Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...