Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...