Homeಕರ್ನಾಟಕಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

- Advertisement -
- Advertisement -

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಪ್ರಧಾನಿ ಹೇಳಿಕೆಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು. ಇದು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಹಿಂದುಳಿದ ಜಾತಿ ಮತ್ತು ಎಸ್‌ಸಿ / ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನ ಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ವಿವರಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತ ವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿಯವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ, ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ, ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿಯವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ಮೋದಿಯವರು ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು, ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...