Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...