Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....