Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...