Homeಕರ್ನಾಟಕಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

- Advertisement -
- Advertisement -

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ ಮಾಡಿದೆ. ರಾಜಧಾನಿ ಗುವಾಹಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಳಲ್ಲಿ ಭಾರತೀಯ ಸೇನಾಪಡೆ, ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜನೆ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ. ಕರ್ಪ್ಯೂ ವಿಧಿಸಿರುವ ನಡುವೆಯೇ ಪ್ರತಿಭಟನೆಗಳು ತೀವ್ರಗೊಂಡಿವೆ. ಸಾವಿರಾರು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸೇನೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಅಸುನೀಗಿದ್ದಾರೆ. ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಅಸ್ಸಾಂ ರಾಜ್ಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದಾಗ 40 ಲಕ್ಷ ಮಂದಿ ಪಟ್ಟಿಯಿಂದ ಹೊರಗೆ ಉಳಿದಿದ್ದರು. ಇದು ತಾರತಮ್ಯದಿಂದ ಕೂಡಿದೆ ಎಂದು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್ ಮೊರೆ ಹೋದರು. ಪರಿಣಾಮ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಎರಡನೇ ಬಾರಿಗೆ ಎನ್.ಸಿ.ಆರ್ ನಡೆಯಿತು. ಈ ಪಟ್ಟಿಯಿಂದಲೂ 19 ಲಕ್ಷ ಹೊರಗುಳಿದರು. ಇಷ್ಟೆಲ್ಲಾ ಆದಾಗಲೂ ಮೌನವಹಿಸಿದ್ದ ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಿ ಕಾಯ್ದೆಯಾಗಿ ರೂಪಿಸುವ ಸಂದರ್ಭದಲ್ಲಿ ಇದರಿಂದ ಕೆರಳಿ ಅಸ್ಸಾಂ ಜನತೆ ಬೀದಿಗೆ ಇಳಿದಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರು, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಭಾಗವಹಿಸಿದ್ದು ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಅಷ್ಟೇ ಅಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ಕಾನೂನುಬಾಹಿರ, ತಾರತಮ್ಯದಿಂದ ಕೂಡಿದೆ. ಧರ್ಮಾಧಾರಿತವಾಗಿದೆ ಎಂದು ಸಂಸತ್ ಒಳಗೂ ಮತ್ತು ಹೊರಗೂ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸತೊಡಗಿದೆ. ಚಳಗಾಲದ ಅಧಿವೇಶನದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಭಾರೀ ಸದ್ದು ಮಾಡಿದ್ದು ಕಲಾಪವನ್ನು ನುಂಗಿ ಹಾಕಿದೆ. .

ಅಸ್ಸಾಂನಲ್ಲಿ ಪರಿಸ್ಥಿಗೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಶಿಲ್ಲಾಂಗ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.  ಕರ್ಪ್ಯೂ ವಿಧಿಸಿರುವ ನಡುವೆಯೇ ರಾತ್ರಿಯೂ ಪ್ರತಿಭಟನೆಗಳು ನಡೆದಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 22ರವರೆಗೆ ರಜೆ ಘೋಷಿಸಿದೆ. ತ್ರಿಪುರ, ಪಶ್ಚಿಮಬಂಗಾಳ ಮೊದಲಾದ ಅಂತರ್ ರಾಜ್ಯಗಳ ರೈಲು ಸೇವೆಯನ್ನು ಸ್ಥಗಿತೊಳಿಸಲಾಗಿದೆ. ವಿಮಾನಯಾನವೂ ಸ್ಥಬ್ದವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ಎಸ್.ಎಂ.ಎಸ್ ಸೇವೆಯವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುವುದು ಮತ್ತು ಶಾಂತಿಯನ್ನು ಕದಡುವುದನ್ನು ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇದು ಅನಿವಾರ್ಯ ಎಂದು ಸರ್ಕಾರ ಹೇಳಿದೆ.

ಮೊನ್ನೆ ತಾನೆ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಅಕ್ಟೋಬರ್ 31, 2014 ರೊಳಗೆ ದೇಶಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಪಾರ್ಸಿ, ಜೈನ, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಉಲ್ಲೇಖಿಸದೇ ಅವರನ್ನು ಪೌರತ್ವದಿಂದ ಹೊರಗಿಡುವ ಪ್ರಯತ್ನ ಸಂವಿಧಾನ ನೀಡುರುವ ಮೂಲಭೂತ ಹಕ್ಕುಗಳಿಗೆ ವಿರುದ್ದವಾಗಿದ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಲೋಕಸಭೆಯಲ್ಲಿ ಹೇಳಿದ್ದು ಇದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ದಕ್ಷಿಣ ರಾಜ್ಯಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಸ್ಸಾಂ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ದಕ್ಷಿಣಕ್ಕೂ ಹಬ್ಬಿದೆ. ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆಗೆ ತನ್ನ ವಿರೋಧ ದಾಖಲಿಸಿದೆ. ಚೆನ್ನೈಸಯಿದಾಪೇಟೆಯಲ್ಲಿ ಯುವ ನೇತಾರ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಆಡಳಿತಾರೂಢ ಎಐಎಡಿಎಂಕೆ ತಮಿಳು ವಿರೋಧಿ, ಅಲ್ಪಸಂಖ್ಯಾತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಇದೇ ವೇಳೆ ಡಿಎಂಕೆ ಮುಖ್ಯಸ್ಥ ಡಿಸೆಂಬರ್ 17ರಮದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರವರು ಕೇರಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲೂ ಪ್ರತಿಭಟನೆಗಳು ಶುರುವಾಗಿವೆ. ಉತ್ತರ ಕರ್ನಾಟಕದ ಕಲಬುರುಗಿಯಲ್ಲಿ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಸಿ.ಆರ್ ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಪ್ರತಿಭಟನೆಗಳು ಇನ್ನಷ್ಟು ತೀವ್ರಗೊಳ್ಳಲಿವೆ ಎಂಬ ಮುನ್ಸೂಚನೆ ದೊರೆತಿದೆ.

ಅಸ್ಸಾಂ ಒಪ್ಪಂದ 1987ರಲ್ಲಿ ಉಲ್ಲೇಖಿಸಿರುವಂತೆ 1971 ಮಾರ್ಚ್‌ 24ರ ಮಧ್ಯರಾತ್ರಿಯೊಳಗೆ ವಲಸೆ ಬಂದಿರುವವರು ಈ ದೇಶದಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ದೇಶಾದ್ಯಂತ ‌ಅನುಸರಿಸಲಾಗುವುದೇ ಎಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಸ್ಪಷ್ಟಪಡಿಸಿಲ್ಲ. ಆದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ನೋಂದಣಿ  ಮತ್ತು ಪೌರತ್ವ ಕಾಯ್ದೆಯನ್ನು ವಿರೋಧಿಸಬೇಕು ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ ಜೆಡಿಯು ತನ್ನ ನಿಲುವನ್ನು ಪರಿಶೀಲಿಸುವಂತೆಯೂ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸಂವಿಧಾನ ವಿರೋಧಿ ಎನ್.ಸಿ.ಆರ್ ಅನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಬಿಜೆಪಿ ಯಾವ ಮಾರ್ಗ ಅಸುಸರಿಸಲಿದೆ ಎಂಬುದನ್ನು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...