Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...