Homeಮುಖಪುಟನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

ನನ್ನ ಹೇಳಿಕೆ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ: ಕಂಗನಾ ರಣಾವತ್

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅದನ್ನು ಯಾರಾದರೂ ತಪ್ಪೆಂದು ಸಾಬೀತುಪಡಿಸಿದರೆ ಪದ್ಮಶ್ರೀ ವಾಪಸ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

“ಸಂದರ್ಶನದಲ್ಲಿ ಎಲ್ಲವನ್ನು ಸ್ಪಷ್ಟವಾಗಿ ಹೇಳಲಾಗಿದೆ. ಸ್ವಾತಂತ್ರ್ಯಕ್ಕಾಗಿ 1857ರ ಮೊದಲ ಹೋರಾಟದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ… ಜೊತೆಗೆ ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮೀಬಾಯಿ ಮತ್ತು ವೀರ್ ಸಾವರ್ಕರ್ ಜಿ ಅವರಂತಹ ಶ್ರೇಷ್ಠರ ತ್ಯಾಗವನ್ನು ಸ್ಮರಿಸಲಾಗಿದೆ. 1857ರ ಹೋರಾಟ ನನಗೆ ಗೊತ್ತು. ಆದರೆ 1947 ರಲ್ಲಿ ಯಾವ ಯುದ್ಧ ನಡೆಯಿತು ಎಂಬುದು ನನಗೆ ತಿಳಿದಿಲ್ಲ. ಆ ಬಗ್ಗೆ ಯಾರಾದರೂ ನನ್ನ ಅರಿವಿಗೆ ತರಲು ಸಾಧ್ಯವಾದರೆ ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ… ದಯವಿಟ್ಟು ನನಗೆ ಸಹಾಯ ಮಾಡಿ” ಎಂದು ಕಂಗನಾ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ನಾನು ಹುತಾತ್ಮ ರಾಣಿ ಲಕ್ಷ್ಮಿ ಬಾಯಿಯವರ ಕುರಿತ ಚಲನಚಿತ್ರದಲ್ಲಿ ಕೆಲಸ ಮಾಡಿದ್ದೇನೆ… 1857ರ ಸ್ವಾತಂತ್ರ್ಯದ ಮೊದಲ ಹೋರಾಟದ ಬಗ್ಗೆ ವ್ಯಾಪಕವಾಗಿ ಸಂಶೋಧನೆ ಮಾಡಿದ್ದೇನೆ… ರಾಷ್ಟ್ರೀಯತೆಯು ಬಲಪಂಥೀಯವಾದದೊಂದಿಗೆ ಏರಿತು… ಆದರೆ, ಅದು ಏಕೆ ಹಠಾತ್ ಕಾಣೆಯಾಯಿತು? ಭಗತ್ ಸಿಂಗ್ ಸಾಯಲು ಗಾಂಧೀಜಿಯವರು ಏಕೆ ಬಿಟ್ಟರು… ಏಕೆ ನೇತಾಜಿ ಬೋಸ್ ಕೊಲ್ಲಲ್ಪಟ್ಟರು ಮತ್ತು ಅವರಿಗೇಕೆ ಗಾಂಧಿಯವರ ಬೆಂಬಲ ಸಿಗಲಿಲ್ಲ? ಬಿಳಿಯ ವ್ಯಕ್ತಿಯು ದೇಶ ವಿಭಜನೆ ಮಾಡಿದ್ದು ಏಕೆ” ಎಂದು ಪ್ರಶ್ನಿಸಿದ್ದಾರೆ.

“ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ನಾನು 2014ರ ಬಗ್ಗೆ ನಿರ್ದಿಷ್ಟವಾಗಿ ಹೇಳಿದ್ದೇನೆಂದರೆ, “ಭೌತಿಕ ಸ್ವಾತಂತ್ರ್ಯ ಸಿಕ್ಕಿದ್ದರೂ 2014 ರಲ್ಲಿ ಭಾರತದ ಪ್ರಜ್ಞೆ ಮತ್ತು ಆತ್ಮಸಾಕ್ಷಿಯನ್ನು ಮುಕ್ತಗೊಳಿಸಲಾಯಿತು, ಸತ್ತ ನಾಗರಿಕತೆಯು ಜೀವಂತವಾಯಿತು ಮತ್ತು ಈಗ ಅದು ಘರ್ಜಿಸುತ್ತಿದೆ ಮತ್ತು ಎತ್ತರಕ್ಕೆ ಏರುತ್ತಿದೆ… ಮೊದಲ ಬಾರಿಗೆ, ಜನರು ಇಂಗ್ಲಿಷ್ ಬಾರದಿದ್ದಕ್ಕಾಗಿ ಮತ್ತು ಸಣ್ಣ ಪಟ್ಟಣಗಳಿಂದ ಬರುವ ಅಥವಾ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಬಳಸುವುದಕ್ಕಾಗಿ ನಮ್ಮನ್ನು ನಾಚಿಕೆಪಡಿಸಲು ಸಾಧ್ಯವಿಲ್ಲ… ಈ ನಿದರ್ಶನದಲ್ಲಿ ಸ್ಪಷ್ಟವಾಗಿದೆ… ಜೈ ಹಿಂದ್‌” ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

“ಐಎನ್‌ಎಯಿಂದ ಒಂದು ಸಣ್ಣ ಹೋರಾಟ” ಕೂಡ ಭಾರತಕ್ಕೆ ಸ್ವಾತಂತ್ರ್ಯ ಸಿಗುತ್ತಿತ್ತು ಮತ್ತು ಸುಭಾಸ್ ಚಂದ್ರ ಬೋಸ್ ಪ್ರಧಾನಿಯಾಗಬಹುದಿತ್ತು ಎಂದು ಹೇಳಿಕೊಂಡಿರುವ ಅವರು, ಬಲಪಂಥೀಯರು ಹೋರಾಟಿ ಸ್ವಾತಂತ್ರ್ಯ ಪಡೆಯಲು ಸಿದ್ದರಾಗಿದ್ದಾಗಿ ಏಕೆ ಕಾಂಗ್ರೆಸ್ ಭಿಕ್ಷೆಯ ರೀತಿಯಲ್ಲಿ ಸ್ವಾತಂತ್ರ್ಯ ಸ್ವೀಕರಿಸಿತು ಎಂದು ಯಾರಾದರೂ ನನಗೆ ತಿಳಿಸಿ ಎಂದು ಬರೆದುಕೊಂಡಿದ್ದಾರೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು. ಆ ಮೂಲಕ 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಸ್ವತಂತ್ರಗೊಂಡಿದೆ ಎಂಬರ್ಥದಲ್ಲಿ ಕಂಗನಾ ಮಾತನಾಡಿದ್ದರು. ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಲಕ್ಷಾಂತರ ಜನ ಕಂಗನಾ ಹೇಳಿಕೆಯನ್ನು ಖಂಡಿಸಿದ್ದರು.

ಬಾಲಿವುಡ್‌‌ ನಟಿ ಕಂಗನಾ ರಣಾವತ್‌ ‘ಭಾರತದ ಸ್ವಾತಂತ್ಯ್ರ’ದ ಕುರಿತು ನೀಡಿರುವ ಹೇಳಿಕೆಯ ವಿರುದ್ದ ಗುರುವಾರ ಮುಂಬೈನಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಪ್ರೀತಿ ಮೆನನ್ ಅವರು ಈ ದೂರು ದಾಖಲಿಸಿದ್ದು, ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...