Homeಕರ್ನಾಟಕಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

- Advertisement -
- Advertisement -

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ ಮಾಡಿದೆ. ರಾಜಧಾನಿ ಗುವಾಹಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಳಲ್ಲಿ ಭಾರತೀಯ ಸೇನಾಪಡೆ, ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜನೆ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ. ಕರ್ಪ್ಯೂ ವಿಧಿಸಿರುವ ನಡುವೆಯೇ ಪ್ರತಿಭಟನೆಗಳು ತೀವ್ರಗೊಂಡಿವೆ. ಸಾವಿರಾರು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸೇನೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಅಸುನೀಗಿದ್ದಾರೆ. ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಅಸ್ಸಾಂ ರಾಜ್ಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದಾಗ 40 ಲಕ್ಷ ಮಂದಿ ಪಟ್ಟಿಯಿಂದ ಹೊರಗೆ ಉಳಿದಿದ್ದರು. ಇದು ತಾರತಮ್ಯದಿಂದ ಕೂಡಿದೆ ಎಂದು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್ ಮೊರೆ ಹೋದರು. ಪರಿಣಾಮ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಎರಡನೇ ಬಾರಿಗೆ ಎನ್.ಸಿ.ಆರ್ ನಡೆಯಿತು. ಈ ಪಟ್ಟಿಯಿಂದಲೂ 19 ಲಕ್ಷ ಹೊರಗುಳಿದರು. ಇಷ್ಟೆಲ್ಲಾ ಆದಾಗಲೂ ಮೌನವಹಿಸಿದ್ದ ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಿ ಕಾಯ್ದೆಯಾಗಿ ರೂಪಿಸುವ ಸಂದರ್ಭದಲ್ಲಿ ಇದರಿಂದ ಕೆರಳಿ ಅಸ್ಸಾಂ ಜನತೆ ಬೀದಿಗೆ ಇಳಿದಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರು, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಭಾಗವಹಿಸಿದ್ದು ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಅಷ್ಟೇ ಅಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ಕಾನೂನುಬಾಹಿರ, ತಾರತಮ್ಯದಿಂದ ಕೂಡಿದೆ. ಧರ್ಮಾಧಾರಿತವಾಗಿದೆ ಎಂದು ಸಂಸತ್ ಒಳಗೂ ಮತ್ತು ಹೊರಗೂ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸತೊಡಗಿದೆ. ಚಳಗಾಲದ ಅಧಿವೇಶನದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಭಾರೀ ಸದ್ದು ಮಾಡಿದ್ದು ಕಲಾಪವನ್ನು ನುಂಗಿ ಹಾಕಿದೆ. .

ಅಸ್ಸಾಂನಲ್ಲಿ ಪರಿಸ್ಥಿಗೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಶಿಲ್ಲಾಂಗ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.  ಕರ್ಪ್ಯೂ ವಿಧಿಸಿರುವ ನಡುವೆಯೇ ರಾತ್ರಿಯೂ ಪ್ರತಿಭಟನೆಗಳು ನಡೆದಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 22ರವರೆಗೆ ರಜೆ ಘೋಷಿಸಿದೆ. ತ್ರಿಪುರ, ಪಶ್ಚಿಮಬಂಗಾಳ ಮೊದಲಾದ ಅಂತರ್ ರಾಜ್ಯಗಳ ರೈಲು ಸೇವೆಯನ್ನು ಸ್ಥಗಿತೊಳಿಸಲಾಗಿದೆ. ವಿಮಾನಯಾನವೂ ಸ್ಥಬ್ದವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ಎಸ್.ಎಂ.ಎಸ್ ಸೇವೆಯವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುವುದು ಮತ್ತು ಶಾಂತಿಯನ್ನು ಕದಡುವುದನ್ನು ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇದು ಅನಿವಾರ್ಯ ಎಂದು ಸರ್ಕಾರ ಹೇಳಿದೆ.

ಮೊನ್ನೆ ತಾನೆ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಅಕ್ಟೋಬರ್ 31, 2014 ರೊಳಗೆ ದೇಶಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಪಾರ್ಸಿ, ಜೈನ, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಉಲ್ಲೇಖಿಸದೇ ಅವರನ್ನು ಪೌರತ್ವದಿಂದ ಹೊರಗಿಡುವ ಪ್ರಯತ್ನ ಸಂವಿಧಾನ ನೀಡುರುವ ಮೂಲಭೂತ ಹಕ್ಕುಗಳಿಗೆ ವಿರುದ್ದವಾಗಿದ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಲೋಕಸಭೆಯಲ್ಲಿ ಹೇಳಿದ್ದು ಇದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ದಕ್ಷಿಣ ರಾಜ್ಯಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಸ್ಸಾಂ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ದಕ್ಷಿಣಕ್ಕೂ ಹಬ್ಬಿದೆ. ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆಗೆ ತನ್ನ ವಿರೋಧ ದಾಖಲಿಸಿದೆ. ಚೆನ್ನೈಸಯಿದಾಪೇಟೆಯಲ್ಲಿ ಯುವ ನೇತಾರ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಆಡಳಿತಾರೂಢ ಎಐಎಡಿಎಂಕೆ ತಮಿಳು ವಿರೋಧಿ, ಅಲ್ಪಸಂಖ್ಯಾತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಇದೇ ವೇಳೆ ಡಿಎಂಕೆ ಮುಖ್ಯಸ್ಥ ಡಿಸೆಂಬರ್ 17ರಮದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರವರು ಕೇರಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲೂ ಪ್ರತಿಭಟನೆಗಳು ಶುರುವಾಗಿವೆ. ಉತ್ತರ ಕರ್ನಾಟಕದ ಕಲಬುರುಗಿಯಲ್ಲಿ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಸಿ.ಆರ್ ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಪ್ರತಿಭಟನೆಗಳು ಇನ್ನಷ್ಟು ತೀವ್ರಗೊಳ್ಳಲಿವೆ ಎಂಬ ಮುನ್ಸೂಚನೆ ದೊರೆತಿದೆ.

ಅಸ್ಸಾಂ ಒಪ್ಪಂದ 1987ರಲ್ಲಿ ಉಲ್ಲೇಖಿಸಿರುವಂತೆ 1971 ಮಾರ್ಚ್‌ 24ರ ಮಧ್ಯರಾತ್ರಿಯೊಳಗೆ ವಲಸೆ ಬಂದಿರುವವರು ಈ ದೇಶದಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ದೇಶಾದ್ಯಂತ ‌ಅನುಸರಿಸಲಾಗುವುದೇ ಎಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಸ್ಪಷ್ಟಪಡಿಸಿಲ್ಲ. ಆದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ನೋಂದಣಿ  ಮತ್ತು ಪೌರತ್ವ ಕಾಯ್ದೆಯನ್ನು ವಿರೋಧಿಸಬೇಕು ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ ಜೆಡಿಯು ತನ್ನ ನಿಲುವನ್ನು ಪರಿಶೀಲಿಸುವಂತೆಯೂ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸಂವಿಧಾನ ವಿರೋಧಿ ಎನ್.ಸಿ.ಆರ್ ಅನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಬಿಜೆಪಿ ಯಾವ ಮಾರ್ಗ ಅಸುಸರಿಸಲಿದೆ ಎಂಬುದನ್ನು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...