Homeಕರ್ನಾಟಕಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

ಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

- Advertisement -
- Advertisement -

ಕೋವಿಡ್-19 ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ರಾಜ್ಯ ಸಾರಿಗೆ ನಿಗಮದ ಕುಟುಂಬಗಳಿಗೆ ಕೂಡಲೇ ಪರಿಹಾರಧನ ಬಿಡುಗಡೆಗೊಳಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗ ಕೋವಿಡ್‌ಗೆ ರಾಜ್ಯ ಸಾರಿಗೆ ನಿಗಮದ ಒಟ್ಟು 351 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ಬಗ್ಗೆ ಆರ್,ಟಿ.ಐ ನಿಂದ ಮಾಹಿತಿ ಪಡೆದು, ವೆಲ್ಫೇರ್ ಪಾರ್ಟಿಯು ಆ ಮಾಹಿತಿಯನ್ವಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿಯು ಮನವಿ ಮಾಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವೆಲ್ಫೇರ್ ಪಾರ್ಟಿ, ”ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 80 ಜನ ಸಿಬ್ಬಂದಿಗಳು ಬಲಿಯಾಗಿದ್ದು, ಬಿಎಂಟಿಸಿಯ 110 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 64 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಹಾಗೆಯೇ ಕನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 96 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಈ ಸಂತ್ರಸ್ಥರಲ್ಲಿ ಹಿಂದಿನ ಬಿಜೆಪಿ ಸರಕಾರ ಕೇವಲ ಹನ್ನೊಂದು ಕುಟುಂಬಗಳಿಗೆ ಮಾತ್ರ ಪರಿಹಾರಧನ ನೀಡಿದೆ. ಆಗಿನ ಬಿಜೆಪಿ ಸರಕಾರ ಬಲಿಯಾದ ಪ್ರತೀ ಕುಟುಂಬಗಳಿಗೆ ತಲಾ 30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು” ಎಂದು ಮಾಹಿತಿ ವೆಲ್ಫೇರ್ ಪಾರ್ಟಿ ಮಾಹಿತಿ ಪಡೆದಿದೆ.

”ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿಯ ವತಿಯಿಂದ ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರವನ್ನು ಒತ್ತಾಯಿತ್ತು. ಸಾರಿಗೆ ಸಚಿವರನ್ನು ಕೂಡಾ ಬೇಟಿಯಾಗಿ ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿತ್ತು. ಆದರೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕಿರಲಿಲ್ಲ. ಈ ಬಗ್ಗೆ ಪ್ರಸಕ್ತ ನೂತನ ಸರಕಾರದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ವೆಲ್ಪೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ರ ನೇತೃತ್ವದ ತಂಡವು ಭೇಟಿಯಾಗಿ ಸಮರ್ಪಕ ದಾಖಲೆ ಒದಗಿಸಿ, 340 ಕುಟುಂಬಗಳು ಇನ್ನೂ ಕೂಡಾ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

”ಪರಿಹಾರ ಸಿಗದೇ ಈ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ, ಅವರ ಬದುಕು ಶೋಚನೀಯವಾಗಿದೆ. ಮನೆಯ ಯಜಮಾನನೇ ಈ ಕೋವಿಡ್‌ಗೆ ಬಲಿಯಾಗಿರುವಾಗ ಈ ಕುಟುಂಬದ ಸಂಕಷ್ಟದ ಬಗ್ಗೆ ಗಮನವಿಟ್ಟು ಆಲಿಸಿ ಪರಿಹಾರ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ವೆಲ್ಫೇರ್ ಪಾರ್ಟಿಯ ನಿಯೋಗವು ಇಂದು (ಬುಧವಾರ) ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿದೆ. ನಿಯೋಗದಲ್ಲಿ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾಖಾನ್, ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ಮತ್ತು ಬೆಂಗಳೂರು ನಗರ ಉಪಾಧ್ಯಕ್ಷರಾದ ಎ.ಪ್ರಭಾಕರ್ ಇದ್ದರು.

ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...