಸಿ ಮತ್ತು ಆರ್‌ಕೆಎಂಎಸ್‌ ಪ್ರತಿನಿಧಿಗಳು ಸಭೆಯಲ್ಲಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದೆ. ಡಿಸೆಂಬರ್ 3(ನಾಳೆ)ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ರೈತರ ಆಕ್ಷೇಪಣೆಗಳನ್ನು ಪರಿಶೀಲಿಸಲು ಮತ್ತು ಅವರ ಕಳವಳಗಳನ್ನು ಅಧ್ಯಯನ ಮಾಡಲು 5 ಸದಸ್ಯರ ಸಮಿತಿಯನ್ನು ರಚಿಸುವ ಸರ್ಕಾರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಸರ್ಕಾರವು ಕೃಷಿ ಸಂಘಟನೆಗಳಿಗೆ ಕೃಷಿ ಮಸೂದೆಗಳ ಬಗ್ಗೆ ತಮ್ಮ ವಿಮರ್ಶೆಯನ್ನು ವಿವರವಾಗಿ ಒದಗಿಸಲು ಕೇಳಿದೆ. ಕೃಷಿ ಒಕ್ಕೂಟಗಳು ಸೂಚಿಸಿರುವ ಆಕ್ಷೇಪಣೆಗಳು ಮತ್ತು ನ್ಯೂನತೆಗಳನ್ನು ಪರಿಶೀಲಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದ್ದಾರೆ ಎಂದು ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಎಐಕೆಎಸ್‌ಸಿಸಿ ಘೋಷಿಸಿದೆ. ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಗುರುವಾರದೊಳಗೆ ಸರ್ಕಾರ ಒಪ್ಪದಿದ್ದರೆ ಮಹಾರಾಷ್ಟ್ರದಿಂದ ದೆಹಲಿಗೆ ಮೆರವಣಿಗೆ ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ರೈತ ಗುಂಪುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...