Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...