Homeಕರ್ನಾಟಕಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

- Advertisement -
- Advertisement -

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ ಮಾಡಿದೆ. ರಾಜಧಾನಿ ಗುವಾಹಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಳಲ್ಲಿ ಭಾರತೀಯ ಸೇನಾಪಡೆ, ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜನೆ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ. ಕರ್ಪ್ಯೂ ವಿಧಿಸಿರುವ ನಡುವೆಯೇ ಪ್ರತಿಭಟನೆಗಳು ತೀವ್ರಗೊಂಡಿವೆ. ಸಾವಿರಾರು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸೇನೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಅಸುನೀಗಿದ್ದಾರೆ. ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಅಸ್ಸಾಂ ರಾಜ್ಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದಾಗ 40 ಲಕ್ಷ ಮಂದಿ ಪಟ್ಟಿಯಿಂದ ಹೊರಗೆ ಉಳಿದಿದ್ದರು. ಇದು ತಾರತಮ್ಯದಿಂದ ಕೂಡಿದೆ ಎಂದು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್ ಮೊರೆ ಹೋದರು. ಪರಿಣಾಮ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಎರಡನೇ ಬಾರಿಗೆ ಎನ್.ಸಿ.ಆರ್ ನಡೆಯಿತು. ಈ ಪಟ್ಟಿಯಿಂದಲೂ 19 ಲಕ್ಷ ಹೊರಗುಳಿದರು. ಇಷ್ಟೆಲ್ಲಾ ಆದಾಗಲೂ ಮೌನವಹಿಸಿದ್ದ ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಿ ಕಾಯ್ದೆಯಾಗಿ ರೂಪಿಸುವ ಸಂದರ್ಭದಲ್ಲಿ ಇದರಿಂದ ಕೆರಳಿ ಅಸ್ಸಾಂ ಜನತೆ ಬೀದಿಗೆ ಇಳಿದಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರು, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಭಾಗವಹಿಸಿದ್ದು ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಅಷ್ಟೇ ಅಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ಕಾನೂನುಬಾಹಿರ, ತಾರತಮ್ಯದಿಂದ ಕೂಡಿದೆ. ಧರ್ಮಾಧಾರಿತವಾಗಿದೆ ಎಂದು ಸಂಸತ್ ಒಳಗೂ ಮತ್ತು ಹೊರಗೂ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸತೊಡಗಿದೆ. ಚಳಗಾಲದ ಅಧಿವೇಶನದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಭಾರೀ ಸದ್ದು ಮಾಡಿದ್ದು ಕಲಾಪವನ್ನು ನುಂಗಿ ಹಾಕಿದೆ. .

ಅಸ್ಸಾಂನಲ್ಲಿ ಪರಿಸ್ಥಿಗೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಶಿಲ್ಲಾಂಗ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.  ಕರ್ಪ್ಯೂ ವಿಧಿಸಿರುವ ನಡುವೆಯೇ ರಾತ್ರಿಯೂ ಪ್ರತಿಭಟನೆಗಳು ನಡೆದಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 22ರವರೆಗೆ ರಜೆ ಘೋಷಿಸಿದೆ. ತ್ರಿಪುರ, ಪಶ್ಚಿಮಬಂಗಾಳ ಮೊದಲಾದ ಅಂತರ್ ರಾಜ್ಯಗಳ ರೈಲು ಸೇವೆಯನ್ನು ಸ್ಥಗಿತೊಳಿಸಲಾಗಿದೆ. ವಿಮಾನಯಾನವೂ ಸ್ಥಬ್ದವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ಎಸ್.ಎಂ.ಎಸ್ ಸೇವೆಯವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುವುದು ಮತ್ತು ಶಾಂತಿಯನ್ನು ಕದಡುವುದನ್ನು ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇದು ಅನಿವಾರ್ಯ ಎಂದು ಸರ್ಕಾರ ಹೇಳಿದೆ.

ಮೊನ್ನೆ ತಾನೆ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಅಕ್ಟೋಬರ್ 31, 2014 ರೊಳಗೆ ದೇಶಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಪಾರ್ಸಿ, ಜೈನ, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಉಲ್ಲೇಖಿಸದೇ ಅವರನ್ನು ಪೌರತ್ವದಿಂದ ಹೊರಗಿಡುವ ಪ್ರಯತ್ನ ಸಂವಿಧಾನ ನೀಡುರುವ ಮೂಲಭೂತ ಹಕ್ಕುಗಳಿಗೆ ವಿರುದ್ದವಾಗಿದ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಲೋಕಸಭೆಯಲ್ಲಿ ಹೇಳಿದ್ದು ಇದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ದಕ್ಷಿಣ ರಾಜ್ಯಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಸ್ಸಾಂ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ದಕ್ಷಿಣಕ್ಕೂ ಹಬ್ಬಿದೆ. ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆಗೆ ತನ್ನ ವಿರೋಧ ದಾಖಲಿಸಿದೆ. ಚೆನ್ನೈಸಯಿದಾಪೇಟೆಯಲ್ಲಿ ಯುವ ನೇತಾರ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಆಡಳಿತಾರೂಢ ಎಐಎಡಿಎಂಕೆ ತಮಿಳು ವಿರೋಧಿ, ಅಲ್ಪಸಂಖ್ಯಾತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಇದೇ ವೇಳೆ ಡಿಎಂಕೆ ಮುಖ್ಯಸ್ಥ ಡಿಸೆಂಬರ್ 17ರಮದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರವರು ಕೇರಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲೂ ಪ್ರತಿಭಟನೆಗಳು ಶುರುವಾಗಿವೆ. ಉತ್ತರ ಕರ್ನಾಟಕದ ಕಲಬುರುಗಿಯಲ್ಲಿ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಸಿ.ಆರ್ ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಪ್ರತಿಭಟನೆಗಳು ಇನ್ನಷ್ಟು ತೀವ್ರಗೊಳ್ಳಲಿವೆ ಎಂಬ ಮುನ್ಸೂಚನೆ ದೊರೆತಿದೆ.

ಅಸ್ಸಾಂ ಒಪ್ಪಂದ 1987ರಲ್ಲಿ ಉಲ್ಲೇಖಿಸಿರುವಂತೆ 1971 ಮಾರ್ಚ್‌ 24ರ ಮಧ್ಯರಾತ್ರಿಯೊಳಗೆ ವಲಸೆ ಬಂದಿರುವವರು ಈ ದೇಶದಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ದೇಶಾದ್ಯಂತ ‌ಅನುಸರಿಸಲಾಗುವುದೇ ಎಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಸ್ಪಷ್ಟಪಡಿಸಿಲ್ಲ. ಆದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ನೋಂದಣಿ  ಮತ್ತು ಪೌರತ್ವ ಕಾಯ್ದೆಯನ್ನು ವಿರೋಧಿಸಬೇಕು ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ ಜೆಡಿಯು ತನ್ನ ನಿಲುವನ್ನು ಪರಿಶೀಲಿಸುವಂತೆಯೂ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸಂವಿಧಾನ ವಿರೋಧಿ ಎನ್.ಸಿ.ಆರ್ ಅನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಬಿಜೆಪಿ ಯಾವ ಮಾರ್ಗ ಅಸುಸರಿಸಲಿದೆ ಎಂಬುದನ್ನು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...