Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...