Homeಕರ್ನಾಟಕಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

ಮೂಲಸೌಕರ್ಯ ಒದಗಿಸಿ, ಇಲ್ಲವೇ ಕರ್ನಾಟಕದೊಂದಿಗೆ ವಿಲೀನ ಮಾಡಿ: ಮಹಾರಾಷ್ಟ್ರದ 11 ಗ್ರಾಮಗಳ ಒತ್ತಾಯ

- Advertisement -
- Advertisement -

ಬೆಳಗಾವಿ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರದ 11 ಗ್ರಾಮಗಳು ಸೊಲ್ಲಾಪುರ ಜಿಲ್ಲಾಡಳಿತದ ವಿರುದ್ಧ ಸಿಡಿದೆದ್ದಿದ್ದು, ಮೂಲ ಸೌಕರ್ಯ ಒದಗಿಸಿ ಅಥವಾ ಪಕ್ಕದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಅನುಮತಿ ನೀಡಿ ಎಂದು ಈ ಗ್ರಾಮಗಳು ಒತ್ತಾಯಿಸಿವೆ.

ಅಕ್ಕಲಕೋಟ ತಾಲೂಕಿನ ಕಲ್ಲಕರ್ಜಾಲ್, ಕೆಗಾಂವ್, ಶೇಗಾಂವ್, ಕೊರ್ಸೆಗಾಂವ್, ಆಳಗೆ, ಧರಸಂಗ್, ಅಂದೇವಾಡಿ (ಖುರ್ದ್), ಹಿಲ್ಲಿ, ದೇವಿಕಾವಠೆ, ಮಂಗ್ರುಲ್, ಶಾವಾಲ್ ಗ್ರಾಮ ಪಂಚಾಯಿತಿಗಳು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೊಲ್ಲಾಪುರ ಜಿಲ್ಲಾಧಿಕಾರಿಗೆ ಸಲ್ಲಿಸಿವೆ ಎಂದು ‘ಮಿಂಟ್’ ಜಾಲತಾಣ ವರದಿ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅನುಮತಿ ನೀಡುವಂತೆ ಗ್ರಾಮಗಳು ಜಿಲ್ಲಾಡಳಿತವನ್ನು ಕೋರಿವೆ. ಗ್ರಾಮಗಳು ಸಲ್ಲಿಸಿರುವ ಬೇಡಿಕೆಗಳು ಈವರೆಗೂ ಈಡೇರಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

11 ಗ್ರಾಮಗಳಲ್ಲಿ ಒಂದಾದ ಅಳಗಿಯ ಸರಪಂಚ್ ಸಗುಣಾಬಾಯಿ ಹತ್ತೂರೆ ಪ್ರತಿಕ್ರಿಯಿಸಿ, “ಈ ಪ್ರದೇಶಗಳಲ್ಲಿ ಸರಿಯಾದ ರಸ್ತೆ, ವಿದ್ಯುತ್ ಸರಬರಾಜು ಮತ್ತು ನೀರಿನ ಸಂಪರ್ಕ ಇಲ್ಲ” ಎಂದು ‘ಪಿಟಿಐ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“ನಮ್ಮ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಿಬ್ಬಂದಿ, ಶಿಕ್ಷಕರು ಗ್ರಾಮಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಸಂಪರ್ಕ ಕೊರತೆಯಿಂದಾಗಿ ಯುವಕರು ಶಿಕ್ಷಣಕ್ಕಾಗಿ ಹಾಗೂ ಇತರೆ ಕೆಲಸಗಳಿಗಾಗಿ ಹೊರಹೋಗಲು ಪರದಾಡುವಂತಾಗಿದೆ” ಎಂದು ಹತ್ತೂರೆ ಆರೋಪಿಸಿದ್ದಾರೆ.

ಈ ಗ್ರಾಮಗಳಿಗೆ ಸರಕಾರ ಮೂಲ ಸೌಕರ್ಯ ಕಲ್ಪಿಸಿ ಇಲ್ಲವೇ ಕರ್ನಾಟಕದೊಂದಿಗೆ ವಿಲೀನಗೊಳಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಸಲ್ಲಿಸಲು ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಿಲ್ಲಿ ಗ್ರಾಮದ ಮತ್ತೋರ್ವ ಸರಪಂಚ್ ಕೂಡ ಗ್ರಾಮಗಳ ಶೋಚನೀಯ ಸ್ಥಿತಿ ಕುರಿತು ಮಾತನಾಡಿದ್ದಾರೆ. ಸರಪಂಚ್‌ ಅಪ್ಪಾಸಾಹೇಬ ಶಟ್ಗರ್‌‌ ಮಾತನಾಡಿ, “ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ರಸ್ತೆ ಸಂಪರ್ಕ ಹದಗೆಟ್ಟಿದೆ” ಎಂದಿದ್ದಾರೆ.

“ಉಜನಿ ಅಣೆಕಟ್ಟಿನಿಂದ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ನೀರು ಬಿಡುಗಡೆಯಾಗುತ್ತಿದ್ದು, ಸಮರ್ಪಕ ನಿರ್ವಹಣೆ ಮಾಡದ ಕಾರಣ ಕಬ್ಬಿನ ಗದ್ದೆಗಳು, ಮನೆಗಳು ಜಲಾವೃತವಾಗುತ್ತವೆ. ಆದರೆ ಬೇಸಿಗೆಯಲ್ಲಿ ನಮ್ಮ ಪ್ರದೇಶಗಳಿಗೆ ನೀರು ಬಿಡುತ್ತಿಲ್ಲ.ನೀರಿಗಾಗಿ ಸಂಬಂಧಪಟ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಮೊರೆ ಹೋಗಬೇಕಾಗಿದೆ” ಎಂದು ಶಟ್ಗರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ: ಚಿತ್ರಗಳಲ್ಲಿ ನೋಡಿರಿ

ಶಾಲೆಯ ಮೂಲಸೌಕರ್ಯಗಳು ಅಸಮರ್ಪಕವಾಗಿದೆ ಮತ್ತು ಆರೋಗ್ಯ ವ್ಯವಸ್ಥೆಯು ಸಹ ಸರಿಯಾಗಿಲ್ಲ ಎಂದು ದೂರಿರುವ ಅವರು, “ಕರ್ನಾಟಕದಲ್ಲಿ ಮೋಟಾರು ರಸ್ತೆಗಳು, ಬೀದಿ ದೀಪಗಳು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳು ಲಭ್ಯವಿವೆ” ಎಂದು ತಿಳಿಸಿದ್ದಾರೆ.

“ನಮಗೆ ಕರ್ನಾಟಕದ ಬಗ್ಗೆ ಯಾವುದೇ ಪ್ರೀತಿ ಇಲ್ಲ, ಆದರೆ ನಾವು ಎಷ್ಟು ದಿನ ಈ ಅನ್ಯಾಯವನ್ನು ಎದುರಿಸಲಿ? 75 ವರ್ಷಗಳು ಕಳೆದಿವೆ” ಎಂದು ವಿಷಾದಿಸಿದ್ದಾರೆ.

“ಮಹಾರಾಷ್ಟ್ರ ಸರ್ಕಾರವು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿದರೆ ಪಕ್ಕದ ರಾಜ್ಯವಾದ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...