Homeಕರ್ನಾಟಕಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

ಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

- Advertisement -
- Advertisement -

ಕೋವಿಡ್-19 ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ರಾಜ್ಯ ಸಾರಿಗೆ ನಿಗಮದ ಕುಟುಂಬಗಳಿಗೆ ಕೂಡಲೇ ಪರಿಹಾರಧನ ಬಿಡುಗಡೆಗೊಳಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗ ಕೋವಿಡ್‌ಗೆ ರಾಜ್ಯ ಸಾರಿಗೆ ನಿಗಮದ ಒಟ್ಟು 351 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ಬಗ್ಗೆ ಆರ್,ಟಿ.ಐ ನಿಂದ ಮಾಹಿತಿ ಪಡೆದು, ವೆಲ್ಫೇರ್ ಪಾರ್ಟಿಯು ಆ ಮಾಹಿತಿಯನ್ವಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿಯು ಮನವಿ ಮಾಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವೆಲ್ಫೇರ್ ಪಾರ್ಟಿ, ”ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 80 ಜನ ಸಿಬ್ಬಂದಿಗಳು ಬಲಿಯಾಗಿದ್ದು, ಬಿಎಂಟಿಸಿಯ 110 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 64 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಹಾಗೆಯೇ ಕನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 96 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಈ ಸಂತ್ರಸ್ಥರಲ್ಲಿ ಹಿಂದಿನ ಬಿಜೆಪಿ ಸರಕಾರ ಕೇವಲ ಹನ್ನೊಂದು ಕುಟುಂಬಗಳಿಗೆ ಮಾತ್ರ ಪರಿಹಾರಧನ ನೀಡಿದೆ. ಆಗಿನ ಬಿಜೆಪಿ ಸರಕಾರ ಬಲಿಯಾದ ಪ್ರತೀ ಕುಟುಂಬಗಳಿಗೆ ತಲಾ 30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು” ಎಂದು ಮಾಹಿತಿ ವೆಲ್ಫೇರ್ ಪಾರ್ಟಿ ಮಾಹಿತಿ ಪಡೆದಿದೆ.

”ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿಯ ವತಿಯಿಂದ ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರವನ್ನು ಒತ್ತಾಯಿತ್ತು. ಸಾರಿಗೆ ಸಚಿವರನ್ನು ಕೂಡಾ ಬೇಟಿಯಾಗಿ ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿತ್ತು. ಆದರೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕಿರಲಿಲ್ಲ. ಈ ಬಗ್ಗೆ ಪ್ರಸಕ್ತ ನೂತನ ಸರಕಾರದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ವೆಲ್ಪೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ರ ನೇತೃತ್ವದ ತಂಡವು ಭೇಟಿಯಾಗಿ ಸಮರ್ಪಕ ದಾಖಲೆ ಒದಗಿಸಿ, 340 ಕುಟುಂಬಗಳು ಇನ್ನೂ ಕೂಡಾ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

”ಪರಿಹಾರ ಸಿಗದೇ ಈ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ, ಅವರ ಬದುಕು ಶೋಚನೀಯವಾಗಿದೆ. ಮನೆಯ ಯಜಮಾನನೇ ಈ ಕೋವಿಡ್‌ಗೆ ಬಲಿಯಾಗಿರುವಾಗ ಈ ಕುಟುಂಬದ ಸಂಕಷ್ಟದ ಬಗ್ಗೆ ಗಮನವಿಟ್ಟು ಆಲಿಸಿ ಪರಿಹಾರ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ವೆಲ್ಫೇರ್ ಪಾರ್ಟಿಯ ನಿಯೋಗವು ಇಂದು (ಬುಧವಾರ) ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿದೆ. ನಿಯೋಗದಲ್ಲಿ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾಖಾನ್, ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ಮತ್ತು ಬೆಂಗಳೂರು ನಗರ ಉಪಾಧ್ಯಕ್ಷರಾದ ಎ.ಪ್ರಭಾಕರ್ ಇದ್ದರು.

ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...