Homeಕರ್ನಾಟಕಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅದನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

- Advertisement -
- Advertisement -

ರಾಜ್ಯದಲ್ಲಿರುವ ಲಕ್ಷಾಂತರ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಕಲ್ಪಿಸಲು ಸಮಗ್ರ ಯೋಜನೆ ರೂಪಿಸಿ, ಬಜೆಟ್‌ನಲ್ಲಿ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಒತ್ತಾಯಿಸಿದೆ.

ಜುಲೈ 1 ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಿ ಕೆ ಮಂಜುನಾಥ್ ಮಾತನಾಡಿ, “ರಾಜ್ಯದಲ್ಲಿ ಗುಡಿಸಲು, ಗುಡಾರಗಳಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳಿಗೆ 7 ಲಕ್ಷ ಸಹಾಯಧನದ ಅನುದಾನದಲ್ಲಿ ತುರ್ತಾಗಿ ಮನೆ ನಿರ್ಮಿಸಿಕೊಡಬೇಕು ಮತ್ತು ಈ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದರು.

ಸಂಘದ ರಾಜ್ಯ ಉಪಾಧ್ಯಕ್ಷರಾದ ವೀರೇಶ್‌ರವರು ಮಾತನಾಡಿ, “2011 ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚಿನ ಅಲೆಮಾರಿ ವಾಸವಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಶಾಲೆಯ ಸಮೀಕ್ಷಾ ವರದಿಯಂತೆ ಶೇಕಡ 48% ಅಲೆಮಾರಿ ಕುಟುಂಬಗಳು ವಾಸಕ್ಕೆ ಸ್ವಂತ ನಿವೇಶನ/ಸೂರಿಲ್ಲದೆ ರೈಲ್ವೆ ಟ್ರ್ಯಾಕಿನ ಪಕ್ಕದಲ್ಲಿ, ಊರ ಹೊರಗಿನ ಸ್ಮಶಾನದ ಪಕ್ಕದಲ್ಲಿ, ಪಾಳು ಭೂಮಿಯಲ್ಲಿ ಪ್ರಾಣಿಗಳಿಗಿಂತ ಕಡೆಯಾಗಿ ಬದುಕುತಿದ್ದಾರೆ. 87% ಅಲೆಮಾರಿಗಳು ಇಂದಿಗೂ ತುಂಡು ಭೂಮಿಯ ಒಡೆತನವಿಲ್ಲದೆ (ಕೃಷಿಭೂಮಿ) ಜೀವನ ನಿರ್ವಹಣೆಗೆ ಭಿಕ್ಷಾಟನೆ, ಚಿಂದಿ ಆಯುವ, ವೇಶ ಹಾಕುವ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಈ ಜನಾಂಗದ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗುವಂತಹ ಪ್ರಸ್ತುತ ಇರುವ ಕಾರ್ಯಕ್ರಮಗಳ ಜೊತೆಗೆ ಹೆಚ್ಚುವರಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ರೂಪಿಸಬೇಕೆಂದು” ಮನವಿ ಮಾಡಿದರು.

ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಕಳೆದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಮೀಸಲಿಟ್ಟ 550 ಕೋಟಿ ರೂಪಾಯಿಗಳನ್ನು ಬಳಸದೇ ಹಿಂಪಡೆದು ಅನ್ಯಾಯ ಮಾಡಿದೆ. ಅಲೆಮಾರಿಗಳ ವಸತಿ ಘಟಕವೆಚ್ಚ ಗ್ರಾಮೀಣ ಪ್ರದೇಶಕ್ಕೆ 3.50.ಲಕ್ಷ, ನಗರ ಪ್ರದೇಶಕ್ಕೆ 5.50 ಲಕ್ಷ ಇದ್ದ ವೆಚ್ಚವನ್ನು 2 ಲಕ್ಷಕ್ಕೆ ಬಿಜೆಪಿ ಸರ್ಕಾರ ಇಳಿಸಿದೆ. ನೂತನ ಕಾಂಗ್ರೆಸ್ ಸರ್ಕಾರ ಈ ಹಿಂದಿನಂತೆ ಘಟಕ ವೆಚ್ಚವನ್ನು 7.50 ಲಕ್ಷಕ್ಕೆ ಹೆಚ್ಚಿಸಿ ಅರ್ಜಿ ಸಲ್ಲಿಸಿರುವ ಎಲ್ಲಾ ಅಲೆಮಾರಿಗಳಿಗೆ ವಸತಿ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಜಾತಿ ಪತ್ರದ ಗೊಂದಲಕ್ಕೆ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, ಅಲೆಮಾರಿ ಜಾತಿಗಳ ಪರ್ಯಾಯ ಹೆಸರುಗಳನ್ನು ಗುರುತಿಸಿ ಅಲೆಮಾರಿಗಳಿಗೆ ಜಾತಿಪತ್ರ ನೀಡಬೇಕು. ರಾಜ್ಯ ಸರ್ಕಾರದಿಂದ ಅಲೆಮಾರಿಗಳ ಸ್ಥಿತಿಗತಿಗಳನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಅವರ ಜೀವನಮಟ್ಟವನ್ನು ಸುಧಾರಿಸುವ ಹಾಗು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಹೈ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಶಾಸನ ಬದ್ಧ ಶಾಶ್ವತ ಅಲೆಮಾರಿ ಸಮುದಾಯಗಳ ಆಯೋಗ ರಚನೆ ಮಾಡಬೇಕು ಎಂದರು.

