Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....