Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...