Homeಕರ್ನಾಟಕಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

- Advertisement -
- Advertisement -

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಪ್ರಧಾನಿ ಹೇಳಿಕೆಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು. ಇದು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಹಿಂದುಳಿದ ಜಾತಿ ಮತ್ತು ಎಸ್‌ಸಿ / ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನ ಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ವಿವರಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತ ವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿಯವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ, ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ, ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿಯವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ಮೋದಿಯವರು ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು, ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...