Homeಕರ್ನಾಟಕಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

ಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

- Advertisement -
- Advertisement -

ಬೆಳಗಾವಿ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರದ 11 ಗ್ರಾಮಗಳು ಸೊಲ್ಲಾಪುರ ಜಿಲ್ಲಾಡಳಿತದ ವಿರುದ್ಧ ಸಿಡಿದೆದ್ದಿದ್ದು, ಮೂಲ ಸೌಕರ್ಯ ಒದಗಿಸಿ ಅಥವಾ ಪಕ್ಕದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಅನುಮತಿ ನೀಡಿ ಎಂದು ಈ ಗ್ರಾಮಗಳು ಒತ್ತಾಯಿಸಿವೆ.

ಅಕ್ಕಲಕೋಟ ತಾಲೂಕಿನ ಕಲ್ಲಕರ್ಜಾಲ್, ಕೆಗಾಂವ್, ಶೇಗಾಂವ್, ಕೊರ್ಸೆಗಾಂವ್, ಆಳಗೆ, ಧರಸಂಗ್, ಅಂದೇವಾಡಿ (ಖುರ್ದ್), ಹಿಲ್ಲಿ, ದೇವಿಕಾವಠೆ, ಮಂಗ್ರುಲ್, ಶಾವಾಲ್ ಗ್ರಾಮ ಪಂಚಾಯಿತಿಗಳು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೊಲ್ಲಾಪುರ ಜಿಲ್ಲಾಧಿಕಾರಿಗೆ ಸಲ್ಲಿಸಿವೆ ಎಂದು ‘ಮಿಂಟ್’ ಜಾಲತಾಣ ವರದಿ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅನುಮತಿ ನೀಡುವಂತೆ ಗ್ರಾಮಗಳು ಜಿಲ್ಲಾಡಳಿತವನ್ನು ಕೋರಿವೆ. ಗ್ರಾಮಗಳು ಸಲ್ಲಿಸಿರುವ ಬೇಡಿಕೆಗಳು ಈವರೆಗೂ ಈಡೇರಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

11 ಗ್ರಾಮಗಳಲ್ಲಿ ಒಂದಾದ ಅಳಗಿಯ ಸರಪಂಚ್ ಸಗುಣಾಬಾಯಿ ಹತ್ತೂರೆ ಪ್ರತಿಕ್ರಿಯಿಸಿ, “ಈ ಪ್ರದೇಶಗಳಲ್ಲಿ ಸರಿಯಾದ ರಸ್ತೆ, ವಿದ್ಯುತ್ ಸರಬರಾಜು ಮತ್ತು ನೀರಿನ ಸಂಪರ್ಕ ಇಲ್ಲ” ಎಂದು ‘ಪಿಟಿಐ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ನಮ್ಮ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಿಬ್ಬಂದಿ, ಶಿಕ್ಷಕರು ಗ್ರಾಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂಪರ್ಕ ಕೊರತೆಯಿಂದಾಗಿ ಯುವಕರು ಶಿಕ್ಷಣಕ್ಕಾಗಿ ಹಾಗೂ ಇತರೆ ಕೆಲಸಗಳಿಗಾಗಿ ಹೊರಹೋಗಲು ಪರದಾಡುವಂತಾಗಿದೆ” ಎಂದು ಹತ್ತೂರೆ ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಸರಕಾರ ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಸಲ್ಲಿಸಲು ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಿಲ್ಲಿ ಗ್ರಾಮದ ಮತ್ತೋರ್ವ ಸರಪಂಚ್ ಕೂಡ ಗ್ರಾಮಗಳ ಶೋಚನೀಯ ಸ್ಥಿತಿ ಕುರಿತು ಮಾತನಾಡಿದ್ದಾರೆ. ಸರಪಂಚ್‌ ಅಪ್ಪಾಸಾಹೇಬ ಶಟ್ಗರ್‌‌ ಮಾತನಾಡಿ, “ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ರಸ್ತೆ ಸಂಪರ್ಕ ಹದಗೆಟ್ಟಿದೆ” ಎಂದಿದ್ದಾರೆ.

“ಉಜನಿ ಅಣೆಕಟ್ಟಿನಿಂದ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ನೀರು ಬಿಡುಗಡೆಯಾಗುತ್ತಿದ್ದು, ಸಮರ್ಪಕ ನಿರ್ವಹಣೆ ಮಾಡದ ಕಾರಣ ಕಬ್ಬಿನ ಗದ್ದೆಗಳು, ಮನೆಗಳು ಜಲಾವೃತವಾಗುತ್ತವೆ. ಆದರೆ ಬೇಸಿಗೆಯಲ್ಲಿ ನಮ್ಮ ಪ್ರದೇಶಗಳಿಗೆ ನೀರು ಬಿಡುತ್ತಿಲ್ಲ.ನೀರಿಗಾಗಿ ಸಂಬಂಧಪಟ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಬೇಕಾಗಿದೆ” ಎಂದು ಶಟ್ಗರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

ಶಾಲೆಯ ಮೂಲಸೌಕರ್ಯಗಳು ಅಸಮರ್ಪಕವಾಗಿದೆ ಮತ್ತು ಆರೋಗ್ಯ ವ್ಯವಸ್ಥೆಯು ಸಹ ಸರಿಯಾಗಿಲ್ಲ ಎಂದು ದೂರಿರುವ ಅವರು, “ಕರ್ನಾಟಕದಲ್ಲಿ ಮೋಟಾರು ರಸ್ತೆಗಳು, ಬೀದಿ ದೀಪಗಳು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳು ಲಭ್ಯವಿವೆ” ಎಂದು ತಿಳಿಸಿದ್ದಾರೆ.

“ನಮಗೆ ಕರ್ನಾಟಕದ ಬಗ್ಗೆ ಯಾವುದೇ ಪ್ರೀತಿ ಇಲ್ಲ, ಆದರೆ ನಾವು ಎಷ್ಟು ದಿನ ಈ ಅನ್ಯಾಯವನ್ನು ಎದುರಿಸಲಿ? 75 ವರ್ಷಗಳು ಕಳೆದಿವೆ” ಎಂದು ವಿಷಾದಿಸಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿದರೆ ಪಕ್ಕದ ರಾಜ್ಯವಾದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...