Homeಕರ್ನಾಟಕಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

ಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

- Advertisement -
- Advertisement -

ಬೆಳಗಾವಿ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರದ 11 ಗ್ರಾಮಗಳು ಸೊಲ್ಲಾಪುರ ಜಿಲ್ಲಾಡಳಿತದ ವಿರುದ್ಧ ಸಿಡಿದೆದ್ದಿದ್ದು, ಮೂಲ ಸೌಕರ್ಯ ಒದಗಿಸಿ ಅಥವಾ ಪಕ್ಕದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಅನುಮತಿ ನೀಡಿ ಎಂದು ಈ ಗ್ರಾಮಗಳು ಒತ್ತಾಯಿಸಿವೆ.

ಅಕ್ಕಲಕೋಟ ತಾಲೂಕಿನ ಕಲ್ಲಕರ್ಜಾಲ್, ಕೆಗಾಂವ್, ಶೇಗಾಂವ್, ಕೊರ್ಸೆಗಾಂವ್, ಆಳಗೆ, ಧರಸಂಗ್, ಅಂದೇವಾಡಿ (ಖುರ್ದ್), ಹಿಲ್ಲಿ, ದೇವಿಕಾವಠೆ, ಮಂಗ್ರುಲ್, ಶಾವಾಲ್ ಗ್ರಾಮ ಪಂಚಾಯಿತಿಗಳು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೊಲ್ಲಾಪುರ ಜಿಲ್ಲಾಧಿಕಾರಿಗೆ ಸಲ್ಲಿಸಿವೆ ಎಂದು ‘ಮಿಂಟ್’ ಜಾಲತಾಣ ವರದಿ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅನುಮತಿ ನೀಡುವಂತೆ ಗ್ರಾಮಗಳು ಜಿಲ್ಲಾಡಳಿತವನ್ನು ಕೋರಿವೆ. ಗ್ರಾಮಗಳು ಸಲ್ಲಿಸಿರುವ ಬೇಡಿಕೆಗಳು ಈವರೆಗೂ ಈಡೇರಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

11 ಗ್ರಾಮಗಳಲ್ಲಿ ಒಂದಾದ ಅಳಗಿಯ ಸರಪಂಚ್ ಸಗುಣಾಬಾಯಿ ಹತ್ತೂರೆ ಪ್ರತಿಕ್ರಿಯಿಸಿ, “ಈ ಪ್ರದೇಶಗಳಲ್ಲಿ ಸರಿಯಾದ ರಸ್ತೆ, ವಿದ್ಯುತ್ ಸರಬರಾಜು ಮತ್ತು ನೀರಿನ ಸಂಪರ್ಕ ಇಲ್ಲ” ಎಂದು ‘ಪಿಟಿಐ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ನಮ್ಮ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಿಬ್ಬಂದಿ, ಶಿಕ್ಷಕರು ಗ್ರಾಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂಪರ್ಕ ಕೊರತೆಯಿಂದಾಗಿ ಯುವಕರು ಶಿಕ್ಷಣಕ್ಕಾಗಿ ಹಾಗೂ ಇತರೆ ಕೆಲಸಗಳಿಗಾಗಿ ಹೊರಹೋಗಲು ಪರದಾಡುವಂತಾಗಿದೆ” ಎಂದು ಹತ್ತೂರೆ ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಸರಕಾರ ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಸಲ್ಲಿಸಲು ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಿಲ್ಲಿ ಗ್ರಾಮದ ಮತ್ತೋರ್ವ ಸರಪಂಚ್ ಕೂಡ ಗ್ರಾಮಗಳ ಶೋಚನೀಯ ಸ್ಥಿತಿ ಕುರಿತು ಮಾತನಾಡಿದ್ದಾರೆ. ಸರಪಂಚ್‌ ಅಪ್ಪಾಸಾಹೇಬ ಶಟ್ಗರ್‌‌ ಮಾತನಾಡಿ, “ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ರಸ್ತೆ ಸಂಪರ್ಕ ಹದಗೆಟ್ಟಿದೆ” ಎಂದಿದ್ದಾರೆ.

“ಉಜನಿ ಅಣೆಕಟ್ಟಿನಿಂದ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ನೀರು ಬಿಡುಗಡೆಯಾಗುತ್ತಿದ್ದು, ಸಮರ್ಪಕ ನಿರ್ವಹಣೆ ಮಾಡದ ಕಾರಣ ಕಬ್ಬಿನ ಗದ್ದೆಗಳು, ಮನೆಗಳು ಜಲಾವೃತವಾಗುತ್ತವೆ. ಆದರೆ ಬೇಸಿಗೆಯಲ್ಲಿ ನಮ್ಮ ಪ್ರದೇಶಗಳಿಗೆ ನೀರು ಬಿಡುತ್ತಿಲ್ಲ.ನೀರಿಗಾಗಿ ಸಂಬಂಧಪಟ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಬೇಕಾಗಿದೆ” ಎಂದು ಶಟ್ಗರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

ಶಾಲೆಯ ಮೂಲಸೌಕರ್ಯಗಳು ಅಸಮರ್ಪಕವಾಗಿದೆ ಮತ್ತು ಆರೋಗ್ಯ ವ್ಯವಸ್ಥೆಯು ಸಹ ಸರಿಯಾಗಿಲ್ಲ ಎಂದು ದೂರಿರುವ ಅವರು, “ಕರ್ನಾಟಕದಲ್ಲಿ ಮೋಟಾರು ರಸ್ತೆಗಳು, ಬೀದಿ ದೀಪಗಳು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳು ಲಭ್ಯವಿವೆ” ಎಂದು ತಿಳಿಸಿದ್ದಾರೆ.

“ನಮಗೆ ಕರ್ನಾಟಕದ ಬಗ್ಗೆ ಯಾವುದೇ ಪ್ರೀತಿ ಇಲ್ಲ, ಆದರೆ ನಾವು ಎಷ್ಟು ದಿನ ಈ ಅನ್ಯಾಯವನ್ನು ಎದುರಿಸಲಿ? 75 ವರ್ಷಗಳು ಕಳೆದಿವೆ” ಎಂದು ವಿಷಾದಿಸಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿದರೆ ಪಕ್ಕದ ರಾಜ್ಯವಾದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...