Homeಕರ್ನಾಟಕಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

- Advertisement -
- Advertisement -

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ ಮಾಡಿದೆ. ರಾಜಧಾನಿ ಗುವಾಹಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಳಲ್ಲಿ ಭಾರತೀಯ ಸೇನಾಪಡೆ, ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜನೆ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ. ಕರ್ಪ್ಯೂ ವಿಧಿಸಿರುವ ನಡುವೆಯೇ ಪ್ರತಿಭಟನೆಗಳು ತೀವ್ರಗೊಂಡಿವೆ. ಸಾವಿರಾರು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸೇನೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಅಸುನೀಗಿದ್ದಾರೆ. ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಅಸ್ಸಾಂ ರಾಜ್ಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದಾಗ 40 ಲಕ್ಷ ಮಂದಿ ಪಟ್ಟಿಯಿಂದ ಹೊರಗೆ ಉಳಿದಿದ್ದರು. ಇದು ತಾರತಮ್ಯದಿಂದ ಕೂಡಿದೆ ಎಂದು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್ ಮೊರೆ ಹೋದರು. ಪರಿಣಾಮ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಎರಡನೇ ಬಾರಿಗೆ ಎನ್.ಸಿ.ಆರ್ ನಡೆಯಿತು. ಈ ಪಟ್ಟಿಯಿಂದಲೂ 19 ಲಕ್ಷ ಹೊರಗುಳಿದರು. ಇಷ್ಟೆಲ್ಲಾ ಆದಾಗಲೂ ಮೌನವಹಿಸಿದ್ದ ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಿ ಕಾಯ್ದೆಯಾಗಿ ರೂಪಿಸುವ ಸಂದರ್ಭದಲ್ಲಿ ಇದರಿಂದ ಕೆರಳಿ ಅಸ್ಸಾಂ ಜನತೆ ಬೀದಿಗೆ ಇಳಿದಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರು, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಭಾಗವಹಿಸಿದ್ದು ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಅಷ್ಟೇ ಅಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ಕಾನೂನುಬಾಹಿರ, ತಾರತಮ್ಯದಿಂದ ಕೂಡಿದೆ. ಧರ್ಮಾಧಾರಿತವಾಗಿದೆ ಎಂದು ಸಂಸತ್ ಒಳಗೂ ಮತ್ತು ಹೊರಗೂ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸತೊಡಗಿದೆ. ಚಳಗಾಲದ ಅಧಿವೇಶನದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಭಾರೀ ಸದ್ದು ಮಾಡಿದ್ದು ಕಲಾಪವನ್ನು ನುಂಗಿ ಹಾಕಿದೆ. .

ಅಸ್ಸಾಂನಲ್ಲಿ ಪರಿಸ್ಥಿಗೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಶಿಲ್ಲಾಂಗ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.  ಕರ್ಪ್ಯೂ ವಿಧಿಸಿರುವ ನಡುವೆಯೇ ರಾತ್ರಿಯೂ ಪ್ರತಿಭಟನೆಗಳು ನಡೆದಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 22ರವರೆಗೆ ರಜೆ ಘೋಷಿಸಿದೆ. ತ್ರಿಪುರ, ಪಶ್ಚಿಮಬಂಗಾಳ ಮೊದಲಾದ ಅಂತರ್ ರಾಜ್ಯಗಳ ರೈಲು ಸೇವೆಯನ್ನು ಸ್ಥಗಿತೊಳಿಸಲಾಗಿದೆ. ವಿಮಾನಯಾನವೂ ಸ್ಥಬ್ದವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ಎಸ್.ಎಂ.ಎಸ್ ಸೇವೆಯವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುವುದು ಮತ್ತು ಶಾಂತಿಯನ್ನು ಕದಡುವುದನ್ನು ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇದು ಅನಿವಾರ್ಯ ಎಂದು ಸರ್ಕಾರ ಹೇಳಿದೆ.

ಮೊನ್ನೆ ತಾನೆ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಅಕ್ಟೋಬರ್ 31, 2014 ರೊಳಗೆ ದೇಶಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಪಾರ್ಸಿ, ಜೈನ, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಉಲ್ಲೇಖಿಸದೇ ಅವರನ್ನು ಪೌರತ್ವದಿಂದ ಹೊರಗಿಡುವ ಪ್ರಯತ್ನ ಸಂವಿಧಾನ ನೀಡುರುವ ಮೂಲಭೂತ ಹಕ್ಕುಗಳಿಗೆ ವಿರುದ್ದವಾಗಿದ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಲೋಕಸಭೆಯಲ್ಲಿ ಹೇಳಿದ್ದು ಇದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ದಕ್ಷಿಣ ರಾಜ್ಯಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಸ್ಸಾಂ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ದಕ್ಷಿಣಕ್ಕೂ ಹಬ್ಬಿದೆ. ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆಗೆ ತನ್ನ ವಿರೋಧ ದಾಖಲಿಸಿದೆ. ಚೆನ್ನೈಸಯಿದಾಪೇಟೆಯಲ್ಲಿ ಯುವ ನೇತಾರ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಆಡಳಿತಾರೂಢ ಎಐಎಡಿಎಂಕೆ ತಮಿಳು ವಿರೋಧಿ, ಅಲ್ಪಸಂಖ್ಯಾತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಇದೇ ವೇಳೆ ಡಿಎಂಕೆ ಮುಖ್ಯಸ್ಥ ಡಿಸೆಂಬರ್ 17ರಮದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರವರು ಕೇರಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲೂ ಪ್ರತಿಭಟನೆಗಳು ಶುರುವಾಗಿವೆ. ಉತ್ತರ ಕರ್ನಾಟಕದ ಕಲಬುರುಗಿಯಲ್ಲಿ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಸಿ.ಆರ್ ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಪ್ರತಿಭಟನೆಗಳು ಇನ್ನಷ್ಟು ತೀವ್ರಗೊಳ್ಳಲಿವೆ ಎಂಬ ಮುನ್ಸೂಚನೆ ದೊರೆತಿದೆ.

ಅಸ್ಸಾಂ ಒಪ್ಪಂದ 1987ರಲ್ಲಿ ಉಲ್ಲೇಖಿಸಿರುವಂತೆ 1971 ಮಾರ್ಚ್‌ 24ರ ಮಧ್ಯರಾತ್ರಿಯೊಳಗೆ ವಲಸೆ ಬಂದಿರುವವರು ಈ ದೇಶದಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ದೇಶಾದ್ಯಂತ ‌ಅನುಸರಿಸಲಾಗುವುದೇ ಎಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಸ್ಪಷ್ಟಪಡಿಸಿಲ್ಲ. ಆದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ನೋಂದಣಿ  ಮತ್ತು ಪೌರತ್ವ ಕಾಯ್ದೆಯನ್ನು ವಿರೋಧಿಸಬೇಕು ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ ಜೆಡಿಯು ತನ್ನ ನಿಲುವನ್ನು ಪರಿಶೀಲಿಸುವಂತೆಯೂ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸಂವಿಧಾನ ವಿರೋಧಿ ಎನ್.ಸಿ.ಆರ್ ಅನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಬಿಜೆಪಿ ಯಾವ ಮಾರ್ಗ ಅಸುಸರಿಸಲಿದೆ ಎಂಬುದನ್ನು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...