Homeಚಳವಳಿದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದ್ದು ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

- Advertisement -
- Advertisement -

ನಿನ್ನೆ ನಡೆದ ಮೂವರು ಕೇಂದ್ರ ಸಚಿವರೊಂದಿಗಿನ ರೈತ ಮುಖಂಡರ ಸಭೆಯ ನಿರ್ಧಾರಗಳಿಗೆ ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

AIKSCC (All India Kisan Sangarsh Coordination Committee) ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ಈ ನಿರ್ಧಾರವನ್ನು ತಿಳಿಸಿದೆ. ಸರ್ಕಾರದೊಂದಿಗೆ ನಡೆದ ಮಾತುಕತೆ ಅನಿರ್ದಿಷ್ಟವಾಗಿದ್ದು, ರೈತ ಸಂಘಟನೆಗಳಿಗೆ ಸರ್ಕಾರದ ಪ್ರಸ್ತಾಪ ಒಪ್ಪಿತವಾಗಿಲ್ಲ ಹೀಗಾಗಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ತಿಳಿಸಿದೆ.

35 ರೈತ ಮುಖಂಡರು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವ ಪಿಯೂಷ್ ಗೋಯಲ್ ಮತ್ತು  ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಅವರ ಸಚಿವರ ನಿಯೋಗವನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ತಿಳಿಸಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ಹಿಂತೆಗೆದುಕೊಳ್ಳುವುದು ಈ ಬೇಡಿಕೆಯಲ್ಲಿವೆ. 32 ರೈತ ಮುಖಂಡರು, ಪಂಜಾಬ್ ಒಕ್ಕೂಟಗಳು, ಹರಿಯಾಣದ ರೈತ ಮುಖಂಡರು,  ರಾಷ್ಟ್ರೀಯ ರೈತ ಸಂಘಟನೆಗಳಾದ ಎಐಕೆಎಸ್‌ಸಿಸಿ ಮತ್ತು ಆರ್‌ಕೆಎಂಎಸ್‌ ಪ್ರತಿನಿಧಿಗಳು ಸಭೆಯಲ್ಲಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದೆ. ಡಿಸೆಂಬರ್ 3(ನಾಳೆ)ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ರೈತರ ಆಕ್ಷೇಪಣೆಗಳನ್ನು ಪರಿಶೀಲಿಸಲು ಮತ್ತು ಅವರ ಕಳವಳಗಳನ್ನು ಅಧ್ಯಯನ ಮಾಡಲು 5 ಸದಸ್ಯರ ಸಮಿತಿಯನ್ನು ರಚಿಸುವ ಸರ್ಕಾರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಸರ್ಕಾರವು ಕೃಷಿ ಸಂಘಟನೆಗಳಿಗೆ ಕೃಷಿ ಮಸೂದೆಗಳ ಬಗ್ಗೆ ತಮ್ಮ ವಿಮರ್ಶೆಯನ್ನು ವಿವರವಾಗಿ ಒದಗಿಸಲು ಕೇಳಿದೆ. ಕೃಷಿ ಒಕ್ಕೂಟಗಳು ಸೂಚಿಸಿರುವ ಆಕ್ಷೇಪಣೆಗಳು ಮತ್ತು ನ್ಯೂನತೆಗಳನ್ನು ಪರಿಶೀಲಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದ್ದಾರೆ ಎಂದು ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಎಐಕೆಎಸ್‌ಸಿಸಿ ಘೋಷಿಸಿದೆ. ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಗುರುವಾರದೊಳಗೆ ಸರ್ಕಾರ ಒಪ್ಪದಿದ್ದರೆ ಮಹಾರಾಷ್ಟ್ರದಿಂದ ದೆಹಲಿಗೆ ಮೆರವಣಿಗೆ ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ರೈತ ಗುಂಪುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...