2011 ರ ಜನಗಣತಿಯಂತೆ ರಾಜ್ಯದಲ್ಲಿ ವಾಸವಿರುವ 25 ಲಕ್ಷ ಅಲೆಮಾರಿಗಳಲ್ಲಿ ಶೇಕಡ 87%
ಭೂ ರಹಿತ ಕುಟುಂಬಗಳಿವೆ. ಅವರಿಗೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭೂ ಒಡೆತನ ಯೋಜನೆಯಡಿ ಪ್ರತಿ ಕುಟುಂಬಕ್ಕೆ 2 ಎಕರೆ ಕೃಷಿ ಭೂಮಿಯನ್ನು ಖರೀದಿಸಿಕೊಡಬೇಕು ಇದಕ್ಕೆ ತಗಲುವ ವೆಚ್ಚ 350 ಕೋಟಿ ಅನುದಾನವನ್ನು ಮೊದಲ ಅದ್ಯತೆಯಾಗಿ ಕಾಯ್ದಿರಿಸಬೇಕು. ಹಾಗು ಈ ಜಮೀನುಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.

ಕೃಷಿ ಭೂಮಿ ಹೊಂದಿರುವ ಅಲೆಮಾರಿ ಕುಟುಂಬಗಳಿಗೆ ಕೃಷಿ ಮಾಡಲು ಶೇಕಡ 90 ರ ಸಹಾಯಧನದಲ್ಲಿ ಟ್ರ್ಯಾಕ್ಟರ್ ಹಾಗು ಇತರೆ ಕೃಷಿ ಪರಿಕರಗಳನ್ನು ಖರೀದಿಸಲು ಅನುದಾನ ನೀಡಬೇಕು. ಉದ್ಯಮ ಶೀಲತೆ ಯೋಜನೆಯಡಿ ನೀಡುವ 2 ಲಕ್ಷ ಸಾಲವನ್ನು ಹಿಂದಿನಂತೆ 9 ಲಕ್ಷಕ್ಕೆ ಹೆಚ್ಚಿಸಿ ಸಹಾಯಧನದ ಜೊತೆ ನಿಗಮದಿಂದಲೇ ನೇರವಾಗಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಲಾಯಿತು.

ಅಲೆಮಾರಿ ಮಕ್ಕಳು ವಸತಿ ಶಾಲೆಯಲ್ಲಿ ಪ್ರವೇಶ ಪಡೆಯಲು ಈಗಿರುವ 10 % ಮೀಸಲನ್ನು 20%ಗೆ ಹೆಚ್ಚಿಸಬೇಕು. ಹಾಗು ನವೋದಯ ಶಾಲೆಗಳಲ್ಲೂ ವಿಶೇಷ ಮೀಸಲು ನೀಡಿ ಪ್ರವೇಶ ಕಲ್ಪಿಸಬೇಕು. ಪಿಯುಸಿ ವಿಜ್ಞಾನ ಉತ್ತೀರ್ಣರಾದ ನಂತರ ವೈದ್ಯಕೀಯ, ದಂತವೈದ್ಯ, ಬಿಎಸ್ಸಿ ನರ್ಸಿಂಗ್ ಇಂಜಿನಿಯರ್, ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅವಶ್ಯವಿರುವ ಸಿಇಟಿ, ನೀಟ್ ತರಬೇತಿಯನ್ನು ಪ್ರತಿಷ್ಠಿತ ಕೋಚಿಂಗ್ ಸೆಂಟರ್ ನಲ್ಲಿ ಉಚಿತವಾಗಿ ತರಬೇತಿ ಕೊಡಿಸಬೇಕು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು. ಇದರಲ್ಲಿ ಅಲೆಮಾರಿಗಳಿಗೆ ಹೆಚ್ಚಿನ ಹುದ್ದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಅಲೆಮಾರಿಗಳ ಪಾರಂಪರಿಕ ವಿಶಿಷ್ಟ ಕಲೆಗಳು ಹಾಗೂ ಪಾರಂಪರಿಕ ಔಷಧೀಯ ಜ್ಞಾನವನ್ನು ಮುಂದಿನ ತಲೆಮಾರಿಗೆ ಉಳಿಸಲು ಅಲೆಮಾರಿ ವಿಶ್ವವಿದ್ಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀನಿವಾಸ ಶಿಳ್ಳೇಖ್ಯಾತ, ಕಾಂಗ್ರೆಸ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ ಗೋಪಾಲ್, ಪ್ರೊ. ಚಂದ್ರಕಾಂತರವರು, ಕರ್ನಾಟಕ ರಾಜ್ಯ ಸುಡುಗಾಡುಸಿದ್ದ ಮಹಾಸಂಘದ ರಾಜ್ಯಾಧ್ಯಕ್ಷರಾದ ಸಾಯಿಬಣ್ಣ ಪರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ: ನಾಳೆಯೇ ಮೊದಲ ಜಂಟಿ ಅಧಿವೇಶನ: ಬಿಜೆಪಿಯಲ್ಲಿ ಇನ್ನೂ ಮುಗಿಯದ ವಿಪಕ್ಷ ನಾಯಕನ ಆಯ್ಕೆಯ ಪ್ರಹಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....